ಕೇಳುವವರಿಲ್ಲ ಸೋಂಕಿತೆ ಕುಟುಂಬದವರ ಕಷ್ಟ‌


Team Udayavani, May 29, 2020, 7:13 AM IST

keluvvarilla

ನೆಲಮಂಗಲ: ಕೋವಿಡ್‌ 19ಗೆ ಬಲಿಯಾದ ರೈತ ಮಹಿಳೆ ಕುಟುಂಬದವರು ಹಾಗೂ ಸಂಪರ್ಕಿತರನ್ನು ಕ್ವಾರಂಟೈನ್‌ ಮಾಡಿದ್ದು, ಮನೆಯಲ್ಲಿರುವ ಜಾನುವಾರು, ಹುಲ್ಲು-ಮೇವು ನೀರಿಲ್ಲದೇ ಅನಾಥವಾಗಿವೆ. ಜತೆಗೆ ಕೋವಿಡ್‌ 19  ಆತಂಕದಿಂದ ಡೇರಿಯಲ್ಲಿ ಹಾಲು ನಿಷೇಧಿಸಲಾಗಿದೆ.

ತಾಲೂಕಿನ ವೀರಸಾಗರದ ಮಹಿಳೆಗೆ ಮೇ.22ರಂದು ಕೋವಿಡ್‌ 19 ದೃಢವಾಗುತ್ತಿದ್ದಂತೆ ಸಂಪರ್ಕದಲ್ಲಿದ್ದ ಕುಟುಂಬದ 12 ಜನರನ್ನುಕ್ವಾರಂಟೈನ್‌ ಮಾಡಿ, 4 ಮನೆಗಳನ್ನು ಲಾಕ್‌ ಮಾಡಲಾಗಿದೆ. ಹೀಗಾಗಿ ಮನೆಯಲ್ಲಿರುವ 12ಕ್ಕೂ ಹೆಚ್ಚು ಹಸು, 10 ಮೇಕೆಗಳನ್ನು ನೋಡಿಕೊಳ್ಳುವವರಿಲ್ಲದಂತಾಗಿದ್ದು, ರೋಧನೆ ಮನಕಲಕುವಂತಿದೆ.

ನಿತ್ಯ 60 ಲೀ. ಹಾಲು ಮಣ್ಣುಪಾಲು: ಸೋಂಕಿತೆ ಮನೆಯವರು ಪ್ರತಿದಿನ 60ಕ್ಕೂ  ಹೆಚ್ಚು ಲೀ. ಹಾಲನ್ನು ವೀರಸಾಗರದ ಹಾಲಿನ ಡೇರಿಗೆ ಸರಬರಾಜು ಮಾಡುತ್ತಿದ್ದರು. ಆದರೆ ಈಗ ಬಮೂಲ್‌ ಅಧಿಕಾರಿಗಳು, ನಿರ್ದೇಶಕರು ಹಾಲು ಪಡೆಯದಂತೆ ಡೇರಿ ಸಿಬ್ಬಂದಿಗೆ ತಿಳಿಸಿದ್ದಾರೆ. ಹೀಗಾಗಿ ನಿತ್ಯ 60 ಲೀಟರ್‌ ಹಾಲು  ಮಣ್ಣಿಗೆ ಸುರಿಯಲಾಗುತ್ತಿದೆ.

ಮನೆ ಬಳಿ ಹೋಗದ ಜನರು: ಗ್ರಾಮದ ಜನರು ಮನೆ ಹಾಗೂ ತೋಟದ ಬಳಿ ಹೋಗಲು ಭಯಪಟ್ಟು ಪ್ರಾಣಿಗಳಿಗೆ ಹಲ್ಲು ಹಾಕಲು ಹೋಗುತ್ತಿಲ್ಲ. ಹಸುಗಳ ರೋಧನೆ ತಾಳಲಾರ ದೆ ಗ್ರಾಮದ ವ್ಯಕ್ತಿಯೊಬ್ಬರು ದಿನಕ್ಕೆ ಒಂದು ಬಾರಿ ನೀರು  ಕುಡಿಸಿ ಹಾಲು ಕರೆಯುತ್ತಿದ್ದರು. ಈಗ ಅವರು ಕೂಡ ಮೇವು, ನೀರು ಕುಡಿಸುವುದನ್ನು ನಿಲ್ಲಿಸಿದ್ದಾರೆ.

ಔಷಧ ನೀಡಿಲ್ಲ: ಸೋಂಕಿತೆಯ ಸಂಪರ್ಕದಲ್ಲಿದ್ದ ಆಟೋ ಚಾಲಕನನ್ನು ಸಿದ್ದಾರ್ಥ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ ಮಾಡಲಾಗಿದ್ದು, ಆತನಿಗೆ ಮೆದುಳಿನ ನರದಲ್ಲಿ ರಕ್ತ ಸರಬರಾಜಿನ ಸಮಸ್ಯೆ ಎದುರಾಗಿದೆ. ದಿನಕ್ಕೆ ಎರಡು ಬಾರಿ  ಮಾತ್ರೆ ತೆಗೆದುಕೊಂಡು ಬಿಸಿ ನೀರು ಕುಡಿಯಲು ಸೂಚಿಸಲಾಗಿದೆ. ಆದರೆ ಕ್ವಾರಂಟೈನ್‌ ಕೇಂದ್ರದಲ್ಲಿ ಮಾತ್ರೆ ಹಾಗೂ ಬಿಸಿ ನೀರು ನೀಡುತ್ತಿಲ್ಲ. ನನಗೆ ಮಾನಸಿಕ ಹಿಂಸೆಯಂತಾಗುತ್ತಿದೆ.

ತಕ್ಷಣ ವ್ಯವಸ್ಥೆ ಮಾಡಿ ಎಂದು ಮನವಿ  ಮಾಡಿದರು. ಸೋಂಕಿತರ ಮನೆಗೆ ಅಧಿಕಾರಿಗಳನ್ನು ಕಳುಹಿಸಿ ಪರಿಶೀಲನೆ ಮಾಡುತ್ತೇವೆ. ಹಾಲು ಹಾಕಿಸಿಕೊಳ್ಳಲು ಬಮೂಲ್‌ ಅಧಿಕಾರಿ ಗಳ ಜತೆ ಮಾತನಾಡಲಾಗುತ್ತದೆ. ಕ್ವಾರಂಟೈನ್‌ ಇರುವ ವ್ಯಕ್ತಿಗೆ ಔಷಧಿ ಸರಬರಾಜು  ಮಾಡಲಾಗುತ್ತದೆ ಎಂದು ತಹಶೀಲ್ದಾರ್‌ ಶ್ರೀನಿವಾಸ್‌ ಹೇಳಿದರು.

ಕಣ್ಣೀರು ಹಾಕಿದ ಕುಟುಂಬ: ತಾಯಿಯನ್ನು ಕಳೆದುಕೊಂಡು ಸರಕಾರದ ಆದೇಶ ಹಾಗೂ ಜನರ ಹಿತದೃಷ್ಟಿಯಿಂದ ಕ್ವಾರಂಟೈನ್‌ನಲ್ಲಿ ಜೀವನ ಮಾಡುತಿದ್ದೇವೆ. ಮನೆಯಲ್ಲಿ ಪ್ರಾಣಿಗಳಿಗೆ ವ್ಯವಸ್ಥೆಗೂ ಬಿಡದೆ, ಅಧಿಕಾರಿಗಳು  ಕರೆದುಕೊಂಡು ಬಂದರು. ಈಗ ಹಸುಗಳಿಗೆ ಆಹಾರವಿಲ್ಲದಿರುವುದು ಕೇಳಿ ದುಃಖವಾಗುತ್ತಿದೆ. ಹಾಲು ಕರೆಯದಿದ್ದರೆ ಹಸುಗಳ ಸಾವು ನಿಶ್ಚಿತ, ಇಬ್ಬರನ್ನಾದರೂ ಮನೆಗೆ ಕಳುಹಿಸಿ ಎಂದು ಕುಟುಂಬದ ಸದಸ್ಯರು ಕಣ್ಣೀರು ಹಾಕಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.