ಏರುತ್ತಲೇ ಇದೆ ಕೋವಿಡ್ ಸೋಂಕಿತರ ಸಂಖ್ಯೆ


Team Udayavani, Oct 7, 2020, 1:54 PM IST

ಏರುತ್ತಲೇ ಇದೆ ಕೋವಿಡ್ ಸೋಂಕಿತರ ಸಂಖ್ಯೆ

ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ತಪಾಸಣೆಗೆ ನೋಂದಣಿ ಮಾಡಿಸಲು ಸರದಿ ಸಾಲಿನಲ್ಲಿ ನಿಂತಿರುವ ಸಾರ್ವಜನಿಕರು.

ಹೊಸಕೋಟೆ: ತಾಲೂಕಿನಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತಿದಿನ ಅಂದಾಜು 50ಜನರ ತಪಾಸಣೆಕೈಗೊಳ್ಳಲಾಗುತ್ತಿದೆ. ಇವರಲ್ಲಿ ಅರ್ಧಕ್ಕಿಂತ ಹೆಚ್ಚು ಜನರಲ್ಲಿ ಸೋಂಕು ದೃಢಪಡುತ್ತಿದ್ದು, ಕೆಲವರು ಆಸ್ಪತ್ರೆಗೆ ದಾಖ ಲಾದರೆ ಉಳಿದವರು ಹೋಂ ಕ್ವಾರಂಟೈನ್‌ಗೆಒಳಪಡುತ್ತಿದ್ದಾರೆ.

739 ಪಾಸಿಟಿವ್‌: ಸರ್ಕಾರಿ ಆಸ್ಪತ್ರೆಯಲ್ಲಿ ಅ.3ರ ವರೆಗೂ 4,667 ಜನರ ಗಂಟಲು, ಮೂಗಿನ ದ್ರಾವಣ ಸಂಗ್ರಹಿಸಿದ್ದು 3,923 ಜನರಿಗೆ ನೆಗೆಟಿವ್‌, 739 ಪಾಸಿಟಿವ್‌ ಕಂಡುಬಂದಿದ್ದು 267 ತಪಾಸಣಾ ವರದಿಗಳು ಬಾಕಿಯಿವೆ. ಸರಕಾರಿ ಆಸ್ಪತ್ರೆಯ ಐಸೊಲೇಷನ್‌ ವಾರ್ಡ್‌ನಲ್ಲಿ ಪ್ರಸ್ತುತ 27 ಸೋಂಕಿತರಿದ್ದು, ಇದುವರೆ ದಾಖಲಾಗಿದ್ದ 142 ಸೋಂಕಿತರಲ್ಲಿ 103 ಮಂದಿ ಬಿಡುಗಡೆ ಹೊಂದಿದ್ದು, 12 ಸೋಂಕಿತರನ್ನು ಇತರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಹೋಂ ಕ್ವಾರಂಟೈನ್‌ಗೆ ಒಳಪಡುವವರಿಗೆ 14 ದಿನಗಳಿಗೆ ರೋಗ ನಿರೋಧಕ ಮಾತ್ರೆ17 ದಿನಗಳ ವರೆಗೆ ಹೊರಗಡೆ ಓಡಾಡದಂತೆ ಸೂಚಿಸಲಾಗುತ್ತಿದೆ.  14 ದಿನಗಳ ನಂತರ ಸ್ವತ: ತಪಾಸಣೆ ಕೈಗೊಂಡು ಯಾವುದೇ ರೀತಿಯ ಸಮಸ್ಯೆಗಳು ಕಂಡುಬಂದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲು ತಿಳಿಸಲಾಗಿದೆ. ತಾಂತ್ರಿಕ ಕಾರಣಗಳಿಂದಾಗಿ ತಪಾಸಣೆ ವರದಿ ವಿಳಂಬವಾಗುತ್ತಿದ್ದು, ತಪಾಸಣೆಗೆ ಒಳಗಾದವರು ಸುಮಾರು 5ರಿಂದ 6 ದಿನ ಕಾಯ ಬೇಕಾಗಿದ್ದು,ಇವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದವರಿಗೂ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿವೆ.

10ಕ್ಕೂ ಹೆಚ್ಚು ಮಂದಿ ಮೃತ: ಜನರು ಮಾಸ್ಕ್ ಧರಿಸದೆ ಅನವಶ್ಯಕವಾಗಿ ಓಡಾಡುವುದು,ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು, ಮುಂಜಾಗ್ರತಾ ಕ್ರಮ ಕೈಗೊಳ್ಳುವುದರಲ್ಲಿ ತೀವ್ರ ನಿರ್ಲಕ್ಷ್ಯ ತೋರುತ್ತಿರುವುದು ಸಹ ಸೋಂಕಿನ ಪ್ರಮಾಣ ಹೆಚ್ಚಳಕ್ಕೆ ಕಾರಣ ವಾಗುತ್ತಿದೆ. ಮತ್ತೂಂದೆಡೆ ರೋಗ ಲಕ್ಷಣಗಳು ಕಂಡುಬಂದ ಕೂಡಲೇ ತಪಾಸಣೆ ಮಾಡಿಸಿ ಕೊಳ್ಳದಿರುವುದು ಅನಾಹುತಗಳಿಗೆ ಕಾರಣವಾಗುತ್ತಿದೆ ಎಂದು ಬಹುತೇಕ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಕಳೆದ15 ದಿನಗಳಲ್ಲಿ10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದು ಜನರಲ್ಲಿ ಭೀತಿ ಮೂಡಿಸಿದೆ. ಈಗಲಾದರೂ ಎಚ್ಚೆತ್ತು ಸರಕಾರ ವಿಧಿಸಿರುವ ನಿರ್ಬಂಧಗಳನ್ನು ಪಾಲಿಸಲು ಗಮನಹರಿಸಬೇಕಾಗಿದೆ.

ಎಂವಿಜೆ ಆಸ್ಪತ್ರೆಯಲ್ಲಿ 14 ಐಸಿಯು, 14 ವೆಂಟಿಲೇಟರ್‌ ವಾರ್ಡ್‌ಗಳೊಂದಿಗೆಕ್ವಾರಂಟೈನ್‌ಗೆ ಒಳಪಟ್ಟ 400 ಸೋಂಕಿತರಿಗೆ ಚಿಕಿತ್ಸೆ ನೀಡುವ ಸೌಲಭ್ಯಕಲ್ಪಿಸಲಾಗಿದೆ. ಇದರೊಂದಿಗೆ ತಪಾಸಣೆಗೆ ಒಳಗಾಗಿ ವರದಿಗೆಕಾಯುತ್ತಿರುವ ಜನರಿಗೆ 20 ವಾರ್ಡ್‌ಗಳಿವೆ.ಕನಿಷ್ಠ 10 ದಿನಗಳ ವರೆಗೂ ಸೋಂಕಿತರು ದಾಖಲಾಗಬೇಕಾಗಿದ್ದು, ಆಸ್ಪತ್ರೆ ವತಿಯಿಂದ ಉಚಿತವಾಗಿ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಡಾ.ಧರಣಿ, ಇಒ

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.