ಪ್ರಚೋದನಾತ್ಮಕ ಸಂದೇಶ ಹಂಚಿಕೊಂಡರೆ ಕಾನೂನು ಕ್ರಮ


Team Udayavani, Nov 9, 2019, 3:00 AM IST

samajika

ದೊಡ್ಡಬಳ್ಳಾಪುರ: ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಸಂದೇಶಗಳನ್ನು ಕಳುಹಿಸುವವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌ ಹೇಳಿದರು.

ನಗರದ ಗುರುರಾಜ ಕಲ್ಯಾಣ ಮಂದಿರದಲ್ಲಿ ಈದ್‌ ಮಿಲಾದ್‌ ಹಾಗೂ ಅಯೋಧ್ಯೆ ವಿವಾದದ ಸುಪ್ರೀಂ ಕೋರ್ಟ್‌ನ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿ ಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ವಿವಿಧ ಸಮುದಾಯದ ಮುಖಂಡರು, ಸಂಘಟನೆಗಳ ಪದಾಕಾರಿಗಳ ಸಮ್ಮುಖದಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹರಡುವ ಮೂಲಕ ಸಮಾಜದಲ್ಲಿ ಅಶಾಂತಿಗೆ ಮುಂದಾದರೆ ಯಾವುದೇ ಕಾರಣಕ್ಕು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಮೊಬೈಲ್‌ ಬಳಕೆದಾರರು ತಮ್ಮ ವಾಟ್ಸಆ್ಯಪ್‌, ಪೇಸ್‌ಬುಕ್‌ಗಳಿಗೆ ಸುಳ್ಳು ಸುದ್ದಿಗಳು ಹರಿದು ಬಂದರೆ ತಕ್ಷಣ ಪೊಲೀಸ್‌ ಠಾಣೆಗೆ ದೂರು ನೀಡಿ. ಸಾರ್ವಜನಿಕವಾಗಿ ಯಾವುದೇ ಹಬ್ಬ, ಆಚರಣೆಗಳನ್ನು ಮಾಡುವಂತಹ ಸಂದರ್ಭದಲ್ಲಿ ಆಯೋಜಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಮುಖರ ಪಟ್ಟಿಯನ್ನು ಪೊಲೀಸ್‌ ಠಾಣೆಗೆ ನೀಡುವ ಮೂಲಕ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು.

ಎಲ್ಲಾ ಸಮುದಾಯದ ಧಾರ್ಮಿಕ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಇದರಿಂದ ಕಳ್ಳತನಗಳನ್ನು ತಡೆಯಲು ಹಾಗೂ ಕಾನೂನು ತೊಡಕುಗಳು ಬಂದ ಸಂದರ್ಭದಲ್ಲೂ ಬಗೆಹರಿಸಿಕೊಳ್ಳಲು ಅನುಕೂಲವಾಗಲಿದೆ ಎಂದರು.ಎಲ್ಲಾ ಸಮುದಾಯದ ಹಿರಿಯರು ಸರಿ ತಪ್ಪುಗಳ ಕುರಿತು ಯುವಕರಿಗೆ ತಿಳಿ ಹೇಳಬೇಕು.ಇತ್ತೀಚೆಗೆ ಮೋಟಾರು ವಾಹನ ಕಾಯಿದೆಯಲ್ಲಿ ಸಾಕಷ್ಟು ರೀತಿಯ ಬದಲಾವಣೆಗಳು ಜಾರಿಗೆ ಬಂದಿವೆ.

ಇವುಗಳ ಬಗ್ಗೆ ಎಲ್ಲರು ತಿಳಿದುಕೊಳ್ಳಬೇಕು. ದ್ವಿಚಕ್ರ ವಾಹನಗಳಲ್ಲಿ ವೀಲಿಂಗ್‌ ಸೇರಿದಂತೆ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾದರೆ ಗಂಭೀರ ಶಿಕ್ಷೆ, ದಂಡ ಪಾವತಿಸುವುದು ಅನಿವಾರ್ಯವಾಗಲಿದೆ ಎಂದರು. ದೊಡ್ಡಬಳ್ಳಾಪುರ ಪೊಲೀಸ್‌ ಉಪವಿಭಾಗದಿಂದ ನ12ರಂದು ನಗರದಲ್ಲಿ ಒನಕೆ ಓಬವ್ವ ಪಡೆ, ನಾಗರಿಕ ಬಂದೂಕು ತರಬೇತಿ, ಟ್ರಾಫಿಕ್‌ ವಾರ್ಡನ್‌, ವಾಲ್‌ ಆಫ್‌ ಯೂನಿಟಿ ಸ್ಥಾಪನೆ ಮಾಡಲಾಗುತ್ತಿದೆ. ಎಂದರು.

ದೇಶದ ಅಥವಾ ವಿಶ್ವದ ಯಾವುದೋ ಭಾಗದಲ್ಲಿ ನಡೆಯುವ ಘಟನೆಗಳಿಗೆ ಇಲ್ಲಿ ಪ್ರತಿಕ್ರಿಯೆ ನೀಡುವಂತಹ ಕೆಲಸ ತಪ್ಪು. ಪೊಲೀಸ್‌ ಇಲಾಖೆಗೆ ಸರ್ವರೂ ಸಮಾನರು. ಈದ್‌ಮಿಲಾದ್‌ ರಾಮಜನ್ಮ ಭೂಮಿ ವಿವಾದದ ತೀರ್ಪು ಬರಬಹುದಾದ ಹಿನ್ನೆಲೆ ಎಲ್ಲರು ಒಟ್ಟಾಗಿ ನ್ಯಾಯಾಲಯದ ತೀರ್ಪನ್ನು ಗೌರವಿಸುವ ಮೂಲಕ ಶಾಂತಿ ಕಾಪಾಡಬೇಕಿದೆ ಎಂದರು.

ನ 11ರ ನಂತರ ನಗರದ ಪ್ರಮುಖ ರಸ್ತೆಗಳಲ್ಲಿ ಏಕಮುಖ ವಾಹನ ನಿಲುಗಡೆಗೆ ಕಾರ್ಯಾರಂಭ ಮಾಡುತ್ತಿದ್ದು ಸಾರಿಗೆ ನಿಯಮದ ಕುರಿತು ಜಾಗೃತಿ ಮೂಡಿಸಲಾಗಿದೆ. ಮುಂದಿನ ಹಂತ ನಿಯಮ ಉಲ್ಲಂಘಿಸಿದರೆ ದಂಢ ಅನಿರ್ವಾರ್ಯ ಎಂದು ಎಚ್ಚರಿಸಿದರು.

ಡಿವೈಎಎಸ್ಪಿ ಟಿ.ರಂಗಪ್ಪ ಮಾತನಾಡಿ, ಎಲ್ಲಾ ಧರ್ಮಗಳು ಸಮಾಜಕ್ಕೆ ಶಾಂತಿಯನ್ನು ಬೋಧಿಸಿವೆ. ಆದರೆ ಕೆಲ ಕಿಡಿಗೇಡಿಗಳು ಹುಚ್ಚು ಕಲ್ಪನೆಯಿಂದ ವೈಮನಸ್ಯ ಸೃಷ್ಟಿಸಿ ಅಶಾಂತಿಯನ್ನು ಉಂಟುಮಾಡಲು ಪ್ರಯತ್ನಿಸುತ್ತಿವೆ. ಸಾಮಾಜಿಕ ಜಾಲತಾಣವನ್ನು ನಾಗರೀಕರು ಎಚ್ಚರಿಕೆಯಿಂದ ಬಳಸಬೇಕು, ಯಾವುದೇ ಸಂಗತಿಯನ್ನು ವಿಮರ್ಶಿಸಿ ತಿಳಿದುಕೊಂಡ ನಂತರವೇ ಅದಕ್ಕೆ ಪ್ರತರಿಕ್ರಿಯಿಸಬೇಕೆ ಹೊರತು ಭಾವಾವೇಷಕ್ಕೆ ಒಳಗಾಗಬಾರದು ಎಂದರು.

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.