ಸಿಎಂ ಅಧಿಕಾರ ಕೊಟ್ಟು ನೋಡಲಿ


Team Udayavani, Mar 30, 2019, 3:12 PM IST

cm-adhikara

ದೇವನಹಳ್ಳಿ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಒಂದು ದಿನ ತಮಗೆ ಅಧಿಕಾರ ಬಿಟ್ಟುಕೊಟ್ಟರೆ ಏನೆಲ್ಲಾ ಮಾಡಬಹುದು ಎಂಬುದನ್ನು ತೋರಿಸುತ್ತೇನೆ. ಅಕ್ರಮವೆಸಗುವ ಅಧಿಕಾರಿಗಳು, ಭೂಗಳ್ಳರನ್ನು ಮಟ್ಟಹಾಕಿ, ಕೆರೆಗಳ ಅಭಿವೃದ್ಧಿಪಡಿಸಲಾಗುವುದು ಎಂದು ಹಿರಿಯ ಸ್ವಾತಂತ್ರ ಹೊರಾಟಗಾರ ಡಾ.ಎಚ್‌.ಎಸ್‌.ದೊರೆಸ್ವಾಮಿ ಹೇಳಿದರು.

ನಗರದ ಬೈಪಾಸ್‌ ರಸ್ತೆಯಲ್ಲಿ ಕರ್ನಾಟಕ ರಾಜ್ಯ ರೈತ ನಾಯಕ ಪ್ರೊ.ನಂಜುಂಡ ಸ್ವಾಮಿ ಸ್ಥಾಪಿತ ರೈತಸಂಘ ಹಾಗೂ ಹಸಿರು ಸೇನೆ ವತಿಯಿಂದ ನಡೆದ ರಾಜ್ಯ ಮಟ್ಟದ ಸ್ವಾಭಿಮಾನಿ ಬೃಹತ್‌ ರೈತರ ಸಮಾವೇಶವನ್ನು ಗಿಡಕ್ಕೆ ನೀರುಣಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಬೆಂಗಳೂರಿನಲ್ಲಿ 1 ಸಾವಿರ ಕೆರೆಗಳಿದ್ದು, ಕೆಲವು ಕೆರೆಗಳಲ್ಲಿ ಕಟ್ಟಡ ನಿರ್ಮಾಣವಾಗಿವೆ.

ಅದಕ್ಕಾಗಿ ಒಂದು ದಿನ ಅಧಿಕಾರ ನೀಡಿದರೆ ಏನೆಲ್ಲಾ ಮಾಡಿ ತೋರಿಸುತ್ತೇನೆ. ಆಗಿನ ಕಾಲದಲ್ಲಿ ಬಾವಿಗಳನ್ನು ತೆಗೆದು ತೋಟ ಮತ್ತು ಕೃಷಿ ಮಾಡುತ್ತಿದ್ದರು. ರೈತರು ಹಾಗೂ ಅಧಿಕಾರಿಗಳಿಗೆ ತಿಳಿವಳಿಕೆ ಇಲ್ಲದ ಕಾರಣ ಹಾಗೂ ಪ್ರತಿ ಹೊಲಗಳ ಹತ್ತಿರ ಬಾವಿ ನಿರ್ಮಾಣವಾಗಿದ್ದರಿಂದ ಅಂತರ್ಜಲ ಕುಸಿತವಾಗುತ್ತಾ ಬಂದಿತು.

ಬೋರ್‌ವೆಲ್‌ಗ‌ಳನ್ನು ಸಹ ಕೊರೆಸುವಂತಾಯಿತು. ಇಡೀ ರಾಜ್ಯದಲ್ಲಿ ಜಲಕ್ಷಾಮ ಉಂಟಾಗಿದೆ ಎಂದರು. ಸರ್ಕಾರದ ನೀತಿಗಳಿಂದ ಜನರು ಮತ್ತು ರೈತರು ಸಮಸ್ಯೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೋರಾಟಗಳನ್ನು ಮಾಡಿದರೆ ನ್ಯಾಯ ಸಿಗಬೇಕು. ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸಲು ಸರಿಯಾದ ಮನೆಗಳ ವ್ಯವಸ್ಥೆಯಿಲ್ಲ.

ರೈತರು ಹೋರಾಟದ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರೊ.ನಂಜುಂಡಸ್ವಾಮಿ ರೈತರಿಗಾಗಿ ಹೋರಾಟಗಳನ್ನು ಮಾಡಿದ್ದಾರೆ. ಅವರು ತೀರಿಕೊಂಡ ಮೇಲೆ ಹೋರಾಟ ಕಡಿಮೆಯಾಗಿದೆ. ಈ ಭಾಗದಲ್ಲಿ ಟಿಪ್ಪು ಸುಲ್ತಾನ್‌ ಆಳ್ವಿಕೆ ರೈತರು ಬೆಳೆದ ಹಣ್ಣುಗಳು ದೇವನಹಳ್ಳಿಯ ಚಕ್ಕೋತ ಎಂಬ ಪ್ರಸಿದ್ಧಿಯಿದೆ. ನಮ್ಮ ಹಕ್ಕಿಗಾಗಿ ಹೋರಾಟ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಮೋದಿ ಬೆಂಬಲಿಸಲು ಸಾಧ್ಯವಿಲ್ಲ: ನಾವು ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ಬರಬೇಕು. ಲೋಕಸಭಾ ಚುನಾವಣೆಯಲ್ಲಿ ಯಾರನ್ನೂ ಬೆಂಬಲಿಸಬೇಕು ಎಂಬುವುದರ ಬಗ್ಗೆ ಇನ್ನೆರಡು ದಿನಗಳಲ್ಲಿ ತೀರ್ಮಾನ ಮಾಡಬೇಕು. ಮಂಡ್ಯದಲ್ಲಿ ಸುಮಲತಾ, ಬೆಂಗಳೂರು ದ‌ಕ್ಷಿಣ ಕ್ಷೇತ್ರದಲ್ಲಿ ಪ್ರಕಾಶ್‌ ರೈ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಇರುವ ಕಡೆಗಳಲ್ಲಿ ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ತೀರ್ಮಾನ ಮಾಡಲಾಗುವುದು.

ಯಾವುದೇ ಕಾರಣಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದರು. ಸ್ವಾತಂತ್ರ ಹೊರಾಟಗಾರ ಹಾಗೂ ಮಾಜಿ ಶಾಸಕ ಸುರಂ ರಾಮಯ್ಯ ಮಾತನಾಡಿ, ದೇಶದಲ್ಲಿ ರೈತರಿಗೆ ಸರಿಯಾದ ರಕ್ಷಣೆಯಿಲ್ಲ. ಮಾರುಕಟ್ಟೆಯ ವ್ಯವಸ್ಥೆಯಿಲ್ಲ. ಕೃಷಿ ಚಟುವಟಿಕೆಗಳು ನಶಿಸಿ ಹೋಗುತ್ತಿದೆ. ವಿಜ್ಞಾನ ಬೆಳೆದರೂ ಆಹಾರದ ಕೊರತೆ ಕಂಡು ಬರುತ್ತಿದೆ.

ಸರ್ಕಾರ ಹೆಚ್ಚಿನ ಚಿಂತನೆ ಮಾಡಬೇಕು. ಜಲ ಮೂಲಗಳನ್ನು ಹೆಚ್ಚಿಸುವ ಕೆಲಸ ಮಾಡಬೇಕು. ದಕ್ಷಿಣಕ್ಕೆ ಗಂಗಾ ನದಿ ಹರಿಸುವ ಯೋಜನೆಯನ್ನು ಮಾಡಿದರೆ ಈ ಭಾಗದಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತದೆ ಎಂದರು. ರೈತ ನಾಯಕಿ ಸಂದರ್ಶಿನಿ ಮಾತನಾಡಿ, ನೀರಿನ ಸಮಸ್ಯೆ ರೈತರನ್ನು ಹೆಚ್ಚು ಕಾಡುತ್ತಿದೆ.

ಇರುವ ನೀರಿನಲ್ಲಿಯೇ ಬೆಳೆಗಳನ್ನು ಬೆಳೆದರೂ ಸರಿಯಾದ ಬೆಲೆ ಸಿಗುತ್ತಿಲ್ಲ. ರೈತರು ಸಾವಯವ ಗೊಬ್ಬರಗಳನ್ನು ಹೆಚ್ಚು ಬಳಸಿದರೆ ಮಣ್ಣಿನ ಫ‌ಲವತ್ತತೆ ಹೆಚ್ಚಾಗುತ್ತದೆ ಎಂದರು. ರೈತ ಸಂಘ ರಾಜ್ಯಾಧ್ಯಕ್ಷ ಬಿಜಿ ಹಳ್ಳಿ ಬಿ.ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ವೇಳೆ ರಾಜ್ಯ ಉಪಾಧ್ಯಕ್ಷೆ ವಿಜಯ ಲಕ್ಷಿ, ರಾಜ್ಯ ಕಾರ್ಯಾಧ್ಯಕ್ಷ ಮಾಧವರೆಡ್ಡಿ, ಮಲ್ಲಿಕಾರ್ಜುನ ರೆಡ್ಡಿ, ಕಾರ್ಯದರ್ಶಿ ಮುನಿಕೃಷ್ಣಪ್ಪ (ತಮ್ಮಯ್ಯ) ರಾಜ್ಯ ಮುಖಂಡರಾದ ರಾಮು ಶಿವಣ್ಣ, ವೀರಸಿಂಗ್‌, ಜಯರಾಮಯ್ಯ, ಜಿಲ್ಲಾಧ್ಯಕ್ಷ ವಿ.ನಾಗೇಶ್‌, ಉಪಾಧ್ಯಕ್ಷ ವಿಜಯ್‌ ಕುಮಾರ್‌,

ಪ್ರಧಾನ ಕಾರ್ಯದರ್ಶಿ ಭುವನ ಹಳ್ಳಿ ವೆಂಕಟೇಶ್‌, ಜಿಲ್ಲಾ ಹಸಿರು ಸೇನೆ ಅಧ್ಯಕ್ಷ ಎಸ್‌.ಎಂ.ಉಮೇಶ್‌, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ನರೇಂದ್ರ ಕುಮಾರ್‌, ಉಪಾಧ್ಯಕ್ಷ ರಾಮಣ್ಣ, ತಾಲೂಕು ಅಧ್ಯಕ್ಷ ಮುನಿಶಾಮಪ್ಪ, ಪ್ರಧಾನ ಕಾರ್ಯದರ್ಶಿ ಜಯಶಂಕರ್‌, ಹಾಗೂ ರಾಜ್ಯದ ವಿವಿಧ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.