ಸ್ವಾತಂತ್ರ್ಯ ದಿನಾಚರಣೆ ಸರಳವಾಗಿ ಆಚರಣೆ: ರವೀಂದ್ರ
Team Udayavani, Aug 5, 2020, 10:10 AM IST
ದೇವನಹಳ್ಳಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಶಂಕು ಸ್ಥಾಪನೆ ಅಂಗವಾಗಿ ತಾಲೂಕಿನಲ್ಲಿ 25 ಸಾವಿರ ಲಾಡು ವಿತರಣೆ ಮಾಡಲಾಗುತ್ತಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಬೊಮ್ಮವಾರ ಸುನೀಲ್ ತಿಳಿಸಿದರು.
ನಗರದ ಬಸವೇಶ್ವರ ಕಲ್ಯಾಣ ಮಂದಿರದಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಶಂಕು ಸ್ಥಾಪನೆ ಅಂಗವಾಗಿ ಲಾಡು ತಯಾರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.ತಾಲೂಕಿನಾದ್ಯಂತ ಆ.5 ರಂದು ಪ್ರತಿ ಜನರಿಗೆ ಸಿಹಿ ಹಂಚಿ ಸಂತಸ ವ್ಯಕ್ತ ಪಡಿಸಲಾಗುತ್ತಿದೆ ಎಂದರು.
ರಾಜ್ಯ ಎಸ್ಸಿ ಮೋರ್ಚಾ ಕಾರ್ಯದರ್ಶಿ ಕೆ.ನಾಗೇಶ್, ಕಟ್ಟ ಕಡೆಯ ಬೂತ್ ಮಟ್ಟದ ಕಾರ್ಯಕರ್ತರಿಂದ ಲಾಡು ಹಂಚಿಕೆಗೆ ಹಣ ವಿನಿಯೋಗಿಸಲಾಗಿದೆ ಎಂದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ಜಿಲ್ಲಾ ಪ್ರ.ಕಾರ್ಯದರ್ಶಿ ಶಿವ ಪ್ರಸಾದ್, ರಮೇಶ್ ಬಾಬು, ರಾಜ್ಯ ಪರಿಷತ್ ಸದಸ್ಯ ದೇಸು ನಾಗರಾಜ್ ಯುವ ಮುಖಂಡ ಸುರೇಶ್, ಭೂ ನ್ಯಾಯ ಮಂಡಳಿ ಸದಸ್ಯ ಸುಜಯ್, ರೈತ ಮೋರ್ಚಾ ಅಧ್ಯಕ್ಷ ರವಿಕುಮಾರ್, ಹಿಂ.ವರ್ಗ ಮೋ ರ್ಚಾ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ, ತಾಲೂಕು ಖಜಾಂಚಿ ಕೇಶವ ಇದ್ದರು.