ರೀಲರ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
ರೈತರ ಮೇಲಿನ ಗೂಂಡಾಗಿರಿ ಅಕ್ಷಮ್ಯವಾಗಿದ್ದು, ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ
Team Udayavani, Jan 20, 2022, 5:34 PM IST
ಚನ್ನಪಟ್ಟಣ: ರಾಮನಗರ ರೇಷ್ಮೆ ಗೂಡಿನ ಮಾರುಕಟ್ಟೆ ಯಲ್ಲಿ ರೈತರ ಮೇಲೆ ರೀಲರುಗಳು ನಡೆಸಿದ ದೌರ್ಜನ್ಯ ದಬ್ಟಾಳಿಕೆ ಖಂಡಿಸಿ ಹಾಗೂ ಹಲ್ಲೆ ನಡೆಸಿದ ರೀಲರ್ಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ತಾಲೂಕು ಬಿಜೆಪಿ ಯುವಘಟಕದ ಪದಾಧಿಕಾರಿಗಳು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಬಿಜೆಪಿ ರೈತಮೋರ್ಚಾ ತಾಲೂಕು ಅಧ್ಯಕ್ಷ ಬುಕ್ಕ ಸಾಗರ ಕುಮಾರ್ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿಗೆ ತೆರಳಿದ ರೈತಮೋರ್ಚಾ ಕಾರ್ಯಕರ್ತರು, ತಹಶೀಲ್ದಾರ್ ಪರವಾಗಿ ಕಚೇರಿ ಶಿರಸ್ತೇದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ, ಕೂಡಲೇ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಕಾನೂನು ಕ್ರಮ ಜರುಗಿಸ ಬೇಕು. ಯಾವುದೇ ಕಾರಣಕ್ಕೂ, ಈ ವಿಚಾರದಲ್ಲಿ ಲೋಪವೆಸಗಿ ರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ
ಆಗ್ರಹಿಸಿದರು.
ಗೂಂಡಾಗಿರಿ ಸಹಿಸಲ್ಲ: ಈ ಸಂದರ್ಭದಲ್ಲಿ ಮಾತನಾಡಿದ ರೈತಮೋರ್ಚಾ ಅಧ್ಯಕ್ಷ ಬುಕ್ಕಸಾಗರ ಕುಮಾರ್, ಮಾರುಕಟ್ಟೆಗೆ ಗೂಡು ತರುವ ರೈತರು, ಕಷ್ಟಪಟ್ಟು ಬೆಳೆದ ಗೂಡನ್ನು ತರುತ್ತಾರೆ. ಇದನ್ನು ಅಲ್ಲಿನ ರೀಲರ್ ಗಳು ಕಳ್ಳಮಾರ್ಗದಲ್ಲಿ ಕಸಿಯುವುದು, ಪ್ರಶ್ನಿಸುವ ರೈತರ ಮೇಲೆ ಹಲ್ಲೆ ಮಾಡುವುದು ಸೇರಿದಂತೆ ರಾಮ ನಗರ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ರೈತರ ಮೇಲಿನ ಗೂಂಡಾಗಿರಿ ಅಕ್ಷಮ್ಯವಾಗಿದ್ದು, ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದರು.
ಕಾನೂನು ಕ್ರಮ ಜರುಗಿಸಿ: ಕೋವಿಡ್ ಹಿನ್ನೆಲೆ ಸರಳವಾಗಿ ನಮ್ಮ ಪ್ರತಿಭಟನೆ ನಡೆಸುತ್ತಿದ್ದೇವೆ. ಇಲ್ಲವಾದಲ್ಲಿ ನಮ್ಮ ರೈತ ಘಟಕದ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುತಿತ್ತು ಎಂದು ಎಚ್ಚರಿಸಿದರು. ಜಿಲ್ಲಾಡಳಿತ ಈ ವಿಚಾರದಲ್ಲಿ ಉದಾಸೀನ ಮಾಡದೆ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ನಿಂಗೇಗೌಡ, ಉಪಾಧ್ಯಕ್ಷ ನೆರಳೂರು ರಾಮೇಗೌಡ, ಮೈಲನಾಯಕನ ಹೊಸಹಳ್ಳಿ ಉಮೇಶ್, ಕಾರ್ಯದರ್ಶಿ ವಿಜ ಯ್ ಕುಮಾರ್ ಹಾರೋಕೊಪ್ಪ, ಜಿಲ್ಲಾಕಾರ್ಯದರ್ಶಿ ಗರಕಹಳ್ಳಿ ಸಿದ್ದಪ್ಪ , ಯುವಮೋರ್ಚಾ ಅಧ್ಯಕ್ಷ ನಾಗವಾರ ಶಿವಕುಮಾರ್, ಕೋಟೆ ಚೇತನ್, ತಾಲೂಕು ಬಿಜೆಪಿ ಕಾರ್ಯದರ್ಶಿ ರಾಂಪುರ ಸತೀಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ