ಹಲಸು: ಲಾಭದ ನಿರೀಕ್ಷೆಯಲ್ಲಿ ರೈತರು


Team Udayavani, May 16, 2023, 2:40 PM IST

tdy-11

ದೊಡ್ಡಬಳ್ಳಾಪುರ: ಹಲಸಿನ ಸೀಸನ್‌ ಆರಂಭವಾಗಿದೆ. ತಾಲೂಕಿನಲ್ಲಿ ಈ ಬಾರಿ ಉತ್ತಮ ಫಸಲು ಬರುತ್ತಿದ್ದು, ಹಲಸು ಮಾರಾಟಗಾರರು ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದಾರೆ.

ಹಸಿದು ಹಲಸು ತಿನ್ನು ಉಂಡು ಮಾವು ತಿನ್ನು ಎಂಬ ಮಾತಿನಂತೆ ಹಲಸು ಹಾಗೂ ಮಾವಿನ ಸೀಸನ್‌ ಶುರುವಾಗಿದ್ದು, ರಸ್ತೆ ಬದಿಯಲ್ಲಿ ಹಲಸು ಹಣ್ಣುಗಳ ಮಾರಾಟ ನಡೆಯುತ್ತಿದೆ. ಆದರೆ ಈ ಬಾರಿ ಮಾವು ತೀರಾ ಕಡಿಮೆಯಾಗುವ ಲಕ್ಷಣ ಗಳಿವೆ. ತಾಲೂಕಿನಲ್ಲಿ ಈ ಬಾರಿ ಮಳೆಯಾಗಿರು ವುದರಿಂದ ಹಲಸು ಇಳುವರಿಗೆ ಸಹಾಯಕವಾಗಿ ಸ್ವಾದಿಷ್ಟ ಹಣ್ಣುಗಳು ಬರತೊಡಗಿವೆ. ಆದರೆ ಇಳುವರಿ ಇನ್ನೂ ನಿರೀಕ್ಷಿತ ಪ್ರಮಾಣದಲ್ಲಿಲ್ಲ.

ಹಲಸು ಬೆಳೆ: ಹಲಸು ಬಡವರ ಹಣ್ಣು ಎಂದೇ ಜನಜನಿತವಾಗಿದೆ. ಮಾವು, ಬಾಳೆಗಳಂತೆ ಹಲಸನ್ನು ವಾಣಿಜ್ಯ ಬೆಳೆಯಾಗಿ ಬೆಳೆಯುವುದಿಲ್ಲ. ಇಳುವರಿ ದೃಷ್ಟಿಯಿಂದ ಈ ಹಣ್ಣಿನ ಬೇಸಾಯ ಇತರ ಹಣ್ಣಿಗಿಂತ ಹೆಚ್ಚು ಲಾಭದಾಯಕ. 5 ಕೆಜಿಯಿಂದ 50 ಕೆ ಜಿಗಳವರೆಗೆ ತೂಗುವ ಇದು ಗಾತ್ರದಲ್ಲಿ ಹಣ್ಣುಗಳ ದೊಡ್ಡಣ್ಣನೂ ಹೌದು. ತಾಲೂಕಿನ ತೂಬಗೆರೆ ಹಾಗೂ ಕಸಬಾ ಹೋಬಳಿ ಗಳಲ್ಲಿ ಹೆಚ್ಚು ಹಲಸು ಬೆಳೆಯಲಾಗುತ್ತದೆ. ಉಳಿದ ಹೋಬಳಿಗಳಿಂದಲೂ ಸೀಸನ್‌ನಲ್ಲಿ ಹಣ್ಣುಗಳು ಮಾರುಕಟ್ಟೆಗೆ ಬರುತ್ತವೆ. ಬಯಲು ಸೀಮೆಯ ತೂಬಗೆರೆ ಹೋಬಳಿಯ ಹಲಸಿನ ಹಣ್ಣುಗಳು ಹೆಚ್ಚು ಜನಪ್ರಿಯವಾಗಿವೆ. ತೂಬಗೆರೆ ಹೋಬಳಿಯ ಕಾಚಳ್ಳಿ, ಮೆಳೇಕೋಟೆ, ನೆಲ್ಲುಕುಂಟೆ ಸೇರಿ ದಂತೆ ಇಲ್ಲಿನ ಸುತ್ತ ಮುತ್ತ ನೂರಾರು ವರ್ಷಗಳ ಹಳೆಯ ಮರಗಳಿವೆ. ಬೇರೆಡೆ ಹೆಚ್ಚಿನ ಇಳುವರಿಯಾಗಿ ಹಲ ಸಿನ ಹಣ್ಣುಗಳು ಮಾರುಕಟ್ಟೆಗೆ ಬಂದು ಬೆಲೆ ಇಳಿಮುಖವಾಗಿದ್ದರೂ ಸಹ ತೂಬಗೆರೆ ಹಲಸು ಮಾತ್ರ ತನ್ನ ಬೆಲೆ ಕಳೆದು ಕೊಂಡಿಲ್ಲ ಎನ್ನುವುದು ವಿಶೇಷ. ಇಲ್ಲಿನ ಮಣ್ಣಿನ ಗುಣ ಹಲಸು ಹಣ್ಣುಗಳ ರುಚಿಗೆ ಕಾರಣವಾಗಿದ್ದು, ತೂಬಗೆರೆ ಚಂದ್ರಹಲಸು ಬಗೆ ಎಂದೇ ರಾಜ್ಯದಲ್ಲಿ ಹೆಸರು ಮಾಡಿವೆ.

ಹಲಸು ಮಾರಾಟ: ನಗರದ ಹೊರವಲಯದ ಟಿ.ಬಿ.ವೃತ್ತದ ಬಳಿಯ ಎಪಿಎಂಸಿ ಮಾರುಕಟ್ಟೆ ಮೊದಲಾದ ಕಡೆಗಳಲ್ಲಿ ಹಲಸಿನ ರಾಶಿಗಳು ಕಾಣುತ್ತಿದ್ದು, ಹಲಸಿನ ಹಣ್ಣುಗಳನ್ನು ಸ್ಥಳೀಯ ರಲ್ಲದೇ ನೆರೆಯ ಆಂಧ್ರದಿಂದ ಸಹ ವ್ಯಾಪಾರಸ್ಥರು ಖರೀದಿಸುವುದು ವಿಶೇಷವಾಗಿದೆ.

ಮುಂಚೆಯೇ ತೋಟ ಖರೀದಿ: ತಾಲೂಕಿನಲ್ಲಿ ಮಾವಿನಂತೆ ಹಲಸಿನ ತೋಪುಗಳು ಕಡಿಮೆ. ಹೀಗಾಗಿ ರೈತರು ತಮ್ಮ ತೋಟಗಳಲ್ಲಿ ಬೆಳೆ ದಿರುವ ಹತ್ತಾರು ಮರಗಳ ಹಣ್ಣುಗಳನ್ನೇ ಮಾರಾಟ ಮಾಡುತ್ತಾರೆ. ಈ ತೋಟಗಳನ್ನು ಮಾರಾಟಗಾರರು ಮುಂಚೆಯೇ ಖರೀದಿ ಸುತ್ತಾರೆ. ಈ ಬಾರಿ ಇಳುವರಿ ಪರವಾಗಿಲ್ಲ. ಕಳೆದ ವರ್ಷ ಬಿದ್ದ ಮಳೆ ಹಲಸು ಬೆಳೆಗೆ ಪೂರಕವಾಗಿದೆ. ನೀರಾವರಿ ಜಮೀನು ಹಾಗೂ ನೀರಿನ ಆಶ್ರಯವಿರುವ ತೋಟಗಳ ಬಳಿ ಹೆಚ್ಚಿನ ಇಳುವರಿ ಬಂದಿದೆ. ಹಲಸಿನ ತೋಪುಗಳು ಕಡಿಮೆ ಯಾಗುತ್ತಿದ್ದರೂ ತೋಟಗಳಲ್ಲಿ ಬೆಳಸಿರುವ ಹಲಸಿನ ಮರಗಳಲ್ಲಿ ಜನವರಿ ಫೆಬ್ರವರಿಯಲ್ಲಿಯೇ ವ್ಯಾಪಾರ ಮಾಡಿ, ಏಪ್ರಿಲ್‌ ತಿಂಗಳಿನಿಂದ ಖರೀದಿಸಿ ತಂದು ಮಾರಾಟ ಮಾಡ ಲಾಗುತ್ತದೆ. ಒಂದು ಹುಂಡಿಗೆ (ಗುಡ್ಡೆ) ಸುಮಾರು 60ರಿಂದ 70 ಕಾಯಿಗಳು ಇರುತ್ತವೆ. ಕಾಯಿಗಳ ಗಾತ್ರದ ಮೇಲೆ ಹುಂಡಿಗೆ ಮೂರು ಸಾವಿರದಿಂದ 5 ಸಾವಿರದವರೆಗೆ ಬೆಲೆ ಇರುತ್ತದೆ.

100 ರಿಂದ 150ರೂ ಹಣ್ಣು ಮಾರಾಟ: ದೊಡ್ಡ ಗಾತ್ರದ ಹಲಸಿನ ಹಣ್ಣುಗಳು 100 ರಿಂದ 150 ರೂಗಳವರೆಗೆ ಮಾರಾಟವಾಗುತ್ತಿವೆ. ಹಲಸಿನ ಸೀಸನ್‌ ಅಂಗವಾಗಿ ಮಾರುಕಟ್ಟೆಯಲ್ಲಿ ಭರದಿಂದ ಮಾರಾಟವಾಗುತ್ತಿರುವ ಹಲಸಿನ ತಳಿಗಳಲ್ಲಿ ಹಳದಿ ಬಣ್ಣದ ತೊಳೆಯ ಹಲಸು, ಕೆಂಪುಬಣ್ಣದ ತೊಳೆಯಹೆಬ್ಬಲಸು, ಬೇರು ಹಲಸು ಮೊದಲಾಗಿ ನಾನಾ ವಿಧದ ಹಲಸಿನ ಮಾರಾಟ ನಡೆಯುತ್ತಿದೆ. ಇತರ ಹಲಸಿನ ಹಣ್ಣುಗಳು ಗಾತ್ರ, ಹಣ್ಣಿನ ತಳಿ, ವೈವಿದ್ಯತೆಗಳಿಗನುಗುಣವಾಗಿ 50 ರೂಗಳಿಂದ 150 ರೂಗಳವರೆಗೆ ಮಾರಾಟವಾಗುತ್ತಿವೆ. ಗುಡ್ಡೆ ಹಲಸು 4ರಿಂದ 5 ಸಾವಿರದವರೆಗೆ ಮಾರಾಟವಾಗುತ್ತಿವೆ.

-ಡಿ.ಶ್ರೀಕಾಂತ

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.