ಯುವ ಬ್ರಿಗೇಡ್ನಿಂದ ಶಿಕ್ಷಕರಿಗೆ ಕಿಟ್ ವಿತರಣೆ
Team Udayavani, Jun 10, 2021, 5:28 PM IST
ನೆಲಮಂಗಲ: ತಾಲೂಕಿನ ಖಾಸಗಿ ಶಾಲಾ ಶಿಕ್ಷಕರಿಗೆ ಯುವಾ ಬ್ರಿಗೇಡ್ ವತಿಯಿಂದ ಗುರು ಗೌರವ ಎಂಬ ದಿನಸಿ ಕಿಟ್ ವಿತರಣೆ ಮಾಡಲಾಯಿತು. ಬಸವಣ್ಣ ದೇವರ ಮಠದ ಶ್ರೀಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಕೊರೊನಾ ಸಂಕಷ್ಟದಿಂದ ಶಾಲೆಗಳು ಮುಚ್ಚಿದ ಪರಿಣಾಮ ಖಾಸಗಿ ಶಿಕ್ಷಕರಿಗೆ ಸಂಬಳದ ಜತೆ ಕೆಲಸವೂ ಇಲ್ಲದೆ ಮನೆಯಲ್ಲಿ ಉಳಿಯುವಂತಾಗಿದೆ.
ಜೀವನ ನಡೆಸಲು ಬಹಳಷ್ಟು ಕಷ್ಟ ಅನುಭವಿಸುವಂತಾಗಿದೆ. ಖಾಸಗಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಯುವಾ ಬ್ರಿಗೇಡ್ ಗುರು ಗೌರವ ಅಭಿಯಾನದ ಮೂಲಕ ಸಂಕಷ್ಟದಲ್ಲಿರುವ ಖಾಸಗಿ ಶಿಕ್ಷಕರ ಮನೆಗಳಿಗೆ ದಿನಸಿ ಕಿಟ್ ವಿತರಣೆ ಮಾಡಿ ದ್ದಾರೆ. ಕಿಟ್ ನೀಡಿದ ಪೋಟೋಗಳನ್ನು ಪ್ರಚಾರಕ್ಕೆ ಬಳಸ ದಂತೆ ತೀರ್ಮಾನಿಸಿದ್ದು, ಕಿಟ್ ನೀಡಿ ಧೈರ್ಯವಾಗಿರುವಂತೆ ಆತ್ಮವಿಶ್ವಾಸ ತುಂಬುವಂತಹ ಕೆಲಸವನ್ನು ಕಾರ್ಯಕರ್ತರು ಮಾಡುತ್ತಿರುವುದು ಶ್ಲಾಘನೀಯ ಎಂದರು.
ಮುಂದಿನ ದಿನಗಳಲ್ಲಿ ಹೆಚ್ಚಿನ ಸೇವೆ: ಯುವ ಬ್ರಿಗೇಡ್ ಕಾರ್ಯಕರ್ತ ಸಿದ್ದು ಮಾತನಾಡಿ, ತಾಲೂಕಿನ 40ಕ್ಕೂ ಹೆಚ್ಚು ಸಂಕಷ್ಟದಲ್ಲಿದ್ದ ಖಾಸಗಿ ಶಾಲಾ ಶಿಕ್ಷಕರಿಗೆ ಮೊದಲ ಹಂತದಲ್ಲಿ ಗುರುಗೌರವ ದಿನಸಿ ಕಿಟ್ ನೀಡಿದ್ದು, ಮುಂದಿನ ದಿನಗಳಲ್ಲಿ ಮತ್ತೂಷ್ಟು ಶಿಕ್ಷಕರಿಗೆ ದಿನಸಿ ಕಿಟ್ ನೀಡಲಾಗುತ್ತದೆ. ಮುಂದಿನ ದಿನದಲ್ಲಿ ಹೆಚ್ಚಿನ ಸೇವೆ ಮಾಡಲಿದ್ದೇವೆ ಎಂದರು. ಕಾರ್ಯಕರ್ತರಾದ ಚಂದ್ರು, ಅರುಣ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ