ಜನೋತ್ಸವ ರದ್ದು: ಸಿದ್ಧ ಪಡಿಸಿದ ಅಡುಗೆ ಬೇರೆಡೆ ವಿತರಣೆ

ಸುಮಾರು ನೂರು ಜನ ಬಾಣಸಿಗರಿಂದ ಅಡುಗೆಗೆ ಸಿದ್ಧತೆ ನಡೆದಿತ್ತು.

Team Udayavani, Jul 29, 2022, 6:07 PM IST

ಜನೋತ್ಸವ ರದ್ದು: ಸಿದ್ಧ ಪಡಿಸಿದ ಅಡುಗೆ ಬೇರೆಡೆ ವಿತರಣೆ

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಎಂ ಆಗಿ ಒಂದು ವರ್ಷ ಪೂರೈಸಿರುವ ಹಿನ್ನೆಲೆ, ಸರ್ಕಾರದ ಪ್ರಗತಿಯನ್ನು ಜನರಿಗೆ ತಿಳಿಸಲು ಗುರುವಾರ ಹಮ್ಮಿಕೊಂಡಿದ್ದ ಜನೋತ್ಸವ ಹಠಾತ್‌ ರದ್ದಾಗಿದ್ದು, ಸಮಾವೇಶಕ್ಕೆ ಆಗಮಿಸುವವರಿಗೆ ಮಾಡಲಾಗಿದ್ದ ಉಪಾಹಾರವನ್ನು ವಿವಿಧೆಡೆ ವಿತರಿಸುವ ಮೂಲಕ ಖಾಲಿ ಮಾಡಲಾಯಿತು.

ಬುಧವಾರ ರಾತ್ರಿಯವರೆಗೂ ಸಹ ಸಮಾವೇಶದ ಸಿದ್ಧತೆಗಳು ಭರದಿಂದಲೇ ಸಾಗಿದ್ದವು. ಸಮಾವೇಶದ ವೇದಿಕೆ ಬಳಿ ಸೇರಿದಂತೆ ರಸ್ತೆ ಮಾರ್ಗಗಳಲ್ಲಿ ಬಿಜೆಪಿಯ ಕಟೌಟ್‌, ಫ್ಲೆಕ್ಸ್‌ಗಳು ರಾರಾಜಿಸುತ್ತಿದ್ದವು. ಆದರೆ, ಮಂಗಳವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಹಿನ್ನೆಲೆ, ಬುಧವಾರ ತಡರಾತ್ರಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನೋತ್ಸವ ಸಮಾರಂಭವನ್ನು ರದ್ದು ಮಾಡಿರುವ ಕುರಿತು ಪ್ರಕಟಿಸಿದ್ದು, ಸಮಾವೇಶ ಸಿದ್ಧತೆಗಳಿಗಾಗಿ ವೆಚ್ಚ ಮಾಡಿದ ಕೋಟ್ಯಂತರ ರೂ. ನೀರಲ್ಲಿ ಹೋಮ ಮಾಡಿದಂತಾಗಿದೆ.

ಬಾಣಸಿಗರಿಂದ ಅಡುಗೆಗೆ ಸಿದ್ಧತೆ: ಗುರುವಾರ ಬೆಳಗಿನ ಉಪಾಹಾರ ಹಾಗೂ ಮಧ್ಯಾಹ್ನದ ಊಟಕ್ಕೆ ಬಾಣಸಿಗರು ಎಲ್ಲಾ ಸಿದ್ಧತೆ ಮಾಡಿಕೊಂಡು, ಸುಮಾರು 25 ಸಾವಿರ ಜನರಿಗೆ ಬೆಳಗಿನ ಉಪಾಹಾರ ತಯಾರಿಸಿದ್ದರು. ಮಧ್ಯಾಹ್ನ 1 ಲಕ್ಷ ಜನರಿಗೆ ಊಟದ ಅಡುಗೆಗಾಗಿ ತರಕಾರಿಗಳನ್ನು ಹಂಚಿಕೊಂಡು ದಿನಸಿ ಸಾಮಗ್ರಿಗಳನ್ನು ಸಿದ್ಧ ಮಾಡಿಕೊಂಡಿದ್ದರು. ಸುಮಾರು ನೂರು ಜನ ಬಾಣಸಿಗರಿಂದ ಅಡುಗೆಗೆ ಸಿದ್ಧತೆ ನಡೆದಿತ್ತು. ಕಾರ್ಯಕ್ರಮ ರದ್ದಾದ ಹಿನ್ನೆಲೆ ಮಧ್ಯಾಹ್ನದ
ಊಟವನ್ನು ತಯಾರಿಸಲಿಲ್ಲ.

ಮಾಡಿದ್ದ ಅಡುಗೆ ವಿವಿಧ ಆಶ್ರಮಗಳಿಗೆ: ಬೆಳಗ್ಗೆ 25
ಸಾವಿರ ಜನ ಕಾರ್ಯಕರ್ತರಿಗೆ ಪಲಾವ್‌ ಸಿದ್ಧಪಡಿಸಲಾಗಿತ್ತು. ಮಧ್ಯಾಹ್ನದ ಊಟಕ್ಕೆ ಪಲಾವ್‌, ಮೊಸರನ್ನ, ಬಾದುಷ ಮಾಡಲು ಸಿದ್ಧತೆ ನಡೆಸಿ, 1 ಲಕ್ಷ 15 ಸಾವಿರ ಬಾದುಷ ರೆಡಿಯಾಗಿತ್ತು. ಬೆಳಗ್ಗೆ ಸಮಾವೇಶ ರದ್ದಾಗಿರುವ ಕುರಿತು ಸುದ್ದಿ ಬರುತ್ತಿದ್ದಂತೆಯೇ ಮಾಡಿದ್ದ ಅಡುಗೆಯನ್ನು ವಿವಿಧ ಆಶ್ರಮಗಳಿಗೆ ಹಾಗೂ ವಸತಿ ಶಾಲೆಗಳಿಗೆ ನೀಡಲಾಗಿದೆ ಎಂದು ಕಾರ್ಯಕರ್ತರು ತಿಳಿಸಿದರು.

ಹೆಚ್ಚಿಟ್ಟಿರುವ ತರಕಾರಿ ಘಾಟಿ ಗೋಶಾಲೆಗೆ: ಎರಡು ಟನ್‌ ಹೆಚ್ಚಿಟ್ಟಿರುವ ತರಕಾರಿಗಳನ್ನು ಘಾಟಿ ಗೋಶಾಲೆಗೆ ಹಾಗೂ ವಿವಿಧೆಡೆ ವಿತರಿಸಲಾಯಿತು. ರಾತ್ರಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದರಿಂದ ಬೆಳಗ್ಗೆ ತಡವಾಗಿ, ಸಾರ್ವಜನಿಕರಿಗೆ ತಿಳಿದು ಸಮಾವೇಶ ರದ್ದಾಗಿರುವ ಬಗ್ಗೆಯೇ ಎಲ್ಲೆಡೆ ಚರ್ಚೆಗಳು ನಡೆಯುತ್ತಿದ್ದವು.

ರಸ್ತೆ ಬದಿಯಲ್ಲಿದ್ದ ಫ್ಲೆಕ್ಸ್‌, ಬಾವುಟ ತೆರವು ಕಳೆದ 10 ದಿನಗಳಿಂದ ಸಿದ್ಧಪಡಿಸಲಾಗಿದ್ದ ಬೃಹತ್‌ ವೇದಿಕೆಯನ್ನು ಗುರುವಾರ ಬೆಳಗಿನಿಂದಲೇ ತೆರವು ಮಾಡಿ, ಸಾಮಗ್ರಿಗಳನ್ನು ವಾಹನಗಳಿಗೆ ತುಂಬಲಾಯಿತು. ರಸ್ತೆ ಬದಿಗಳಲ್ಲಿ ಅಳವಡಿಸಿದ್ದ ಬಿಜೆಪಿಯ ಫ್ಲೆಕ್ಸ್‌ಗಳು, ಬಂಟಿಂಗ್ಸ್‌ ಹಾಗೂ ಬಾವುಟಗಳನ್ನು ಸಹ ತೆರವು ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.