ಕೇಳುವವರಿಲ್ಲ ಸೋಂಕಿತೆ ಕುಟುಂಬದವರ ಕಷ್ಟ‌


Team Udayavani, May 29, 2020, 7:13 AM IST

keluvvarilla

ನೆಲಮಂಗಲ: ಕೋವಿಡ್‌ 19ಗೆ ಬಲಿಯಾದ ರೈತ ಮಹಿಳೆ ಕುಟುಂಬದವರು ಹಾಗೂ ಸಂಪರ್ಕಿತರನ್ನು ಕ್ವಾರಂಟೈನ್‌ ಮಾಡಿದ್ದು, ಮನೆಯಲ್ಲಿರುವ ಜಾನುವಾರು, ಹುಲ್ಲು-ಮೇವು ನೀರಿಲ್ಲದೇ ಅನಾಥವಾಗಿವೆ. ಜತೆಗೆ ಕೋವಿಡ್‌ 19  ಆತಂಕದಿಂದ ಡೇರಿಯಲ್ಲಿ ಹಾಲು ನಿಷೇಧಿಸಲಾಗಿದೆ.

ತಾಲೂಕಿನ ವೀರಸಾಗರದ ಮಹಿಳೆಗೆ ಮೇ.22ರಂದು ಕೋವಿಡ್‌ 19 ದೃಢವಾಗುತ್ತಿದ್ದಂತೆ ಸಂಪರ್ಕದಲ್ಲಿದ್ದ ಕುಟುಂಬದ 12 ಜನರನ್ನುಕ್ವಾರಂಟೈನ್‌ ಮಾಡಿ, 4 ಮನೆಗಳನ್ನು ಲಾಕ್‌ ಮಾಡಲಾಗಿದೆ. ಹೀಗಾಗಿ ಮನೆಯಲ್ಲಿರುವ 12ಕ್ಕೂ ಹೆಚ್ಚು ಹಸು, 10 ಮೇಕೆಗಳನ್ನು ನೋಡಿಕೊಳ್ಳುವವರಿಲ್ಲದಂತಾಗಿದ್ದು, ರೋಧನೆ ಮನಕಲಕುವಂತಿದೆ.

ನಿತ್ಯ 60 ಲೀ. ಹಾಲು ಮಣ್ಣುಪಾಲು: ಸೋಂಕಿತೆ ಮನೆಯವರು ಪ್ರತಿದಿನ 60ಕ್ಕೂ  ಹೆಚ್ಚು ಲೀ. ಹಾಲನ್ನು ವೀರಸಾಗರದ ಹಾಲಿನ ಡೇರಿಗೆ ಸರಬರಾಜು ಮಾಡುತ್ತಿದ್ದರು. ಆದರೆ ಈಗ ಬಮೂಲ್‌ ಅಧಿಕಾರಿಗಳು, ನಿರ್ದೇಶಕರು ಹಾಲು ಪಡೆಯದಂತೆ ಡೇರಿ ಸಿಬ್ಬಂದಿಗೆ ತಿಳಿಸಿದ್ದಾರೆ. ಹೀಗಾಗಿ ನಿತ್ಯ 60 ಲೀಟರ್‌ ಹಾಲು  ಮಣ್ಣಿಗೆ ಸುರಿಯಲಾಗುತ್ತಿದೆ.

ಮನೆ ಬಳಿ ಹೋಗದ ಜನರು: ಗ್ರಾಮದ ಜನರು ಮನೆ ಹಾಗೂ ತೋಟದ ಬಳಿ ಹೋಗಲು ಭಯಪಟ್ಟು ಪ್ರಾಣಿಗಳಿಗೆ ಹಲ್ಲು ಹಾಕಲು ಹೋಗುತ್ತಿಲ್ಲ. ಹಸುಗಳ ರೋಧನೆ ತಾಳಲಾರ ದೆ ಗ್ರಾಮದ ವ್ಯಕ್ತಿಯೊಬ್ಬರು ದಿನಕ್ಕೆ ಒಂದು ಬಾರಿ ನೀರು  ಕುಡಿಸಿ ಹಾಲು ಕರೆಯುತ್ತಿದ್ದರು. ಈಗ ಅವರು ಕೂಡ ಮೇವು, ನೀರು ಕುಡಿಸುವುದನ್ನು ನಿಲ್ಲಿಸಿದ್ದಾರೆ.

ಔಷಧ ನೀಡಿಲ್ಲ: ಸೋಂಕಿತೆಯ ಸಂಪರ್ಕದಲ್ಲಿದ್ದ ಆಟೋ ಚಾಲಕನನ್ನು ಸಿದ್ದಾರ್ಥ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ ಮಾಡಲಾಗಿದ್ದು, ಆತನಿಗೆ ಮೆದುಳಿನ ನರದಲ್ಲಿ ರಕ್ತ ಸರಬರಾಜಿನ ಸಮಸ್ಯೆ ಎದುರಾಗಿದೆ. ದಿನಕ್ಕೆ ಎರಡು ಬಾರಿ  ಮಾತ್ರೆ ತೆಗೆದುಕೊಂಡು ಬಿಸಿ ನೀರು ಕುಡಿಯಲು ಸೂಚಿಸಲಾಗಿದೆ. ಆದರೆ ಕ್ವಾರಂಟೈನ್‌ ಕೇಂದ್ರದಲ್ಲಿ ಮಾತ್ರೆ ಹಾಗೂ ಬಿಸಿ ನೀರು ನೀಡುತ್ತಿಲ್ಲ. ನನಗೆ ಮಾನಸಿಕ ಹಿಂಸೆಯಂತಾಗುತ್ತಿದೆ.

ತಕ್ಷಣ ವ್ಯವಸ್ಥೆ ಮಾಡಿ ಎಂದು ಮನವಿ  ಮಾಡಿದರು. ಸೋಂಕಿತರ ಮನೆಗೆ ಅಧಿಕಾರಿಗಳನ್ನು ಕಳುಹಿಸಿ ಪರಿಶೀಲನೆ ಮಾಡುತ್ತೇವೆ. ಹಾಲು ಹಾಕಿಸಿಕೊಳ್ಳಲು ಬಮೂಲ್‌ ಅಧಿಕಾರಿ ಗಳ ಜತೆ ಮಾತನಾಡಲಾಗುತ್ತದೆ. ಕ್ವಾರಂಟೈನ್‌ ಇರುವ ವ್ಯಕ್ತಿಗೆ ಔಷಧಿ ಸರಬರಾಜು  ಮಾಡಲಾಗುತ್ತದೆ ಎಂದು ತಹಶೀಲ್ದಾರ್‌ ಶ್ರೀನಿವಾಸ್‌ ಹೇಳಿದರು.

ಕಣ್ಣೀರು ಹಾಕಿದ ಕುಟುಂಬ: ತಾಯಿಯನ್ನು ಕಳೆದುಕೊಂಡು ಸರಕಾರದ ಆದೇಶ ಹಾಗೂ ಜನರ ಹಿತದೃಷ್ಟಿಯಿಂದ ಕ್ವಾರಂಟೈನ್‌ನಲ್ಲಿ ಜೀವನ ಮಾಡುತಿದ್ದೇವೆ. ಮನೆಯಲ್ಲಿ ಪ್ರಾಣಿಗಳಿಗೆ ವ್ಯವಸ್ಥೆಗೂ ಬಿಡದೆ, ಅಧಿಕಾರಿಗಳು  ಕರೆದುಕೊಂಡು ಬಂದರು. ಈಗ ಹಸುಗಳಿಗೆ ಆಹಾರವಿಲ್ಲದಿರುವುದು ಕೇಳಿ ದುಃಖವಾಗುತ್ತಿದೆ. ಹಾಲು ಕರೆಯದಿದ್ದರೆ ಹಸುಗಳ ಸಾವು ನಿಶ್ಚಿತ, ಇಬ್ಬರನ್ನಾದರೂ ಮನೆಗೆ ಕಳುಹಿಸಿ ಎಂದು ಕುಟುಂಬದ ಸದಸ್ಯರು ಕಣ್ಣೀರು ಹಾಕಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.