ನಿಗದಿಯಂತೆ ಸಭೆ ನಡೆಸಲು ಒತ್ತಾಯ


Team Udayavani, Jul 14, 2019, 3:00 AM IST

nigadi

ದೊಡ್ಡಬಳ್ಳಾಪುರ: ಕೃಷಿಕ ಸಮಾಜದ ಸಭೆ ನ ಡೆದು 6 ತಿಂಗಳು ಕಳೆದಿದ್ದು, ನಿಗದಿತ 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಬೇಕು ಎಂದು ಕೃಷಿಕ ಸಮಾಜದ ಅಧ್ಯಕ್ಷರು, ನಿರ್ದೇಶಕರು ಒತ್ತಾಯಿಸಿದ್ದಾರೆ.

ನಗರದ ಕೃಷಿ ಇಲಾಖೆಯಲ್ಲಿ ಆಯೋಜಿಸಲಾಗಿದ್ದ ಕೃಷಿಕ ಸಮಾಜದ ಸಭೆಯಲ್ಲಿ, ಕೃಷಿಕ ಸಮಾಜದ ಸಭೆಯನ್ನು 3 ಅಥವಾ 2ತಿಂಗಳಿಗೆ ಕರೆಯುವುದು ನಿಯಮ. ಆದರೆ ಕಳೆದ 6 ತಿಂಗಳಿನಿಂದ ಸಭೆ ಕರೆಯದೆ ಇಲಾಖೆ ಮಾಹಿತಿ ತಿಳಿಯುತ್ತಿಲ್ಲ. ಈ ಕುರಿತು ಅಧಿಕಾರಿಗಳು ಗ ಮನಹರಿಸಬೇಕು ಎಂದು ನಿರ್ದೇಶಕರು ಒತ್ತಾಯಿಸಿದರು.

ತಾಲೂಕು ಸಹಾಯಕ ಕೃಷಿ ನಿರ್ದೇಶಕ ಎಸ್‌.ಪಿ. ನಾರಾಯಣ ಸ್ವಾಮಿ ಮಾತನಾಡಿ, ಸರ್ಕಾರದ ಯೋಜನೆಗಳ ಅನುಷ್ಠಾನದ ಒತ್ತಡ ಹಾಗೂ ಕೃಷಿ ಅಭಿಯಾನ ಕಾರ್ಯಕ್ರಮದ ಹಿನ್ನಲೆಯಲ್ಲಿ ಸಭೆ ಕರೆಯಲಾಗಿರಲಿಲ್ಲ. ಮತ್ತೆ ಈ ರೀತಿ ವಿಳಂಬ ಉಂಟಾಗದಂತೆ ಕ್ರಮಕೈಗೊಂಡು ನಿಗದಿತ ಸಮಯಕ್ಕೆ ಸಭೆ ಕರೆಯಲಾಗುವುದು ಎಂದರು.

ತಾಂತ್ರಿಕ ಅಧಿಕಾರಿ ರೂಪಾ ಮಾತನಾಡಿ, ಫಸಲ್‌ ವಿಮಾ ಯೋಜನೆಯಡಿಯಲ್ಲಿ ರಾಗಿ ಮತ್ತು ಮುಸುಕಿನ ಜೋಳಕ್ಕೆ ವಿಮೆ ತೊಡಗಿಸಲು ಆ.14 ಕಡೆಯ ದಿನಾಂಕ ಹಾಗೂ ಸಾಸಲು ಹೋಬಳಿಯ ವ್ಯಾಪ್ತಿಯಲ್ಲಿ ಮಾತ್ರ ನೆಲಗಡಲೆ ಬೆಳೆಗೆ ವಿಮೆ ಮಾಡಿಸಲು ಅವಕಾಶ ನೀಡಲಾಗಿದೆ. ಜೂ.31 ಕಡೆಯ ದಿನವೆಂದು ಅಧಿಕಾರಿಗಳು ಮಾಹಿತಿ ನೀಡಿದರು.

ನಿರ್ದೇಶಕ ಎಚ್‌.ಎಸ್‌.ಅಶ್ವತ್ಥ ನಾರಾಯಣ ಕುಮಾರ್‌ ಮಾತನಾಡಿ, ಸಭೆಯಲ್ಲಿ ಬಾಡಿಗೆ ಆಧಾರಿತ ಕೃಷಿ ಯಂತ್ರಗಳನ್ನು ಕೇಂದ್ರದಿಂದ ರೈತರ ಜಮೀನಿಗೆ ಕೊಂಡೊಯ್ಯುವ ಬಾಡಿಗೆ ವೆಚ್ಚವನ್ನು ಸರ್ಕಾರವೇ ಭರಿಸಿ ರೈತರಿಗೆ ಉಂಟಾಗುತ್ತಿರುವ ನಷ್ಟವನ್ನು ಭರಿಸಬೇಕು ಎಂದು ಒತ್ತಾಯಿಸಿದರು.

ತೋಟಗಾರಿಕೆ ಇಲಾಖೆಯಿಂದ ಬೆಳೆ ಬೆಳೆಯಲು ಕೃಷಿ ಹೊಂಡ ನಿರ್ಮಾಣಕ್ಕೆ 4 ಲಕ್ಷದವರೆಗೆ ಪ್ರೋತ್ಸಾಹಧನ ವಿತರಣೆ, ಟ್ರಾಕ್ಟರ್‌ ಮತ್ತು ಉಪಕರಣಗಳ ವಿತರಣೆಯಲ್ಲಿ ಜನಪ್ರತಿನಿಧಿಗಳ ಹಸ್ತಕ್ಷೇಪವಿಲ್ಲದೆ ಅರ್ಜಿ ಆಧಾರದ ಮೇಲೆ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸಲು ಅಧಿಕಾರಿಗಳಿಗೆ ಸೂಚನೆ,

ಎಪಿಎಂಸಿ ಆವರಣದಲ್ಲಿ ಕೃಷಿಕ ಸಮಾಜಕ್ಕೆ ಶೇ.50ರಷ್ಟು ರಿಯಾಯಿತಿಯಲ್ಲಿ ನಿವೇಶ‌ನ ನೀಡಬೇಕು. ದೊಡ್ಡಬೆಳವಂಗಲದಲ್ಲಿ ರೈತ ಸಂಪರ್ಕ ಕೇಂದ್ರ ನಿರ್ಮಾಣಕ್ಕೆ ಕಂದಾಯ ಇಲಾಖೆಯಿಂದ ತ್ವರಿತವಾಗಿ ಸರ್ವೇ ಕಾರ್ಯ ಮಾಡಿಸಬೇಕು ಎಂದು ನಿರ್ದೇಶಕರು ಒತ್ತಾಯಿಸಿದರು.

ಕೃಷಿಕ ಸಮಾಜದ ಅಧ್ಯಕ್ಷ ಆಂಜನೇಗೌಡ, ಉಪಾಧ್ಯಕ್ಷ ಜಯರಾಮಯ್ಯ, ಜಿಲ್ಲಾ ಪ್ರತಿನಿಧಿ ನಾಗರಾಜಯ್ಯ, ನಿರ್ದೇಶಕರಾದ ಮುನಿಯಪ್ಪ, ರಾಮಾಂಜಿನಪ್ಪ, ಗೋಪಾಲರೆಡ್ಡಿ, ಕೃಷಿ ಅಧಿಕಾರಿಗಳಾದ ಸಿದ್ದಲಿಂಗಯ್ಯ, ಮಂಜುರಾಣಿ, ಹರೀಶ್‌ ಕುಮಾರ್‌, ಕಿರಣ್‌, ಸಹಾಯಕ ಕೃಷಿ ಅಧಿಕಾರಿ ಕಸ್ತೂರಯ್ಯ, ಲಿಂಗಯ್ಯ, ಪರಶಿವಮೂರ್ತಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.