ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಯಾವಾಗ?

ಜಾರಿಯಾಗದ ಶಾಶ್ವತ ನೀರಾವರಿ ಯೋಜನೆಗಳು

Team Udayavani, Mar 22, 2021, 12:16 PM IST

ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಯಾವಾಗ?

ದೊಡ್ಡಬಳ್ಳಾಪುರ: ಮಾ.22 ವಿಶ್ವ ಜಲ ದಿನ. ಕೋವಿಡ್ 2ನೇ ಅಲೆ ಆತಂಕದ ನಡುವೆ ಮತ್ತೆ ಬೇಸಿಗೆ ಆರಂಭವಾಗಿದೆ. ನೀರಿನ ಸಮಸ್ಯೆ ಕಾಡತೊಡಗಿದೆ. ಮಳೆ ನೀರು ಕೊಯ್ಲು ಕಡ್ಡಾಯ, ಶಾಶ್ವತ ನೀರಾವರಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುವ ಕೂಗು ಕೇಳಿಬರುತ್ತಿದೆ.

ನಗರದ ನೀರಿನ ಸ್ಥಿತಿಗತಿ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ವಾರ್ಷಿಕ ಸರಾಸರಿ 800 ಮಿ.ಮೀಮಳೆಯಾಗುತ್ತದೆ. ನಗರಸಭೆಯಲ್ಲಿ ಒಟ್ಟು 31 ವಾರ್ಡ್ಗಳಿದ್ದು, ಹಾಲಿ ಅಂದಾಜು 1.05 ಲಕ್ಷ ಜನಸಂಖ್ಯೆಗೆತಲಾ 135 ಲೀಟರ್‌ ಪ್ರಮಾಣದಂತೆ ದೊಡ್ಡಬಳ್ಳಾಪುರನಗರಕ್ಕೆ 14.17 ಎಂಎಲ್‌ಡಿ (ಒಂದು ದಿನಕ್ಕೆ ದಶಲಕ್ಷಲೀ.) ಅವಶ್ಯಕತೆ ಇದೆ. ಪ್ರಸ್ತುತ ತಲಾ 68 ಎಲ್‌ಪಿಸಿಡಿಪ್ರಮಾಣದ ರೀತಿ 7.17 ಎಂಎಲ್‌ಡಿ(ಕೊಳವೆಬಾವಿಗಳಿಂದ 5.17, ಜಕ್ಕಲಮಡಗು ಜಲಾಶಯದಿಂದ 2.00 ಎಂಎಲ್‌ಡಿ) ನೀರುಸರಬರಾಜು ಮಾಡಲಾಗುತ್ತಿದೆ. ಇನ್ನೂ 7 ಎಂಎಲ್‌ಡಿನೀರು ಕೊರತೆ ಇದೆ. ನಗರದಲ್ಲಿ ಸರಾಸರಿ 5 ರಿಂದ 6 ದಿನಕೊಮ್ಮೆ ಕುಡಿವ ನೀರು ಸರಬರಾಜುಮಾಡಲಾಗುತ್ತಿದೆ. ಕಳೆದ ಸಾಲಿಗೆ ಹೋಲಿಸಿದರೆ ಈಬಾರಿ ಕೊಳವೆಬಾವಿಗಳಿಂದ ನೀರು ಸರಬರಾಜು 2ಎಂಎಲ್‌ಡಿ ಕಡಿಮೆ ಆಗಿದೆ.

43 ಬೋರ್ವೆಲ್‌ ಬತ್ತಿವೆ.: ದೊಡ್ಡಬಳ್ಳಾಪುರ ನಗರ ವ್ಯಾಪ್ತಿಯಲ್ಲಿ 134 ಕೊಳವೆ ಬಾವಿಗಳಿದ್ದು, ಇದರಲ್ಲಿ 91 ಮಾತ್ರ ಕಾರ್ಯನಿರ್ವಹಿಸುತ್ತಿವೆ. 43 ಬತ್ತಿವೆ. ಜಕ್ಕಲಮಡಗು ಜಲಾಶಯದಿಂದ ದೊಡ್ಡಬಳ್ಳಾಪುರನಗರಕ್ಕೆ ಪ್ರತಿದಿನ 2 ಎಂಎಲ್‌ಡಿ ಕುಡಿಯುವ ನೀರುಪೂರೈಕೆ ಮಾಡಿಕೊಳ್ಳಲಾಗುತ್ತಿದೆ. ಜಲಾಶಯದಲ್ಲಿ ಪ್ರಸ್ತುತ 42.65 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಪ್ರಸ್ತುತ ಪ್ರತಿ ದಿನ 2 ಎಂಎಲ್‌ಡಿಯಂತೆ ಸರಬರಾಜು ಮಾಡಿಕೊಳ್ಳುತ್ತಿದೆ. ಅದರಂತೆ, ಗರಿಷ್ಠ 11 ತಿಂಗಳು ಕಾಲ ಸರಬರಾಜು ಮಾಡಬಹುದಾಗಿದೆ.

ಕಾರ್ಯಗತ ಆಗದ ನೀರಾವರಿ ಯೋಜನೆ : ಎರಡು ವರ್ಷಗಳ ಹಿಂದೆ ನಗರಸಭೆ ವ್ಯಾಪ್ತಿ, ಕೈಗಾರಿಕಾ ಪ್ರದೇಶಗಳಲ್ಲಿ ಮಳೆ ನೀರು ಕಡ್ಡಾಯಗೊಳಿಸಲು ಅಂದಿನ ಜಿಲ್ಲಾಧಿಕಾರಿ ಕರೀಗೌಡ ಆದೇಶ ನೀಡಿದ್ದರು. ಆರಂಭದಲ್ಲಿ ಇದು ಕಾರ್ಯಗತವಾಯಿತಾದರೂ ಇನ್ನೂ ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ವಿಯಾಗಿಲ್ಲ. ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಕಡ್ಡಾಯ ಕಾನೂನು ಜಾರಿಯಾಗಬೇಕಿದೆ.

ಸದ್ಯಕ್ಕೆ ಜಕ್ಕಲಮಡುಗುವಿನಿಂದ ನಗರಕ್ಕೆ ನೀರು ಪೂರೈಕೆ ಆಗುತ್ತಿರುವುದರಿಂದ ಪರಿಸ್ಥಿತಿ ತಿಳಿಯಾಗಿದೆ.ನಗರದಲ್ಲಿ ನೀರು ಸರಬರಾಜಿಗೆ ಮೀಟರ್‌ಗಳನ್ನು ಅಳವಡಿಸುವ ಕಾರ್ಯ ಆರಂಭವಾಗಿ 3 ವರ್ಷ ಕಳೆದರೂ ಇನ್ನೂ ಕಾರ್ಯಗತವಾಗಿಲ್ಲ.

ಎತ್ತಿನಹೊಳೆ ಯೋಜನೆಗಾಗಿ ನಿರ್ಮಿಸಲಾಗುತ್ತಿರುವ ಬೈರಗೊಂಡ್ಲು ಜಲಾಶಯದ ವಿವಾದ ಇನ್ನೂ ಬಗೆಹರಿದಿಲ್ಲ. ಈ ನ ಡುವೆ ನೆಲ ಮಂಗಲ, ದೊಡ್ಡ ಬಳ್ಳಾ ಪುರ ತಾಲೂಕುಗಳಿಗೆ ವೃಷ ಭಾವತಿ, ನಾಯಂಡರಹಳ್ಳಿಯಿಂದ ಶುದ್ಧೀಕರಿಸಿದ ನೀರು ಹರಿಸುವ ಯೋಜನೆ ರೂಪಿಸಲಾಗಿದೆ. ಈ ಯೋ ಜನೆ ಎಷ್ಟರ ಮಟ್ಟಿಗೆ ಜಾ ರಿಯಾಗಬೇಕಿದೆ ಎನ್ನುವುದನ್ನು ನೋಡ ಬೇಕಿದೆ.

ಕೆರೆ-ಕುಂಟೆಗಳಲ್ಲಿ ನೀರಿಲ್ಲ  :

ಗ್ರಾಮಾಂತರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಕಾಡುತ್ತಿದೆ. ತಾಲೂಕಿನ ಒಂದೆರಡು ಕೆರೆಗಳನ್ನು ಹೊರತು ಪಡಿಸಿದರೆ ಉಳಿದ ಯಾವುದೇ

ಕೆರೆ,ಕುಂಟೆಗಳಿಗೂ ನೀರು ಬಂದಿಲ್ಲ. ನಗರದ ನಾಗರಕೆರೆಯಲ್ಲಿ ಮಲಿನ ನೀರು ಶೇಖರವಾಗಿದೆ. ಪ್ರತಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಸೂಕ್ತ ನಿರ್ವಹಣೆ ಇಲ್ಲದೇ ಹಲವಾರು ಘಟಕಗಳು ಮುಚ್ಚಿವೆ. ಈ ಬಾರಿಯ ಮಳೆಗಾಲದಲ್ಲಿ ಬೆಟ್ಟದ ಸಾಲಿನಲ್ಲಿಬರುವ ಇದರಿಂದಾಗಿ ಅಂತರ್ಜಲದ ಮಟ್ಟ ತೀವ್ರವಾಗಿ ಕುಸಿತ ಕಂಡಿದ್ದು ಪ್ರತಿ ದಿನವೂ ಕೊಳವೆ ಬಾವಿಗಳು ಬತ್ತಿ ಹೋಗುತ್ತಲೇ ಇವೆ.

112 ಗ್ರಾಮಗಳಲ್ಲಿ ನೀರಿನ ಸಮಸ್ಯೆ :

ದೊಡ್ಡಬಳ್ಳಾಪುರ ತಾಲೂಕಿನ 112 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಜಿಲ್ಲೆಯ 4 ತಾಲೂಕಿನ ಶಾಸಕರ ಟಾಸ್ಕ್ಪೋರ್ಸ್‌ ಸಭೆ ನಡೆಸಿಜಿಲ್ಲಾ ಪಂಚಾಯಿತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.30.75 ಕೋಟಿ ರೂ.ನ ಕ್ರಿಯ ಯೋಜನೆ ರೂಪಿಸಲಾಗಿದೆ. ತಾಲೂಕಿಗೆ 6 ಕೋಟಿ ರೂ. ಬೇಕಿದೆ.ಆದರೆ, ಕ್ರಿಯಾ ಯೋಜನೆಗೆ 2 ತಿಂಗಳು ಕಳೆದಿದ್ದರೂ ಯಾವುದೇ ಪ್ರಕ್ರಿಯೆ ನಡೆದಿಲ್ಲ. ತಾಲೂಕಿಗೆಬಿಡುಗಡೆ ಆಗಿರುವ ಹಣ 15 ಹಳ್ಳಿಗಳಿಗೆ ಮಾತ್ರಸಾಲುತ್ತದೆ. ಸರ್ಕಾರದ ಗಮನಕ್ಕೆ ತರಲಾಗಿದೆ ಎನ್ನುತ್ತಾರೆ ಶಾಸಕ ಟಿ.ವೆಂಕಟರಮಣಯ್ಯ.

ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ಟ್ಯಾಂಕರ್‌ಗಳಿಂದ ನೀರು ಸರಬರಾಜು ಮಾಡುತ್ತಿಲ್ಲ,ನೀರಿನ ಸಮಸ್ಯೆ ಬರಬಹುದಂತಹ ವಾರ್ಡ್‌ಗಳ ಪ್ರದೇಶಗಳಲ್ಲಿ 2020-21ನೇ ಸಾಲಿನನಗರಸಭಾ ನಿ ಯಡಿಯಲ್ಲಿ 20 ಕೊಳವೆಬಾವಿ ಹೊಸದಾಗಿ ಕೊರೆಯಲು ಕ್ರಮಕೈಗೊಳ್ಳಲಾಗುತ್ತಿದೆ, ಖಾಸಗಿ ಕೊಳವೆಬಾವಿಗಳನ್ನು ಗುರುತಿಸಲಾಗಿದೆ. ಜಿಲ್ಲಾಧಿ ಕಾರಿಗಳಆದೇಶದಂತೆ ಅವಶ್ಯಕತೆ ಇದ್ದಲ್ಲಿ ನಗರಸಭೆಯ ವಶಕ್ಕೆ ಪಡೆದು ನೀರು ಸರಬರಾಜು ಮಾಡಲುಕ್ರಮ ಕೈಗೊಳ್ಳಲಾಗುವುದು. -ಸಿ.ಎಂ.ಚಂದ್ರಶೇಖರ್‌, ನೀರು ಸರಬರಾಜು ವಿಭಾಗದ ಕಿರಿಯ ಅಭಿಯಂತರ

 

– ಡಿ.ಶ್ರೀಕಾಂತ್‌

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.