ಗ್ರಾಮಕ್ಕೆ ಬಂದ ಶಾಸಕರು ರಸ್ತೆ ನೋಡದೇ ವಾಪಸ್‌!

ಗ್ರಾಮಸ್ಥರ ಮೇಲೆ ಶಾಸಕ ಕಿಡಿ „ ರಸ್ತೆ ಸಮಸ್ಯೆ ವರದಿ ಮಾಡಿದ್ದಕ್ಕೆ ಮಾಧ್ಯಮದವರ ವಿರುದ್ಧ ಆಕ್ರೋಶ

Team Udayavani, Oct 21, 2021, 11:53 AM IST

Lawmakers who come to the village return without seeing the road!

ನೆಲಮಂಗಲ: ಗ್ರಾಮಸ್ಥರ ಪ್ರತಿಭಟನೆ ನಂತರ ಗ್ರಾಮಕ್ಕೆ ಬಂದ ಶಾಸಕ ಡಾ.ಕೆ. ಶ್ರೀನಿವಾಸಮೂ ರ್ತಿ ಅವರು, ವರದಿ ಮಾಡಿದ್ದ ಪತ್ರಿಕಾಮಾಧ್ಯಮದವರು ಹಾಗೂ ಪ್ರತಿಭಟನೆ ಮಾಡಿ ಮನವಿ ಮಾಡಿದ್ದ ಗ್ರಾಮಸ್ಥರ ವಿರುದ್ಧ ಕಿಡಿಕಾರಿ ಸಂಪೂರ್ಣ ರಸ್ತೆ ಪರಿಶೀಲನೆ ಮಾಡದೆ ಅರ್ಧಕ್ಕೆ ವಾಪಸ್‌ ಹೋಗಿದ್ದಾರೆ.

ತಾಲೂಕಿನ ಶ್ರೀನಿವಾಸಪುರ ಗ್ರಾಪಂ ವ್ಯಾಪ್ತಿಯ ತೊರೆಪಾಳ್ಯ ಗ್ರಾಮಕ್ಕೆ ಸ್ವಾತಂತ್ರ ಬಂದು 75 ವರ್ಷಗಳಾದರೂ, ಪ್ರತಿನಿತ್ಯ ಕೆಸರುಗದ್ದೆಯಂತಹ ಹಾಗೂ ಗುಂಡಿಗಳಿರುವ ರಸ್ತೆಯಲ್ಲಿ ಸಂಚರಿಸುವ ದುಸ್ಥಿತಿ ನೋಡಿ ಬೇಸತ್ತು ಗ್ರಾಮಸ್ಥರು ಪ್ರತಿ ಭಟನೆ ಮಾಡಿದ್ದರು. ಸಮಸ್ಯೆ ವಾಸ್ತವತೆ ಕಂಡ ಮಾಧ್ಯಮಗಳು ವರದಿ ಮಾಡಿದ್ದವು.

ಅಧಿಕಾರಿಗಳು ಸ್ಥಳ ಪರಿಶೀಲಿಸಿ ಕಾಮಗಾರಿ ಆರಂಭ ಮಾಡಿದ್ದಾರೆ. ಆದರೆ, 8 ವರ್ಷದ ನಂತರ ಗ್ರಾಮಕ್ಕೆ ಬಂದ ಶಾಸಕರು ಗ್ರಾಮದ ಜನರ ಸಮಸ್ಯೆ ಆಲಿಸದೇ ಪ್ರತಿಭಟನೆ ಮಾಡಿದ ಜನರ ಮೇಲೆ ವಾಗ್ಧಾಳಿ ನಡೆಸಿ ಮಾಧ್ಯಮದವರ ಮೇಲೆ ಕಿಡಿಕಾರಿ ಹೋಗಿರುವುದು ಸಾರ್ವಜನಿಕ ವಲ ಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ;- ಸಮಾಜಕ್ಕೆ  ವಾಲ್ಮೀಕಿ ಕೊಡುಗೆ ಅಪಾರ: ಅಜಯ್‌

ಶಾಸಕರ ಮೇಲೆ ಅನುಮಾನ: 2 ತಿಂಗಳ ಹಿಂದೆಯೇ ರಸ್ತೆ ಕಾಮಗಾರಿಗೆ ಬಗ್ಗೆ ಸಚಿವ ಈಶ್ವರಪ್ಪ ಅವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕರು, ಪತ್ರ ಪ್ರತಿಯನ್ನು ಗ್ರಾಮಸ್ಥರಿಗೆ ತೋರಿಸಿದರು. ಪತ್ರದ ಪ್ರತಿಯಲ್ಲಿ ದಿನಾಂಕ ಹಾಗೂ ಶಾಸಕರ ಸಹಿ ಇಲ್ಲ. ರಾತ್ರೋರಾತ್ರಿ ತರಾತುರಿಯಲ್ಲಿ ಸಿದ್ಧವಾದ ಪಟ್ಟಿಯನ್ನು ತಂದು ಜನರು ಹಾಗೂ ಮಾಧ್ಯಮಕ್ಕೆ ತೋರಿಸಿರುವುದು ಹಲವು ಅನುಮಾನ ವ್ಯಕ್ತವಾಗಿದೆ.

ಅಕ್ರಮ ರೆಸಾರ್ಟ್‌ನಲ್ಲಿ ಭರ್ಜರಿ ಭೋಜನ: ತೊರೆಪಾಳ್ಯ ಗ್ರಾಮಕ್ಕೆ ಭೇಟಿ ನೀಡುವ ಮೊದಲು ಬೈರಸಂದ್ರ ಗ್ರಾಮದಲ್ಲಿರುವ ಅಕ್ರಮ ರೆಸಾರ್ಟ್‌ ನಲ್ಲಿ ಕೆಲವು ಸದಸ್ಯರ ಜತೆ ಗೌಪ್ಯ ಮಾತುಕತೆ ಮಾಡಿದ ಶಾಸಕ ಡಾ.ಕೆ ಶ್ರೀನಿವಾಸಮೂರ್ತಿ ಅವರು, ಭರ್ಜರಿ ಭೋಜನ ಮಾಡಿ ಕಾರಿನಲ್ಲಿ ಕುಳಿತು ರಸ್ತೆ ಪರಿಶೀಲನೆ ಮಾಡಿದ್ದಾರೆ. ಅಕ್ರಮ ರೆಸಾರ್ಟ್‌ಗಳಿಗೆ ಶಾಸಕರು, ಸದಸ್ಯರು ಹೋದರೆ ಮಾಲೀಕರು ಸಕ್ರಮ ಮಾಡಿಕೊಳ್ಳಲು ಮನಸ್ಸು ಎಲ್ಲಿ ಮಾಡುತ್ತಾರೆ ಎಂಬ ಪ್ರಶ್ನೆ ಸ್ಥಳೀಯರು ಮಾಡಿದ್ದು, ಶಾಸಕರ ತರಾತುರಿ ಭೇಟಿ ಟೀಕೆಗೆ ಗುರಿಯಾಗಿದೆ.

 ಪತ್ರಿಕಾಮಾಧ್ಯಮಗಳ ವಿರುದ್ಧ ಆಕ್ರೋಶ: ಗ್ರಾಮದ ರಸ್ತೆ ಸಮಸ್ಯೆಯ ಬಗ್ಗೆ ವರದಿ ಮಾಡಿದ್ದ ಪತ್ರಿಕಾಮಾಧ್ಯಮದವರೇ ರಸ್ತೆ ಮಾಡಿಸಲಿದ್ದಾರೆ ಬಿಡಿ ಎಂದು ಬೇಜವಾಬ್ದಾರಿ ಉತ್ತರ ನೀಡಿದ್ದ ಶಾಸಕ ಡಾ.ಕೆ. ಶ್ರೀನಿವಾಸಮೂರ್ತಿ ಅವರು, ಗ್ರಾಮದ ಭೇಟಿ ಮಾಡಿದ ಸಂದರ್ಭದಲ್ಲಿ ಮಾಧ್ಯಮದವರ ಮೇಲೆ ಕಿಡಿಕಾರಿ ಶಾಸಕರನ್ನು ಪ್ರಶ್ನೆಯೇ ಮಾಡಬಾರದು. ನಮಗೆ ಸಮಸ್ಯೆ ಬಗೆಹರಿಸುವುದು ಗೊತ್ತು ಎಂದು ಟಾರ್ಗೆಟ್‌ ಮಾಡಿ ಮಾತನಾಡಿದ್ದಾರೆ.

ರಸ್ತೆ ವಾಸ್ತವ ಅರಿಯದ ಶಾಸಕ

ಗ್ರಾಮಕ್ಕೆ ಬರುವ ಮುಖ್ಯರಸ್ತೆ 800 ಮೀ. ಉದ್ದವಿದ್ದು, ಗುಂಡಿಬಿದ್ದು ಸಂಪೂರ್ಣ ಹಾಳಾಗಿದೆ. ಗ್ರಾಮಸ್ಥರು ಪಕ್ಕದ ಗ್ರಾಮದಲ್ಲಿ ಪಡಿತರ ತರಲು ಹೋಗುತ್ತಾರೆ. ಗ್ರಾಮಸ್ಥರ ಸಮಸ್ಯೆ, ರಸ್ತೆ ವಾಸ್ತವ ಅರಿಯದೇ ಶಾಸಕರು ಅವರ ಆಪ್ತರ ತೋಟದ ಮನೆಗೆ ಭೇಟಿ ನೀಡಿ ಗ್ರಾಮಸ್ಥರ ಮೇಲೆ ಕಿಡಿಕಾರಿ ಮುಖ್ಯರಸ್ತೆ ಪರಿಶೀಲನೆ ಮಾಡದೆ ವಾಪಸ್‌ ಹೋಗಿದ್ದಾರೆ.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.