ನಿರ್ದಿಷ್ಟ ಸ್ಥಳದಲ್ಲಿ ಬಸ್ ನಿಲುಗಡೆಗೆ ಒತ್ತಾಯ


Team Udayavani, Jan 3, 2020, 11:45 AM IST

br-tdy-1

ಹೊಸಕೋಟೆ: ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿರುವ ನಿಲ್ದಾಣದಲ್ಲಿ ನಿರ್ದಿಷ್ಟ ಸ್ಥಳದಲ್ಲಿ ಬಸ್‌ ಗಳು ನಿಲುಗಡೆಯಾಗುತ್ತಿಲ್ಲ. ಪ್ರಯಾಣಿಕರು ನಿತ್ಯ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮಕೈಗೊಂಡು, ನಿರ್ದಿಷ್ಟ ಸ್ಥಳದಲ್ಲಿ ಬಸ್‌ ನಿಲುಗಡೆಯಾಗುವಂತೆ ಮಾಡಬೇಕು ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.

ಪ್ರಯಾಣಿಕರಿಗೆ ತೊಂದರೆ: ಇಲ್ಲಿ ನಿರ್ಮಿಸಲಾಗಿರುವ ತಂಗುದಾಣದಲ್ಲಿ ಬಸ್‌ಗಳು ನಿರ್ದಿಷ್ಟ ಸ್ಥಳದಲ್ಲಿ ನಿಲುಗಡೆಯಾಗುತ್ತಿಲ್ಲ. ಬೆಂಗಳೂರಿನಿಂದ ಕೋಲಾರ, ಚಿಂತಾಮಣಿ, ಮಾಲೂರು ಹಾಗೂ ತಮಿಳುನಾಡು, ಆಂಧ್ರ ಪ್ರದೇಶ ಸೇರಿದಂತೆ ಹೊರ ರಾಜ್ಯಗಳಿಗೆ ಸಂಚರಿಸುವ ರಾಜ್ಯ ರಸ್ತೆ ಸಾರಿಗೆ ಹಾಗೂ ಖಾಸಗಿ ಬಸ್‌ಗಳು ಬೇಕಾಬಿಟ್ಟಿಯಾಗಿ ನಿಲುಗಡೆಯಾಗುತ್ತಿವೆ. ಹೀಗಾಗಿ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಪ್ರಯಾಣಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಒಮ್ಮೊಮ್ಮೆ ಒಟ್ಟಿಗೆ ನಾಲ್ಕೈದು ಬಸ್‌ಗಳು ಬಂದು ಎಲ್ಲಿ ನಿಲುಗಡೆ ಮಾಡುತ್ತಾರೆ ಎಂದು ತಿಳಿಯದೇ ಪ್ರಯಾಣಿಕರು ಗಲಿಬಿಲಿಗೊಳಗಾಗುತ್ತಾರೆ. ಬೆಂಗಳೂರಿಗೆ ಸಂಚರಿಸುವ ಹಾಗೂ ಬೆಂಗಳೂನಿಂದ ಹೊರ ಹೋಗುವ ರಾಜ್ಯ ರಸ್ತೆ ಸಾರಿಗೆ, ಬಿಎಂಟಿಸಿ ಬಸ್‌ಗಳೂ ಇಲ್ಲಿಯೇ ನಿಲುಗಡೆಯಾಗುವು ದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ. ರಾಷ್ಟ್ರೀಯ ಹೆದ್ದಾರಿ 207ರಿಂದ ರಾಷ್ಟ್ರೀಯ ಹೆದ್ದಾರಿ 75ಕ್ಕೆ ಸಂಪರ್ಕಿಸುವ ತಿರುವಿನಲ್ಲಿಯೇ ಬಸ್‌ ನಿಲ್ದಾಣ ವಿದರುವುದರಿಂದ ಇತರೆ ವಾಹನಗಳ ಸಂಚಾರಕ್ಕೂ ಅಡಚಣೆಯಾಗುತ್ತಿದೆ. ಹೀಗಾಗಿ ಮುಂದಿನ ದಿನಗಳ ಹೀಗಾಗದಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.

ಬಳಕೆಯಾಗದ ಬಸ್‌ ಟರ್ಮಿನಲ್‌: ಪಟ್ಟಣದಲ್ಲಿ ಸುಸಜ್ಜಿತ ಬಸ್‌ ನಿಲ್ದಾಣ ಸೌಲಭ್ಯ ಒದಗಿಸಬೇಕೆಂಬ ಉದ್ದೇಶದಿಂದ 2017ರ ಫೆಬ್ರವರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿ, 20 ಕೋಟಿ ರೂ.ಗಳ ವೆಚ್ಚದಲ್ಲಿ 18 ತಿಂಗಳೊಳಗೆ ಪೂರ್ಣಗೊಳ್ಳಬೇಕಾದ ಬಿಎಂಟಿಸಿ ಬಸ್‌ ಟರ್ಮಿನಲ್‌, 2019ರ ಜೂ.15ರಂದು ಉದ್ಘಾಟನೆಗೊಂಡಿದೆ. ಬಸ್‌ ಟರ್ಮಿನಲ್‌ ಕೇವಲ ಬಿಎಂಟಿಸಿ ಬಸ್‌ಗಳಿಗಷ್ಟೇ ಸೀಮಿತಗೊಂಡಿರುವ ಕಾರಣದಿಂದಾಗಿ ಇತರೆ ಬಸ್‌ ಗಳಲ್ಲಿ ಸಂಚರಿಸುವವರು ರಸ್ತೆಯಲ್ಲಿಯೇ ನಿಲ್ಲಬೇಕಾದ್ದು ಅನಿವಾರ್ಯವಾಗಿದೆ. ಬಸ್‌ ಟರ್ಮಿನಲ್‌ನಲ್ಲಿ ಪ್ರಯಾಣಿಕರಿಗೆ ಶೌಚಾಲಯ, ಉಪಹಾರ ಮಂದಿರದಂತಹ ಮೂಲ ಸೌಲಭ್ಯಗಳೂ ಕೊರತೆಯಿಂದಾಗಿ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗುತ್ತಿಲ್ಲ.

ರಸ್ತೆ ದಾಟುವುದಕ್ಕಾಗಿ ಅನುಕೂಲ ಕಲ್ಪಿಸಿ: ರಸ್ತೆ ದಾಟಲು ಅನುವಾಗುವಂತೆ ಸೂಕ್ತವಾದ ಸಂಚಾರ ನಿಯಂತ್ರಣ ದೀಪಗಳನ್ನು ಅಳವಡಿಸಬೇಕು. ಬೆಂಗಳೂರು, ವೈಟ್‌ಫೀಲ್ಡ್‌, ವರ್ತೂರಿಗೆ ಹೆಚ್ಚಾಗಿ ಬಿಎಂಟಿಸಿ ಬಸ್‌ಗಳು ಸಂಚರಿಸುತ್ತಿರುವ ಕಾರಣ ಪ್ರತ್ಯೇಕ ನಿಲುಗಡೆಯ ವ್ಯವಸ್ಥೆ ಮಾಡಬೇಕು. ಇದರಿಂದ ರಸ್ತೆ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವ ವರಿಗೆ ಅನುಕೂಲವಾಗಲಿದೆ. ಈ ಬಗ್ಗೆ ನೂತನ ಶಾಸಕರು ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆಯನ್ನು ಆದ್ಯತೆ ಮೇರೆಗೆ ಈಡೇರಿಸಲು ಗಮನಹರಿಸಬೇಕು ಎಂಬುದು ಬಹುತೇಕ ಪ್ರಯಾಣಿಕರ ಒತ್ತಾಯವಾಗಿದೆ.

ರಸ್ತೆಯಲ್ಲಿ ಹಂಪ್‌ ನಿರ್ಮಿಸಿದರೂ ವಾಹನಗಳು ವೇಗವಾಗಿ ಸಂಚರಿಸುತ್ತಿರುವುದರಿಂದ ವೃದ್ಧರು, ಶಾಲಾ ಮಕ್ಕಳು, ಮಹಿಳೆಯರು ಭೀತಿಯಿಂದಲೇ ರಸ್ತೆ ದಾಟಬೇಕಾಗಿದೆ ಎಂದು ಆರೋಪಿಸಿದ್ದಾರೆ. ಬೇಕಾಬಿಟ್ಟಿ ವಾಹನ ನಿಲುಗಡೆ ನಿಯಂತ್ರಣಕ್ಕೆ

ಈಗಾಗಲೇ ಎರಡೂ ಬದಿಯಲ್ಲಿ ಪೊಲೀಸರನ್ನುನಿಯೋಜಿಸಲಾಗಿದೆ. ಸಂಚಾರ ಸುಗಮಗೊಳ್ಳಲು ಪ್ರಯಾಣಿಕರು ಸಹಕರಿಸಬೇಕು. ನಿರ್ದಿಷ್ಟ ಸ್ಥಳದಲ್ಲಿಯೇ ವಾಹನ ನಿಲುಗಡೆ ಹಾಗೂ ಬಸ್‌ ನಿಲ್ದಾಣದಲ್ಲಿ ಶೌಚಾಲಯದಂತಹ ಅಗತ್ಯ ಸೌಲಭ್ಯ ಒದಗಿಸಲು ಲ್ಯಾನ್ಕೊ ಸಂಸ್ಥೆಗೆ ಸೂಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.