ಪರಿಸರ ಸ್ನೇಹಿ ಗಣೇಶನಿಗೆ ಆದ್ಯತೆಯಿರಲಿ


Team Udayavani, Aug 20, 2019, 3:00 AM IST

parisara-sne

ದೊಡ್ಡಬಳ್ಳಾಪುರ: ದೊಡ್ಡದಾದ ಹಾಗೂ ವಿವಿಧ ಬಣ್ಣಗಳಿಂದ ಶೃಂಗಾರಗೊಂಡಿರುವ ಗಣೇಶನನ್ನು ಪ್ರತಿಷ್ಠಾಪಿಸಿದರೆ ದೇವರು ವರ ನೀಡುತ್ತಾನೆ ಎಂಬ ತಪ್ಪು ಮನೋಭಾವ ಬೆಳೆದಿದೆ. ಅದು ನಿಲ್ಲಬೇಕು. ಪರಿಸರ ಸ್ನೇಹಿ ಗಣಪನಿಗೆ ಮೊದಲ ಆದ್ಯತೆ ನೀಡಬೇಕು ಎಂದು ಎಂದು ಪ್ರಗತಿಪರ ಕೃಷಿಕ ಶಿವಪ್ಪ ಹೇಳಿದರು. ನಗರದ ಬೆಸೆಂಟ್‌ ಪಾರ್ಕ್‌ ನಲ್ಲಿ ಸುಚೇತನ ಎಜುಕೇಷನಲ್‌ ಮತ್ತು ಚಾರಿಟಬಲ್‌ ಟ್ರಸ್ಟ್‌, ಪರಿಸರ ಸಿರಿ ಅಭಿವೃದ್ಧಿ ಸಂಘದಿಂದ ನಡೆದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ತಯಾರಿಕೆ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಮುಗಿದ ನಮ್ಮ ಪರಂಪರೆ: ಸಗಣಿಯಿಂದ ಪಿಳ್ಳೇರಾಯನ ಮಾಡಿ ಗಣಪ ನೆಂದು ಪೂಜಿಸುತ್ತಿದ್ದುದು ನಮ್ಮ ಪರಂಪರೆ. ಈ ಅಧುನಿಕ ಸಂಸ್ಕೃತಿಯಿಂದ ಪರಿಸರ ನಾಶವಾಗುತ್ತಿದ್ದು, ಪ್ರಕೃತಿಗೆ ವಿರುದ್ಧವಾಗಿ ನಡೆದರೆ ಅನಾಹುತಗಳು ಸಂಭವಿಸುತ್ತವೆ. ಪರಿಸರ ಇಲ್ಲಿದಿದ್ದರೆ ಮನುಷ್ಯನಿಲ್ಲ. ಈ ಸತ್ಯ ಪ್ರತಿಯೊಬ್ಬರ ಅರಿವಿಗೆ ಬರಬೇಕಿದೆ. ಮಳೆ, ಬೆಳೆ ಇಲ್ಲದೆ ಬರಗಾಲ, ಇನ್ನೊಂದೆಡೆ ಅತಿವೃಷ್ಟಿಯಿಂದಾಗಿ ಸಂಕಷ್ಟ ಅನುಭವಿಸುವಂತಾಗಿದೆ. ಇನ್ನಾದರೂ ಜನರಲ್ಲಿ ಪರಿಸರ ಕಾಳಜಿ ಮೂಡಬೇಕಿದೆ ಎಂದು ಹೇಳಿದರು.

ಮೂರ್ತಿ ನೀವೇ ಸಿದ್ಧಪಡಿಸಿ ಪೂಜಿಸಿ: ಪರಿಸರ ಸಿರಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥರೆಡ್ಡಿ ಮಾತನಾಡಿ, ಮಕ್ಕಳು ಗಣೇಶ ಮೂರ್ತಿ ಸಿದ್ಧಪಡಿಸಿಕೊಂಡು ಪೂಜಿಸುವಂತೆ ಮಾಡುವ ಉದ್ದೇಶದಿಂದ ಕಾರ್ಯಾಗಾರ ನಡೆಸಲಾಗುತ್ತಿದೆ. ನಾವೇ ಸಿದ್ಧಪಡಿಸಿದ ಗಣೇಶ ಮೂರ್ತಿ ಪೂಜಿಸುವುದರಿಂದ ಗಣೇಶ ಹಬ್ಬ ಮತ್ತಷ್ಟು ಖುಷಿಕೊಡಲಿದೆ. ಇದರಿಂದ ನಮ್ಮ ಸುತ್ತಲಿನ ಪರಿಸರವನ್ನು ಗಣೇಶ ಹಬ್ಬದ ನೆಪದಲ್ಲಿ ಹಾಳಾಗುವುದನ್ನು ತಪ್ಪಿಸಲು ಸಾಧ್ಯವಾಗಲಿದೆ ಎಂದರು.

ಗಣೇಶನ ಮೂರ್ತಿ ಸಿದ್ಧಪಡಿಸುವ ಕಲಾವಿದ ಬಿ.ಆರ್‌.ಬಸವರಾಜು, ಮಣ್ಣಿನಿಂದ ಗಣೇಶನ ಮೂರ್ತಿ ಸಿದ್ಧಪಡಿಸುವ ಕುರಿತು ಮಾರ್ಗದರ್ಶನ ನೀಡಿದರು. ಸುಮಾರು ನೂರಕ್ಕೂ ಹೆಚ್ಚು ಜನರು ಸ್ಥಳದಲ್ಲೇ ಗಣೇಶ ಮೂರ್ತಿ ಸಿದ್ಧಪಡಿಸಿಕೊಂಡು ಹಬ್ಬದಲ್ಲಿ ಪೂಜಿಸಲು ತಮ್ಮ ಮನೆಗಳಿಗೆ ಕೊಂಡೊಯ್ದರು. ಭಾರತ್‌ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್‌.ಸಿಂಧ್ಯ ಮಾತನಾಡಿದರು.

ಸುಚೇತನ ಎಜುಕೇಷನಲ್‌ ಮತ್ತು ಚಾರಿಟಬಲ್‌ ಟ್ರಸ್ಟ್‌ ಗೌರವ ಅಧ್ಯಕ್ಷ ಕೆ.ಎನ್‌. ಮಂಜುನಾಥ್‌, ಅಧ್ಯಕ್ಷ ಸುನಿಲ್‌ ಗೌ ಡ ಸಲಹೆಗಾರ ಜಿ.ರಾಜಶೇಖರ್‌, ಭವಿಷ್ಯ ಎಜುಕೇಷನ್‌ ಟ್ರಸ್ಟ್‌ ಅಧ್ಯಕ್ಷ ನಾಗರಾಜ್‌, ಸಿವಿಕ್‌ ನ್ಯೂಸ್‌ ವರದಿಗಾರ ಎ.ರಮೇಶ್‌, ಸುಚೇತನ ಟ್ರಸ್ಟ್‌ನ ಕಾರ್ಯದರ್ಶಿ ಪ್ರದೀಪ್‌, ಖಜಾಂಚಿ ಅನಿಲ್‌ ಗೌಡ, ಟ್ರಸ್ಟಿ ಪ್ರವೀಣ್, ಪಿ.ಎಸ್‌. ಲೋಕೇಶ್‌, ಶ್ರೀನಿವಾಸ್‌, ಶ್ರೀನಿಧಿ, ಪಿ.ಬಿ. ಲೋಕೇಶ್‌, ಭರತ್‌, ರೋಟ್ರಾಕ್ಟ್ ಕ್ಲಬ್‌ ಆಫ್‌ ವಿದ್ಯಾರಣ್ಯಪುರ ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.