ಕೋವಿಡ್ ನಿಯಂತ್ರಣಕ್ಕೆ ತಂಡಗಳ ರಚಿಸಿ


Team Udayavani, Apr 7, 2021, 12:21 PM IST

ಕೋವಿಡ್ ನಿಯಂತ್ರಣಕ್ಕೆ ತಂಡಗಳ ರಚಿಸಿ

ದೇವನಹಳ್ಳಿ: ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ತಾಲೂಕು ಮಟ್ಟದಲ್ಲಿ ನೋಡಲ್‌ ಅಧಿಕಾರಿಗಳ ನೇಮಕ ಸೇರಿ ಗ್ರಾಪಂ ಹಂತದಲ್ಲಿಯೂ ತಂಡ ರಚಿಸಿ, ನಿಯಂತ್ರಣಕ್ಕೆ ಒಗ್ಗಟ್ಟಿ ನಿಂದಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ಗೆ ಕಂದಾಯ, ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಅಶೋಕ್‌ ತಿಳಿಸಿದರು.

ತಾಲೂಕಿನ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ 2020-21ನೇ ಸಾಲಿನ ತ್ತೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ(ಕೆಡಿಪಿ) ಹಾಗೂ ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿಕೈಗೊಳ್ಳಲಾಗಿರುವ ನಿಯಂತ್ರಣ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊರಡಿಸಿರುವ ಕೋವಿಡ್-19 ಮಾರ್ಗಸೂಚಿಗಳ ಅನ್ವಯ ಮದುವೆ, ಜಾತ್ರೆ, ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆನಿಯಂತ್ರಿಸಬೇಕು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.

ಪ್ರತಿ ಮನೆಗೂ ಕರಪತ್ರ ಹಂಚಿ: ಕೋವಿಡ್ಮಾರ್ಗಸೂಚಿಗಳನ್ನು ಪಾಲಿಸದ ಕಲ್ಯಾಣ ಮಂಟಪಗಳ ಮಾಲಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರೊಂದಿಗೆ ಆರು ತಿಂಗಳು ಕಲ್ಯಾಣ ಮಂಟಪ ಮುಚ್ಚಲಾಗುವುದು. ಜಿಲ್ಲೆಯು ಬೆಂಗಳೂರು ನಗರ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ಕೋವಿಡ್ ಪ್ರಕರಣ ಹೆಚ್ಚಾಗುತ್ತಿವೆ. ಹೀಗಾಗಿ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಕಡ್ಡಾಯವಾಗಿದೆ. ಸಾರ್ವಜನಿಕರಿಗೆ ಕೋವಿಡ್ ಸೋಂಕಿನ ಬಗ್ಗೆ ಹಾಗೂ ಲಸಿಕೆ ಪಡೆದುಕೊಳ್ಳುವಬಗ್ಗೆ ಮಾಹಿತಿಯುಳ್ಳ ಕರಪತ್ರ ಪ್ರಕಟಿಸಿ, ಪ್ರತಿ ಮನೆಗೂಶೀಘ್ರ ತಲುಪಿಸುವ ಕೆಲಸ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೂಚಿಸಿದರು.

ಜಾತ್ರೆ ಅಂಗಡಿಗಳ ಮಧ್ಯೆ 10 ಅಡಿ ಅಂತರ: ಕೋವಿಡ್ ಜೊತೆಗೆ ಜೀವನವನ್ನು ನಡೆಸಬೇಕಾಗಿರುವುದು ಅನಿವಾರ್ಯಆಗಿರುವುದರಿಂದ, ರಾಜ್ಯದ ಆದಾಯದ ಬಹುಪಾಲು ಕೋವಿಡ್ ನಿಯಂತ್ರಣಕ್ಕೆ ಬಳಸಬೇಕಾಗಿದೆ. ಜಿಲ್ಲೆಯಲ್ಲಿ ಯಾವುದೇ ಜಾತ್ರೆಗಳಿಗೆ ಅನುಮತಿ ನೀಡಬಾರದು, ಸಂತೆಗಳಲ್ಲಿ ಒಂದು ಅಂಗಡಿಯಿಂದ ಮತ್ತೂಂದು ಅಂಗಡಿಗೆ 10 ಅಡಿ ಅಂತರ ಇರಬೇಕು ಎಂದು ಸಲಹೆ ನೀಡಿದರು.

ಹಾಸ್ಟೆಲ್‌ ಕೋವಿಡ್ ಕೇಂದ್ರವಾಗಿಸಿ: ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿನ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಿ, ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಹಾಸಿಗೆ ಮೀಸಲಿರಿಸುವಂತೆ ನೋಡಿಕೊಳ್ಳಬೇಕು. 1 ರಿಂದ 9ನೇ ತರಗತಿವರೆಗೆ ತರಗತಿ ಸ್ಥಗಿತಗೊಂಡಿದ್ದು, ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ಕೋವಿಡ್ ಕೇಂದ್ರಗಳಾಗಿ ಪರಿವರ್ತಿಸಲು ಸೂಚನೆ ನೀಡಿದರು.

ಭಯಮುಕ್ತ ವಾತಾವರಣ ನಿರ್ಮಿಸಿ: ಜಿಲ್ಲೆಯಲ್ಲಿನ ಆ್ಯಂಬುಲೆನ್ಸ್‌ಗಳನ್ನು ಸನ್ನದ್ಧವಾಗಿಟ್ಟುಕೊಳ್ಳಬೇಕು, ಕೋವಿಡ್ ಸೋಂಕಿತ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಂಬ್ಯುಲೆನ್ಸ್‌ಮೂಲಕ ಕರೆದೊಯ್ಯುವ ವೇಳೆ ಸೈರನ್‌ ಮಾಡುವಂತಿಲ್ಲ ಹಾಗೂ ಸಾರ್ವಜನಿಕರಲ್ಲಿ ಕೋವಿಡ್ ಕುರಿತು ಭಯಮುಕ್ತ ವಾತಾವರಣ ನಿರ್ಮಾಣ ಮಾಡಬೇಕು ಎಂದು ಹೇಳಿದರು.

ಹೆಚ್ಚು ಮಂದಿಗೆ ಲಸಿಕೆ ನೀಡಬೇಕಿದೆ: ಶಾಸಕ ಶರತ್‌ ಬಚ್ಚೇಗೌಡ ಮಾತನಾಡಿ, ತಾಲೂಕಿನಲ್ಲಿ ಕೋವಿಡ್ ವೈರಸ್‌ ನ ತೀವ್ರತೆ ಹೆಚ್ಚಾಗುತ್ತಿದೆ. ಲಸಿಕೆಯನ್ನು ಹೆಚ್ಚು ಮಂದಿಗೆ ನೀಡುವಂತಾಗಬೇಕು.

ಜಿಪಂ ಅಧ್ಯಕ್ಷ ವಿ.ಪ್ರಸಾದ್‌, ಉಪಾಧ್ಯಕ್ಷೆ ರೂಪಾ ಮರಿಯಪ್ಪ, ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಅಧ್ಯಕ್ಷ ಕೆ.ಸಿ.ಮಂಜುನಾಥ್‌, ಜಿಲ್ಲಾಧಿ ಕಾರಿ ಕೆ.ಶ್ರೀನಿವಾಸ್‌,ಜಿಪಂ ಸಿಇಒ ಎಂ.ಆರ್‌.ರವಿಕುಮಾರ್‌, ಎಸ್ಪಿ ರವಿಡಿ.ಚನ್ನಣ್ಣನವರ್‌, ಎಸಿ ಅರುಳ್‌ಕುಮಾರ್‌, ಡಿಎಚ್‌ಒ ಕೆ.ಮಂಜುಳಾದೇವಿ, ನಿರ್ಮಿತಿ ಕೇಂದ್ರದ ಅಧಿಕಾರಿ ವಾಸುದೇವ ಮೂರ್ತಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಈಗಾಗಲೇ 71,023 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಜನರು ಲಸಿಕೆಪಡೆಯುವಂತೆ ಉತ್ತೇಜಿಸುವ ಕೆಲಸವಾಗಬೇಕು, ಲಸಿಕೆ ಪಡೆಯದ ಅಧಿಕಾರಿಗಳು ಶೀಘ್ರ ಹಾಕಿಸಿಕೊಳ್ಳಲಿ. -ಆರ್‌.ಅಶೋಕ್‌, ಜಿಲ್ಲಾ ಉಸ್ತುವಾರಿ ಸಚಿವ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.