ಉಪ ಚುನಾವಣೆ ನಂತರ ರಾಜಕೀಯ ಚಿತ್ರಣ ಬದಲು


Team Udayavani, Nov 3, 2019, 3:00 AM IST

upachunavane

ಹೊಸಕೋಟೆ: ರಾಜ್ಯದಲ್ಲಿ ಮುಂಬರುವ 15 ಕ್ಷೇತ್ರಗಳ ಉಪ ಚುನಾವಣೆ ನಂತರ ರಾಜಕೀಯ ಚಿತ್ರಣ ಬದಲಾಗಲಿದೆ ಎಂದು ಮಾಜಿ ಸಚಿವ ಸಚಿವ ಕೃಷ್ಣಬೈರೇಗೌಡ ಹೇಳಿದರು. ಸಮೀಪದ ಸಮದ್‌ ಪ್ಯಾಲೇಸ್‌ನಲ್ಲಿ ಏರ್ಪಡಿಸಿದ್ದ ಉಪಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರ ಪಡೆಯಲು ಪಕ್ಷಾಂತರಕ್ಕೆ ಪ್ರೋತ್ಸಾಹ ನೀಡಿದ ಬಿಜೆಪಿಗಷ್ಟೇ ಅಲ್ಲದೆ ರಾಜೀನಾಮೇ ನೀಡಿರುವವರಿಗೂ ಸಹ ಮತದಾರರು ಸೂಕ್ತ ಪಾಠ ಕಲಿಸಲಿದ್ದಾರೆ ಎಂದರು.

ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಉತ್ತರ ಕರ್ನಾಟಕದ ನೆರೆ, ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಲ್ಲಿ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದ್ದು, ಕೇವಲ ಅಧಿಕಾರದಲ್ಲಿ ಉಳಿಯಲು ಕಸರತ್ತು ನಡೆಸುವುದರಲ್ಲಿಯೇ ಕಾಲಹರಣ ಮಾಡಲಾಗುತ್ತಿದೆ. ರಾಜ್ಯದ ಜನತೆಯ ಹಿತ ಕಾಪಾಡುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ. ಮುುಖ್ಯಮಂತ್ರಿ ಯಡಿಯೂರಪ್ಪ ಒಬ್ಬಂಟಿಗರಾಗಿದ್ದು ಕೇಂದ್ರ ಸರಕಾರವಾಗಲೀ ಸಚಿವರಾಗಲೀ ಅಗತ್ಯವಾದ ಸಹಕಾರ ನೀಡುತ್ತಿಲ್ಲ ಎಂದು ಹೇಳಿದರು.

ಎಂಟಿಬಿಗೆ ಪಾಠ ಕಲಿಸಿ: ಕ್ಷೇತ್ರ ಪ್ರತಿನಿಧಿಸಿದ್ದ ಮಾಜಿ ಸಚಿವ ಎಂಟಿಬಿ ನಾಗರಾಜ್‌ ಸಚಿವ ಸ್ಥಾನ, ಅನುದಾನ ಬಿಡುಗಡೆಯಲ್ಲಿ ಪ್ರಾತಿನಿಧ್ಯದಂತಹ ಎಲ್ಲಾ ಸೌಲಭ್ಯಗಳನ್ನು ಪಡೆದು ಸ್ವಾರ್ಥ ಸಾಧನೆಗಾಗಿ ಪಕ್ಷ ತೊರೆದು ಇದೀಗ ಸುಳ್ಳು ಹೇಳಿಕೆ ನೀಡಿ ತಮ್ಮ ನಿರ್ಧಾರ ಸರಿ ಎಂದು ಸಾಬೀತು ಮಾಡಲು ಹರಸಾಹಸ ಮಾಡುತ್ತಿ¤ದ್ದಾರೆ. ಇಂತಹ ವಿಶ್ವಾಸದ್ರೋಹಿಗಳಿಗೆ ಮತದಾರರು ಸಹ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.

ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಚುನಾವಣಾ ಪ್ರಚಾರಕ್ಕೆ ಸೀಮಿತರಾಗದೆ ಪ್ರತಿ ಮತದಾರರನ್ನು ಭೇಟಿ ಮಾಡಿ ಪಕ್ಷದ ಸಂಘಟನೆಗೆ ಶ್ರಮಿಸಿ ಮತದಾರರಿಗೆ ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್‌ದ ಸಾಧನೆಗಳನ್ನು ಮನವರಿಕೆ ಮಾಡಿಕೊಡಬೇಕು. ನ.4ರಂದು ಸಿದ್ದರಾಮಯ್ಯನವರು ಮಂಜೂರು ಮಾಡಿದ್ದ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಮತ್ತೂಮ್ಮೆ ಶಂಕುಸ್ಥಾಪನೆ ನೆರವೇರಿಸುತ್ತಿರುವುದು ಹಾಸ್ಯಾಸ್ಪದ ವ್ಯಂಗ್ಯವಾಡಿದರು.

ಜವಾಬ್ದಾರಿ ಹಂಚಿಕೆ: ಈಗಾಗಲೇ ಬೂತ್‌ ಮಟ್ಟದ ಪದಾಧಿಕಾರಿಗಳ ಸಮಿತಿಯನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾದ್ದು, ಗ್ರಾಮದ ಪ್ರತಿ ಬೂತ್‌ಗೆ ಒಬ್ಬರು, ನಗರ ಪ್ರದೇಶದಲ್ಲಿ ಇಬ್ಬರು ಕಾರ್ಯಕರ್ತರನ್ನು ನೇಮಿಸಿ ತಾಲೂಕಿನ 5 ಹೋಬಳಿಗಳಿಗೂ ಉಸ್ತುವಾರಿಗಳಾಗಿ ಶಾಸಕರುಗಳಿಗೆ ಅಧಿಕಾರ ನೀಡಲಾಗಿದೆ. ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಸ್ತುವಾರಿಗಳ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ಹೆಬ್ಟಾಳ ಶಾಸಕ ಬೈರತಿ ಸುರೇಶ್‌ ಮಾತನಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ವಲಸಿಗರು ಎಂದು ಟೀಕಿಸುವ ಯಾವುದೇ ನೈತಿಕ ಹಕ್ಕು ಎಂಟಿಬಿ ನಾಗರಾಜ್‌ಗಿಲ್ಲ. ಇದೀಗ ತಾಲೂಕಿನಲ್ಲಿ ಬಚ್ಚೇಗೌಡರ ಶ್ರಮಪಟ್ಟು ನಿರ್ಮಿಸಿದ ಮನೆಗೆ ಹಾವಿನಂತೆ ನುಸುಳುತ್ತಿರುವ ಎಂಟಿಬಿ ನಾಗರಾಜ್‌ ಯಾರು ಎಂದು ಪ್ರಶ್ನಿಸಿದರು. ತಮ್ಮ ಹಣ ಬಲದಿಂದ ಮತದಾರರನ್ನು ಕೊಳ್ಳಬಹುದು ಎಂಬ ವಿಶ್ವಾಸವಿರುವ ವ್ಯಕ್ತಿಗಳಿಗೆ ಮತದಾರರು ಸೂಕ್ತ ಪಾಠ ಕಲಿಸಬೇಕು.

ಪೊಲೀಸ್‌ ಇಲಾಖೆ ದುರುಪಯೋಗ ಪಡಿಸಕೊಂಡು ಕಾರ್ಯಕರ್ತರ ವಿರುದ್ಧ ಸುಳ್ಳು ಮೊಕದ್ದಮೆ ಹಾಕಿ ಬೆದರಿಕೆ ಹಾಕಿ ಅವರ ಆತ್ಮಸ್ಥೈರ್ಯ ಕುಗ್ಗಿಸಲು ಪ್ರಯತ್ನಿಸಲಾಗುತ್ತಿದೆ. ಇಂತಹ ಷಡ್ಯಂತ್ರಗಳಿಂದ ವಿಚಲಿತರಾಗದೆ ಕಾರ್ಯಕರ್ತರು ಧೈರ್ಯದಿಂದ ಪಕ್ಷದ ಸಂಘಟನೆಯಲ್ಲಿ ತೊಡಗಬೇಕು ಎಂದರು.

ವೀಕ್ಷಕರಾಗಿ ಆಗಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವಿಷ್ಣುನಾಥನ್‌ ಮಾತನಾಡಿ, ರಾಜ್ಯದಲ್ಲಿ ಹಿಂದೆ ನಡೆದ ಎಲ್ಲಾ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷ ಜಯಗಳಿಸಿದು, ಉತ್ತಮ ಸಾಧನೆ ಮಾಡಿದೆ. ಈಗಲೂ ಸಹ ಅದೇ ಹುಮ್ಮಸ್ಸಿನಿಂದ ಚುನಾವಣೆ ಎದುರಿಸಲಿದೆ ಎಂದರು. ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ, ಮಾಲೂರು ಶಾಸಕ ನಂಜೇಗೌಡ, ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಪದ್ಮಾವತಿ ಸುರೇಶ್‌, ಎಐಸಿಸಿ ಸದಸ್ಯೆ ಕಮಲಾಕ್ಷಿ ರಾಜಣ್ಣ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮುನಿಶಾಮಣ್ಣ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.