ಶೀಘ್ರ ಐಸೋಲೇಷನ್‌ ವಾರ್ಡ್‌ ಕಾರ್ಯಾರಂಭ


Team Udayavani, Jul 28, 2020, 7:54 AM IST

ಶೀಘ್ರ ಐಸೋಲೇಷನ್‌ ವಾರ್ಡ್‌ ಕಾರ್ಯಾರಂಭ

ದೇವನಹಳ್ಳಿ: ಕೋವಿಡ್ ಸೋಂಕು ತಾಲೂಕು ಮತ್ತು ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಸಾರ್ವಜನಿಕ ಆರೋಗ್ಯ ಕೇಂದ್ರ ಪಕ್ಕದ ಕೋವಿಡ್ ಪರೀಕ್ಷಾ ಕೇಂದ್ರದಲ್ಲಿ ನೂತನ ತೀವ್ರ ನಿಗಾ ಘಟಕ, ಐಸೋಲೇಷನ್‌ ವಾರ್ಡ್‌ ಘಟಕ ನಿರ್ಮಾ ಣದ ಕಾಮಗಾರಿ ಭರದಿಂದ ನಡೆಯುತ್ತಿದೆ. ಕೋವಿಡ್ ಪರೀಕ್ಷೆ ಸಕಾಲದಲ್ಲಿ ನಡೆಸಿ ಸೋಂಕಿತರಿಗೆ ಚಿಕಿತ್ಸೆ ನೀಡುವುದು,

ಸೋಂಕಿತ ರಲ್ಲದವರನ್ನು ಕ್ವಾರಂಟೈನ್‌ನಿಂದ ಬಿಡುಗಡೆ ಮಾಡುವುದು ಅನಿವಾರ್ಯ. ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊಸದಾಗಿ ನಿರ್ಮಾಣ ಮಾಡಿ ರುವ ತಾಯಿ ಮಗು ಆಸ್ಪತ್ರೆಯಲ್ಲಿನ 4-6 ಕೊಠಡಿಗಳನ್ನು ಹೈಟೆಕ್‌ ಗಂಟಲು ದ್ರವ ಪರೀಕ್ಷಾ ಕೇಂದ್ರ, 80 ಹಾಸಿಗೆಯುಳ್ಳ ತುರ್ತು ನಿಗಾ ಘಟಕ ಕಾರ್ಯಾರಂಭಕ್ಕೆ ಸಿದ್ಧತೆ ನಡೆ ಯುತ್ತಿದೆ. ಈ ಮೂಲಕ ಒಂದು ವಾರದೊಳ ಗಾಗಿ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ತೀವ್ರ ನಿಗಾ ಘಟಕ ಮತ್ತು ಐಸೋ ಲೇಷನ್‌ ವಾರ್ಡ್‌ಗಳು ಜಿಲ್ಲೆ ಮತ್ತು ತಾಲೂಕಿನಲ್ಲಿ ಅತ್ಯವಶ್ಯಕ. ಕೋವಿಡ್ ಪಾಸಿಟಿವ್‌ ಪ್ರಕರಣ ಗಳಿಗೆ ಚಿಕಿತ್ಸೆ ನೀಡಲು ಸಹಕಾರಿ. ಕಳೆದ ಜೂನ್‌ನಲ್ಲಿ ಗಂಟಲು ದ್ರವ ಪರೀಕ್ಷೆಗಳ ವರದಿ ಬೆಂಗಳೂರಿಗೆ ಕಳುಹಿಸಿದರೂ ಸಾವಿರಾರು ಸೋಂಕಿತ ಜನರ ಪರೀಕ್ಷೆ ನಡೆಸುವುದು ಸವಾಲಾಗಿತ್ತು. ಇದನ್ನು ಮನ ಗಂಡ ಸರ್ಕಾರ ಕೇಂದ್ರ ವಿಪತ್ತು ನಿರ್ವಹಣಾ ಯೋಜನೆಯಡಿ ದೇವನಹಳ್ಳಿಯಲ್ಲಿ 10 ತುರ್ತು ನಿಗಾ ಘಟಕದ ಬೆಡ್‌ಗಳ ಜತೆಗೆ ಪ್ರತಿ ಬೆಡ್‌ಗೆ ಒಂದೊಂದು ವೆಂಟಿಲೇಟರ್‌ ಉಳ್ಳ ಹೈಟೆಕ್‌ ಕೇಂದ್ರ ಮತ್ತು 60 ಹಾಸಿಗೆಗಳ ಸುಸಜ್ಜಿತ ಚಿಕಿತ್ಸಾ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಸ್ತುತ ಪ್ರತ್ಯೇಕಿತ ಗಂಟಲು ದ್ರವ ಪಡೆ ಯಲು ಕೊಠಡಿ ವ್ಯವಸ್ಥೆಯ ಸಿದ್ಧತೆ ನಡೆದಿದೆ. ಕೋವಿಡ್ ಆಸ್ಪತ್ರೆ ಪ್ರಾರಂಭವಾಗುತ್ತಿರುವುದರಿಂದ ತ್ವರಿತವಾಗಿ ಗಂಟಲು ದ್ರವ ಪರೀಕ್ಷೆ ನಡೆಸಿ, ಗರಿಷ್ಠ ಮೂರು ತಾಸಿನಲ್ಲಿ ಸ್ಥಳದಲ್ಲಿಯೇ ವರದಿ ಸಿಗುವುದರಿಂದ ಸೋಂಕಿತರಿಗೆ ತ್ವರಿತ ಚಿಕಿತ್ಸೆ, ನೆಗೆಟಿವ್‌ ಬಂದಂ ತಹವರಿಗೆ ಕ್ವಾರಂಟೈನ್‌ನಿಂದ ಬಿಡುಗಡೆ ಮಾಡಲು ಹೆಚ್ಚಿನ ಅನುಕೂಲವಾಗಲಿದೆ ಎಂದು ಆರೋಗ್ಯಾಧಿಕಾರಿಗಳು ಹೇಳುತ್ತಾರೆ.

ಇತ್ತೀಚಿನ ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಪರೀಕ್ಷಾ ವರದಿ ಕೈಸೇರುತ್ತಿರುವುದು ತಡವಾಗುತ್ತಿದೆ. ಅದಕ್ಕಾಗಿ ಕೋವಿಡ್ ಸೋಂಕಿತರಿಗಾಗಿ ಪರೀಕ್ಷಾ ಘಟಕ ಪ್ರಾರಂಭಿಸಲಾಗುತ್ತಿದೆ. ಡಾ.ಮಂಜುಳಾದೇವಿ, ಜಿಲ್ಲಾ ಆರೋಗ್ಯಾಧಿಕಾರಿ

ಸಕಾಲದಲ್ಲಿ ಸೋಂಕು ಪರೀಕ್ಷೆ ನಡೆಸಿ, ಚಿಕಿತ್ಸೆ ನೀಡುವುದು. ಸೋಂಕಿತರಲ್ಲದವರನ್ನು ಕ್ವಾರಂಟೈನ್‌ ನಿಂದ ಬಿಡುಗಡೆಗೊಳಿಸಬೇಕು. ಸೋಂಕಿನ ಪರೀಕ್ಷಾ ಘಟಕ ಪ್ರಾರಂಭಿಸುತ್ತಿರುವುದು ಉತ್ತಮ ಕಾರ್ಯ.   ಎಚ್‌.ಕೆ.ವೆಂಕಟೇಶಪ್ಪ, ಜಿಲ್ಲಾ ಡಿಎಸ್‌ಎಸ್‌ ಕಾರ್ಯಕಾರಿ ಸಮಿತಿ ಸದಸ್ಯ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.