ಇಂಡೇನ್‌ ಬಾಟ್ಲಿಂಗ್‌ ಪ್ಲಾಂಟ್‌ ಪರಿಶೀಲನೆ


Team Udayavani, May 12, 2020, 12:56 PM IST

indane-planting

ಹೊಸಕೋಟೆ: ತಾಲೂಕಿನ ದೇವನಗುಂದಿಯಲ್ಲಿರುವ ಇಂಡೇನ್‌ ಬಾಟ್ಲಿಂಗ್‌ ಪ್ಲಾಂಟ್‌ನ ಸುರಕ್ಷತಾ ವ್ಯವಸ್ಥೆ ಯನ್ನು ಶಾಸಕ ಶರತ್‌ ಬಚ್ಚೇಗೌಡ ಪರಿಶೀಲಿಸಿದರು. ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಅನಿಲ  ಸೋರಿಕೆಯಿಂದ ಉಂಟಾದ ಅನಾಹುತ ಗಮನದಲ್ಲಿಟ್ಟು ಕೊಂಡು ತಾಲೂಕಿನ ಗ್ರಾಮಸ್ಥರ ರಕ್ಷಣೆಗಾಗಿ ದೇವನ ಗೊಂದಿ ಘಟಕದಲ್ಲಿ ಪಾಲಿಸುತ್ತಿರುವ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಅಲ್ಲದೇ,  ಯಾವುದೇ ಅಹಿತಕರ ಘಟನೆ ಸಂಭವಿಸ ದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕೆಂದರು. ತಾಲೂಕಿನ ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಲ್ಲಿ ಸಣ್ಣ ಪ್ರಮಾಣದ ಸಿಲಿಂಡರ್‌ಗಳಿಗೆ ಅನಿಲ ತುಂಬುವ ಸ್ಥಾವರ ಗಳನ್ನೂ ಪರಿಶೀಲಿಸಿ, ಸೂಕ್ತ ಮುಂಜಾಗ್ರತಾ ಕ್ರಮ ಕೈ  ಗೊಳ್ಳುವಂತೆ ಕಟ್ಟುನಿಟ್ಟಿನ ಆದೇಶ ನೀಡಬೇಕೆಂದರು.

ಘಟಕದ ಪ್ರಧಾನ ವ್ಯವಸ್ಥಾಪಕ ನಬಾ ಕುಮಾರ್‌ ಕೊನಾರ್‌ ಮಾತನಾಡಿ, 2001ರಲ್ಲಿ ಸುಮಾರು 93  ಎಕರೆ ಪ್ರದೇಶದಲ್ಲಿ ಸ್ಥಾವರ ಪ್ರಾರಂಭಗೊಂಡಿದ್ದು ಪ್ರತಿದಿನ 1 ಲಕ್ಷಕ್ಕೂ ಹೆಚ್ಚು ಸಿಲಿಂಡರ್‌ಗಳಿಗೆ ಅನಿಲ ಭರ್ತಿ ಮಾಡುವ ಸಾಮರ್ಥ್ಯ ಹೊಂದಿದೆ. ನಿಗದಿಪಡಿಸಿರುವ ಎಲ್ಲಾ ಸುರ ಕ್ಷತಾ ನಿಯಮ ಕಡ್ಡಾಯವಾಗಿ  ಪಾಲಿಸಲಾಗುತ್ತಿದೆ. ಉಷ್ಣಾಂಶದ ತೀವ್ರತೆ ಪತ್ತೆ ಹಚ್ಚಲು ವಿಶೇಷ ಸ್ವಯಂಚಾಲಿತ ನೀರು ಸಿಂಪಡಿಸುವ ಸಲಕರಣೆ ಅಳವಡಿಸಿಕೊಳ್ಳಲಾಗಿದೆ.

ಪ್ರತಿ 6 ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ  ವಿಪತ್ತು ನಿಯಂತ್ರಣದ ಬಗ್ಗೆ ಅಣುಕು ಪ್ರದರ್ಶನ ನಡೆಸುತ್ತಿದೆ ಎಂದು ಹೇಳಿದರು. ಸಂಸ್ಥೆ ವತಿಯಿಂದ ಉಪಕರಣಗಳ ಸುಸ್ಥಿತಿ ಬಗ್ಗೆ ತಿಂಗಳಿಗೊಮ್ಮೆ ಪರಿಶೀಲನೆ ನಡೆಸಿ ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿ ದರು.

ಸಂಸ್ಥೆಯ ತೈಲ ಸರಬರಾಜು ವಿಭಾಗದ ಪ್ರಧಾನ ವ್ಯವಸ್ಥಾಪಕ ರಾಜೇಂದ್ರಪ್ರಸಾದ್‌, ಜಿಪಂ ಸದಸ್ಯ ಕೆ. ಕೃಷ್ಣ ಮೂರ್ತಿ, ವಾಗಟ ಗ್ರಾಪಂ ಅಧ್ಯಕ್ಷ  ರಾಮಚಂದ್ರ,ಕಾರ್ಖಾನೆ, ಬಾಯ್ಲರ್‌ ಇಲಾಖೆ ಜಿಲ್ಲಾ ಉಪನಿರ್ದೇಶಕ ನರಸಿಂಹಮೂರ್ತಿ, ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಸಿದ್ದೇಗೌಡ ಮತ್ತಿತರರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.