ಬೇಸಿಗೆ ಆರಂಭ; ಹಲವು ಗ್ರಾಮದಲ್ಲಿ ನೀರಿನ ಸಮಸ್ಯೆ

ಟ್ಯಾಂಕರ್‌ ನೀರು ಪೂರೈಕೆಯಲ್ಲಿ ತಾರತಮ್ಯ ಆರೋಪ , ಹಾಹಾಕಾರ ತೀವ್ರಗೊಳ್ಳುವ ಮೊದಲೇ ತಾಲೂಕು ಆಡಳಿತ ಕ್ರಮಕೈಗೊಳ್ಳಲಿ

Team Udayavani, Mar 14, 2021, 11:13 AM IST

ಬೇಸಿಗೆ ಆರಂಭ; ಹಲವು ಗ್ರಾಮದಲ್ಲಿ ನೀರಿನ ಸಮಸ್ಯೆ

ದೊಡ್ಡಬಳ್ಳಾಪುರ: ಈಗಾಗಲೇ ಬೇಸಿಗೆ ಆರಂಭವಾಗಿದ್ದು, ತಾಲೂಕಿನಲ್ಲಿ ನೀರಿನ ಸಮಸ್ಯೆ ತಲೆ ದೋರುತ್ತಿದೆ. ಕುಡಿಯುವ ನೀರಿಗೆ ಬೀದಿ ಜಗಳ ಉಲ್ಬಣಗೊಳ್ಳುವ ಸಾಧ್ಯತೆಯೂ ಹೆಚ್ಚಿದೆ.

ಬೀದಿ ಜಗಳ: ತಾಲೂಕಿನ ಸಿಂಪಾಡಿಪುರ ಗ್ರಾಮ ದಲ್ಲಿ ಕೊಳವೆಬಾವಿ ಬತ್ತಿ ಹೋಗಿದೆ. ಹೀಗಾಗಿ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸರಬ ರಾಜುಮಾಡುವ ಸಂದರ್ಭದಲ್ಲಿ ಕಾಲೋನಿ ಕಡೆಗೆ ಹೆಚ್ಚಿನ ನೀರು ಪೂರೈಸುತ್ತಿಲ್ಲ, ದನಕರು ಸಾಕಿರುವ ಒಂದುಕುಟುಂಬಕ್ಕೆ 10 ಬಿಂದಿಗೆ, ಯಾವುದೇ ಸಾಕು ಪ್ರಾಣಿಗಳು ಇಲ್ಲದ ಕುಟುಂಬಕ್ಕೂ 10 ಬಿಂದಿಗೆ ಲೆಕ್ಕದಲ್ಲಿನೀರು ಸರಬರಾಜು ಮಾಡಿದರೆ ಹೇಗೆ ಎನ್ನುವುದುಗ್ರಾಮಸ್ಥರ ಪ್ರಶ್ನೆಯಾಗಿದೆ. ಇದನ್ನು ಪ್ರಶ್ನಿಸಿದ್ದರಿಂದ ವಿನಾಕಾರಣ ಬೀದಿ ಜಗಳ ನಡೆಯುತ್ತಿದೆ. ಆದರೆ, ಕುಡಿಯುವ ನೀರಿನ ಬವಣೆ ಮಾತ್ರ ನೀಗಿಲ್ಲ ಎನ್ನುವುದು ಗ್ರಾಮ ಮಹಿಳೆಯರ ಅಳಲು.

ಕೆಲವು ಕಡೆ ಮಾತ್ರ ನೀರು ಪೂರೈಕೆ: ತಾಲೂಕಿನ ಹುಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಕತ್ತಿಹೊಸಹಳ್ಳಿ ಗ್ರಾಮದಲ್ಲಿ ಕೊಳವೆ ಬಾವಿ ಬತ್ತಿ ಹೋಗಿ ನಾಲ್ಕು ದಿನ ಕಳೆದಿದೆ. ಶಿವರಾತ್ರಿ ಹಬ್ಬದ ನಿಮಿತ್ತ ಎರಡು ದಿನ ಮಾತ್ರ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗಿತ್ತು.ನೀರು ತುಂಬಿದ ಟ್ಯಾಂಕರ್‌ ಎÇÉಾ ಬೀದಿಗಳಿಗೂಬರುತ್ತಿಲ್ಲ. ಮುಖ್ಯರಸ್ತೆಯಲ್ಲಿ ಒಂದು ಕಡೆ ಮಾತ್ರಬಂದು ನಿಲ್ಲಿಸುತ್ತಾರೆ. ಇದರಿಂದ ಗ್ರಾಮದಇತರೆಡೆಗಳಲ್ಲಿ ವಾಸ ಮಾಡುವ ಮನೆಯವರುನೀರು ಇಲ್ಲದೆ ಪರದಾಡುವ ಸ್ಥಿತಿ ಉಂಟಾಗಿದೆ.ಬೆಳಗ್ಗೆ, ಸಂಜೆ ನೀರು ಪೂರೈಸಲಿ: ಗ್ರಾಮದಲ್ಲಿಸಂಜೆ, ಬೆಳಗಿನ ವೇಳೆಯಲ್ಲಿ ನೀರಿನ ಟ್ಯಾಂಕರ್‌ ಬಂದರೆ ಎಲ್ಲರೂ ಮನೆಯಲ್ಲಿ ಇರುತ್ತಾರೆ. ಆಗ,ನೀರು ಹಿಡಿದಿಟ್ಟುಕೊಳ್ಳಲು ಅನುಕೂಲವಾಗುತ್ತದೆ.ಆದರೆ, ಟ್ಯಾಂಕರ್‌ ಮಧ್ಯಾಹ್ನದ ವೇಳೆ ಬರುವುದ ರಿಂದ ಬಹುತೇಕ ರೈತರು ಹೊಲದ ಕೆಲಸಕ್ಕೆ, ಕೂಲಿಕೆಲಸಕ್ಕೆ ಹೋಗಿರುತ್ತಾರೆ. ಇದರಿಂದ ಮನೆಯಲ್ಲಿನೀರು ಇಲ್ಲದೆ ಪರದಾಡುವ ಸ್ಥಿತಿ ಇದೆ ಎನ್ನುತ್ತಾರೆ ಗ್ರಾಮಸ್ಥರು.

ಕೊಳವೆ ಬತ್ತುತ್ತಿವೆ: ಈ ಬಾರಿಯ ಮಳೆಗಾಲದಲ್ಲಿ ಬೆಟ್ಟದ ಸಾಲಿನಲ್ಲಿ ಬರುವ ತಾಲೂಕಿನ ಒಂದೆರಡುಕೆರೆ ಹೊರತುಪಡಿಸಿದರೆ ಉಳಿದ ಯಾವುದೇ ಕೆರೆಕುಂಟೆ ತುಂಬಿಲ್ಲ. ಇದರಿಂದಾಗಿ ಅಂತರ್ಜಲದ ಮಟ್ಟ ತೀವ್ರ ಕುಸಿತ ಕಂಡಿದ್ದು, ಪ್ರತಿ ದಿನವೂಕೊಳವೆ ಬಾವಿ ಬತ್ತಿ ಹೋಗುತ್ತಲೇ ಇವೆ.ಕೊಳವೆ ಬಾವಿ ಕೊರೆಯಲು ಹಿಂದೇಟು: ಸರ್ಕಾರ ದಿಂದ ಹಣ ಬರುವುದು ತಡವಾಗುತ್ತದೆ ಎನ್ನುವ ಕಾರಣದಿಂದ ಗುತ್ತಿಗೆದಾರರು ಹೊಸ ಕೊಳವೆಬಾವಿಕೊರೆಯಲು ಮುಂದಾಗುತ್ತಿಲ್ಲ. ಅಲ್ಲದೆ, ಡೀಸೆಲ್‌ ಬೆಲೆ ಪ್ರತಿ ದಿನವೂ ಏರಿಕೆಯಾಗು ತ್ತಲೇ ಇದೆ. ಸರ್ಕಾರ ಮಾತ್ರ ಕೊಳವೆಬಾವಿ ಕೊರೆ ಯಲು ನೀಡುವ ಹಣದಲ್ಲಿ ಏರಿಕೆ ಮಾಡುತ್ತಿಲ್ಲ. ಇದು ಸಹ ಹೊಸ ಕೊಳವೆಬಾವಿ ಕೊರೆಯಿಸಲು ಸಮಸ್ಯೆಯಾಗಿದೆ. ನೀರಿನ ಸಮಸ್ಯೆ ತೀವ್ರವಾಗುವ ಮುನ್ನವೇ ತಾಲೂಕು ಆಡಳಿತ ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ.

 

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.