Devanahalli: ಜಿಲ್ಲೆಯಲ್ಲಿ ಡಯಾಲಿಸಿಸ್‌ ಯಂತ್ರ ಸಾಲುತ್ತಿಲ್ಲ


Team Udayavani, Dec 2, 2023, 12:23 PM IST

Devanahalli: ಜಿಲ್ಲೆಯಲ್ಲಿ ಡಯಾಲಿಸಿಸ್‌ ಯಂತ್ರ ಸಾಲುತ್ತಿಲ್ಲ

ದೇವನಹಳ್ಳಿ: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಕೇಂದ್ರಗಳಿಗೆ ತಾಂತ್ರಿಕ ಸಿಬ್ಬಂದಿ ಜತೆಗೆ ಯಂತ್ರಗಳ ಕೊರತೆ ಇದ್ದು, ರೋಗಿಗಳಿಗೆ ತೊಂದರೆಯಾಗುತ್ತಿದೆ. ಡಯಾಲಿಸಿಸ್‌ ಕೇಂದ್ರಗಳಿಗೆ ಹೆಚ್ಚಿನ ಸೌಲಭ್ಯ ನೀಡಿ ಬಡವರಿಗೆ ಅನುಕೂಲ ಮಾಡಿಕೊಡಬೇಕು.

ಇತ್ತೀಚಿನ ದಿನಗಳಲ್ಲಿ ಕಿಡ್ನಿ ವೈಫ‌ಲ್ಯದಿಂದ ಸಾಕಷ್ಟು ಜನ ಬಳಲುತ್ತಿದ್ದು, ಅವರು ಡಯಾಲಿಸಿಸ್‌ ಮಾಡಿಸಿಕೊಳ್ಳಲು ಸರ್ಕಾರಿ ಆಸ್ಪತ್ರೆಯಲ್ಲಿ ವಿಳಂಬ ಆಗುತ್ತಿದೆ. ಇದರಿಂದ ಖಾಸಗಿ ಆಸ್ಪತ್ರೆಗೆ ಹೋಗಿ ದುಬಾರಿ ವೆಚ್ಚದಲ್ಲಿ ಡಯಾಲಿಸಿಸ್‌ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಕೇಂದ್ರಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಿದರೆ ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸುವುದು ತಪ್ಪಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಹೆಚ್ಚು ಡಯಾಲಿಸಿಸ್‌ ಯಂತ್ರಗಳನ್ನು ಅಳವಡಿಸಬೇಕು. ಯಂತ್ರಕ್ಕೆ ತಕ್ಕಂತೆ ವೈದ್ಯಕೀಯ ಸಲಕರಣೆಗಳು, ಹೆಚ್ಚುವರಿ ಸಿಬ್ಬಂದಿ ನಿಯೋಜಿಸಬೇಕು. ಡಯಾಲಿಸಿಸ್‌ಗೆ ಬೇಕಾದ ಸೌಲಭ್ಯಗಳನ್ನು ಸರ್ಕಾರ ನೀಡಬೇಕು ಎಂದು ಡಯಾಲಿಸಿಸ್‌ ರೋಗಿಗಳು ಹೇಳುತ್ತಾರೆ.

ಒಬ್ಬರಿಗೆ ಡಯಾಲಿಸಿಸ್‌ ಮಾಡಬೇಕಾದರೆ ಮೂರರಿಂದ ನಾಲ್ಕು ಗಂಟೆ ಬೇಕಾಗುತ್ತದೆ. ದಿನಕ್ಕೆ ಇಬ್ಬರಿಂದ ಮೂವರಿಗೆ ಮಾತ್ರ ಡಯಾಲಿಸಿಸ್‌ ಮಾಡಿಸಬಹುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 15 ಡಯಾಲಿಸಿಸ್‌ ಯಂತ್ರಗಳಿದ್ದು, ಅದರಲ್ಲಿ ದೇವನಹಳ್ಳಿಯಲ್ಲಿ 2 ಯಂತ್ರಗಳ ಪೈಕಿ ಒಂದು ಯಂತ್ರ ಮಾತ್ರ ಕಾರ್ಯನಿರ್ವಹಿಸುತ್ತಿದೆ. ಹೊಸಕೋಟೆ ಮತ್ತು ನೆಲಮಂಗಲಗಳಲ್ಲಿ ದಾನಿಗಳ ಸಹಕಾರದಿಂದ ಡಯಾಲಿಸಿಸ್‌ ಯಂತ್ರಗಳನ್ನು ನೀಡಲಾಗಿದೆ. ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ಆರು ಡಯಾಲಿಸಿಸ್‌ ಯಂತ್ರಗಳನ್ನು ಕೊಡಿಸಲು ಮುಂದೆ ಬಂದಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ 5 ಯಂತ್ರಗಳು ನಿರ್ವಹಿಸುತ್ತಿದೆ. ಹೆಚ್ಚಿನ ಯಂತ್ರಗಳನ್ನು ಅಳವಡಿಸಿದರೆ ರೋಗಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ.

ಜಿಲ್ಲೆಯಲ್ಲಿ 15 ಡಯಾಲಿಸಿಸ್‌ ಯಂತ್ರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇಂದ್ರಗಳಲ್ಲಿ ಡಯಾಲಿಸಿಸ್‌ ತಜ್ಞರು, ಡಯಾಲಿಸಿಸ್‌ ತಾಂತ್ರಿಕ ತಜ್ಞರು, ನರ್ಸ್‌ಗಳು, ಹಾಗೂ ಹೆಚ್ಚುವರಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ದೊಡ್ಡಬಳ್ಳಾಫ‌ುರದಲ್ಲಿ 5 ಯಂತ್ರ, ನೆಲಮಂಗಲ-3, ಹೊಸಕೋಟೆ-5 ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 15 ಡಯಾಲಿಸಿಸ್‌ ಯಂತ್ರಗಳಿವೆ. ದೇವನಹಳ್ಳಿ 2 ಯಂತ್ರಗಳ ಪೈಕಿ ಒಂದು ಯಂತ್ರ ಮಾತ್ರ ಕಾಲ ನಿರ್ವಹಿಸುತ್ತಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಮಾಡಿಸಿಕೊಳ್ಳಲು ಸಾಕಷ್ಟು ವಿಳಂಬ ಆಗಲಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ಹಣ ಕಟ್ಟಿ, ಡಯಾಲಿಸಿಸ್‌ ಮಾಡಿಸಿಕೊಳ್ಳಬೇಕಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಡಯಾಲಿಸಿಸ್‌ ಯಂತ್ರ ಅಳವಡಿಸಿ, ಸಿಬ್ಬಂದಿ ನೇಮಿಸಬೇಕು. ●ರವಿ ಡಯಾಲಿಸಿಸ್‌ ಚಿಕಿತ್ಸೆ ಪಡೆಯುತ್ತಿರುವ ರೋಗಿ

ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಯಂತ್ರಗಳು ಕಾರ್ಯನಿರ್ವಹಿಸುತ್ತಿದೆ. ನಾಲ್ಕು ತಾಲೂಕುಗಳ ಸಾರ್ವಜನಿಕ ಆಸ್ಪತ್ರೆಯಲ್ಲಿ 15 ಡಯಾಲಿಸಿಸ್‌ ಯಂತ್ರಗಳು ಇವೆ. ಜಿಲ್ಲೆಯಲ್ಲಿ ಎಲ್ಲಿಯೂ ಸಮಸ್ಯೆ ಇಲ್ಲ. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಮತ್ತಷ್ಟು ಯಂತ್ರ ಅಳವಡಿಸಲು ಚಿಂತಿಸಲಾಗುತ್ತಿದೆ. -ಡಾ| ಸುನಿಲ್‌ ಕುಮಾರ್‌, ಜಿಲ್ಲಾ ಆರೋಗ್ಯಾಧಿಕಾರಿ

-ಎಸ್‌.ಮಹೇಶ್‌

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.