ತಳಮಟ್ಟದಲ್ಲಿ ಪಕ್ಷ ಸಂಘಟಿಸೋಣ
Team Udayavani, Jul 3, 2020, 6:40 AM IST
ದೇವನಹಳ್ಳಿ: ರಾಜ್ಯ ಮತ್ತು ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮುಂದಿನ ಚುನಾವಣೆಗಳಲ್ಲಿ ಮನ ದಟ್ಟು ಮಾಡಿಕೊಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದ್ಯಾವರ ಹಳ್ಳಿ ವಿ.ಶಾಂತಕುಮಾರ್ ತಿಳಿಸಿದರು. ತಾಲೂಕಿನ ಕುಂದಾಣ ವೃತ್ತದಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಹಳ್ಳಿಗಳಲ್ಲಿ ಪಕ್ಷವನ್ನು ಬೇರು ಮಟ್ಟದಲ್ಲಿ ಸಂಘಟಿಸಿ ಬಲವರ್ಧನೆ ಮಾಡಲಾಗುತ್ತದೆ. ಬಿಜೆಪಿ ಸರ್ಕಾರದ ಬೇಜವಾಬ್ದಾರಿ ನಡೆಯಿಂದ ರಾಜ್ಯದ ಜನರು ರೋಸಿಹೋಗಿದ್ದಾರೆ. ಕೋವಿಡ್ 19 ಕಾಯಿಲೆ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ನ ಜನಪರ ನಿಲುವು ಮುಂದಿಟ್ಟುಕೊಂಡು ಮತ್ತೇ ಅಧಿಕಾರಕ್ಕೆರಲು ಶ್ರಮಿಸಬೇಕು.
ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾಗಿರುವು ದ ರಿಂದ ಎಲ್ಲರಿಗೂ ಸಂತಸ ತಂದಿದೆ. ಯುವಕರಲ್ಲಿ ಹೊಸ ಚೈತನ್ಯ ಮೂಡಿಸಿದ್ದಾರೆ. ಅದರ ಮುಂದೆ ಮೋದಿ ಅಲೆ ನಡೆಯುವುದಿಲ್ಲ ಎಂದರು. ಛಲವಾದಿ ಮಹಾಸಭೆ ತಾಲೂಕು ಅಧ್ಯಕ್ಷ ಕೆ.ವಿ. ಸ್ವಾಮಿ ಮಾತನಾಡಿದರು. ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಮಾರುತಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಾರುತಿ, ಮುಖಂಡ ಬಿ.ವಿ.ಸ್ವಾಮಿ ಇದ್ದರು.