ರಾಸಾಯನಿಕ ವಸ್ತುಗಳಿಂದ ಕುಮುದ್ವತಿ ನದಿ ಕಲುಷಿತ


Team Udayavani, Dec 9, 2019, 3:00 AM IST

kumuditi

ನೆಲಮಂಗಲ: ಕುಮುದ್ವತಿ ನದಿಯಲ್ಲಿ ಮುಂಗಾರು ಮಳೆಯಿಂದ ಬಹಳಷ್ಟು ನೀರು ಸಂಗ್ರಹವಾಗಿ ಜಾನುವಾರಗಳು ಹಾಗೂ ಅಂತರ್ಜಲಕ್ಕೆ ಸಹಕಾರಿಯಾಗಿತ್ತು. ಆದರೆ ಖಾಸಗಿ ಕಂಪನಿಯೊಂದು ನೀರನ್ನು ವಿಷಯುಕ್ತಗೊಳಿಸಿದ್ದು, ಜಾನುವಾರುಗಳು ವಿಷಯುಕ್ತ ನೀರು ಕುಡಿಯುವ ಆತಂಕ ಗ್ರಾಮದ ಜನರಿಗೆ ಎದುರಾಗಿದೆ.

ತಾಲೂಕಿನ ಅರೆಬೊಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯ ಅಲ್ಕೂರು ಗ್ರಾಮದ ಸಮೀಪದಲ್ಲಿ ಹಾದು ಹೋಗುವ ಕುಮುದ್ವತಿ ನದಿಗೆ ವಿಜಯನಗರದ ಜೆಎಸ್‌ಡಬ್ಲೂ ಎಂಬ ಕಂಪನಿಯು ರಾಸಾಯನಿಕ ವಸ್ತುಗಳು ಹಾಗೂ ಪ್ಲಾಸ್ಟಿಕ್‌ ತ್ಯಾಜ್ಯವನ್ನು ರಾತ್ರಿ ವೇಳೆ ಸುರಿಯಲಾಗಿದೆ. ಇದರಿಂದ ಕೆಮಿಕಲ್‌ ಬಣ್ಣ, ಆಯಿಲ್‌ ಸೇರಿ ಮಿಶ್ರಿತ ನೀರು ಕುಡಿದು ಜಾನುವಾರುಗಳ ಅನಾರೋಗ್ಯಕ್ಕೆ ತುತ್ತಾಗಿವೆ.

ವಿಷಯುಕ್ತ ನೀರಿನ ಆತಂಕ: ಬೇಸಿಗೆಯ ದಣಿವಾರಿಸುವ ನದಿಗೆ ಚೆಕ್‌ ಡ್ಯಾಮ್‌ ನಿರ್ಮಿಸಿ, ನೀರಿನ ಸಂಗ್ರಹಣೆ ಹೆಚ್ಚಾಗುವಂತೆ ಮಾಡಲಾಗಿತ್ತು. ಆದರೆ ಕಂಪನಿ ಸುರಿದ ಕೆಮಿಕಲ್‌ನಿಂದ ಜಾನುವಾರುಗಳು ಕುಡಿಯುವ ನೀರು ವಿಷಯುಕ್ತವಾಗಿದೆ.ಸಮೀಪವಿರುವ ಕೊಳವೆ ಬಾವಿಗೆ ವಿಷಯುಕ್ತ ನೀರು ಸೇರಿದರೆ ಜನರ ಆರೋಗ್ಯ ಹದಗೆಟ್ಟು ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇದೆ ಎಂದು ಅಲ್ಕೂರು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರು ಸಾವು: ಜೆಎಸ್‌ಡಬ್ಲೂ ಎಂಬ ಕಂಪನಿಯು ವಿಷಯುಕ್ತ ವಸ್ತುಗಳನ್ನು ಕುಮುದ್ವತಿ ನದಿಯಲ್ಲಿನ ಸುರಿದ ಕಾರಣ ನದಿಯ ವಿಷಯುಕ್ತ ನೀರು ಕುಡಿದು ಐದು ದಿನಗಳ ಹಿಂದೆ ಕರು ಮೃತವಾಗಿದೆ. ತಕ್ಷಣ ನದಿಯಲ್ಲಿನ ತ್ಯಾಜ್ಯ ತೆಗೆದು ವಿಷಯುಕ್ತ ನೀರಿನಿಂದ ಜಾನುವಾರಗಳಿಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಜಾನುವಾರಗಳಿಗೆ ನೀರಿನ ಮೂಲ: ಕುಮುದ್ವತಿ ನದಿ ಸುತ್ತಮುತ್ತಲು ಹುಲ್ಲುಗಾವಲು, ಗೋಮಾಳ, ಪಾಳುಬಿದ್ದ ಜಾಗ ಇರುವುದರಿಂದ 30ಕ್ಕೂ ಹೆಚ್ಚು ಗ್ರಾಮದ ಸಾವಿರಾರು ದನಕರುಗಳು, ಮೇಕೆ, ಕುರಿಗಳು ಮೇವಿಗೆ ಆಶ್ರಯವಾಗಿದೆ.ಮೇವು ತಿಂದ ನಂತರ ಕುಡಿಯುವ ನೀರಿಗೆ ನದಿಯ ನೀರು ಅನಿವಾರ್ಯವಾಗಿದೆ.

ಪ್ರತಿಭಟನೆ: ಖಾಸಗಿ ಕಂಪನಿಗಳು ವಿಷಯುಕ್ತ ವಸ್ತುಗಳನ್ನು ಸುರಿದು ಹೋದರು ಗ್ರಾಪಂ ಹಾಗೂ ತಾಲೂಕು ಆಡಳಿತ ಯಾವುದೇ ಕ್ರಮಕೈಗೊಂಡಿಲ್ಲ. ರಾಸಾಯನಿಕ ಮಿಶ್ರಿತ ನೀರಿನಿಂದ ನಮ್ಮ ಜಾನುವಾರುಗಳನ್ನು ರಕ್ಷಣೆ ಮಾಡಿ ಎಂದು ಗ್ರಾಮದ ಜನರು ನದಿಯ ಸಮೀಪ ಪ್ರತಿಭಟನೆ ನಡೆಸಿದರು.

ಕುಮುದ್ವತಿ ನದಿ 30ಕ್ಕೂ ಹೆಚ್ಚು ಗ್ರಾಮಗಳ ಜಾನುವಾರಗಳಿಗೆ ಕುಡಿಯುವ ನೀರಿನ ಮೂಲ, ಜೆಎಸ್‌ಡಬ್ಲೂ ಎಂಬ ಕಂಪನಿ ಪದೇ ಪದೇ ರಾಸಾಯನಿಕ ಸುರಿದು ಹೋಗುವ ಮೂಲಕ ನೀರನ್ನು ವಿಷಯುಕ್ತಮಾಡಿದ್ದು, ನೀರು ಕುಡಿದ ಕರು ಮೃತಪಟ್ಟಿದೆ, ತಕ್ಷಣ ಗ್ರಾಪಂ ಅಧಿಕಾರಿಗಳು, ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು.
-ಶ್ರೀನಿವಾಸ್‌, ಗ್ರಾಮಸ್ಥ

ನದಿಗೆ ಖಾಸಗಿ ಕಂಪನಿ ವಿಷಯುಕ್ತ ವಸ್ಯಗಳನ್ನು ಸುರಿದಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳುತಿದ್ದೇನೆ, ಸ್ಥಳ ಪರಿಶೀಲಿಸಿ ಸೂಕ್ತಕ್ರಮಕೈಗೊಳ್ಳುತ್ತೇನೆ .
-ಎಂ. ಶ್ರೀನಿವಾಸಯ್ಯ, ತಹಶೀಲ್ದಾರ್‌

ಸ್ಥಳಕ್ಕೆ ಭೇಟಿ ನೀಡಿ ವಾಸ್ತವತೆಯಬಗ್ಗೆ ಮಾಹಿತಿ ಪಡೆದಿದ್ದೇನೆ, ಕಂಪನಿ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗುವುದು.
-ಶೈಲೇಂದ್ರ, ಗ್ರಾಮಪಂಚಾಯಿತಿ ಅಧ್ಯಕ್ಷ

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.