ಕಾಮಗಾರಿ ಗುಣಮಟ್ಟ ಕಾಪಾಡಿ: ಡೀಸಿ


Team Udayavani, Oct 17, 2020, 2:49 PM IST

br-tdy-1

ದೇವನಹಳ್ಳಿ: ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಂಡಿ ರುವ ಕಾಮಗಾರಿಗಳ ಗುಣಮಟ್ಟಉತ್ತಮವಾಗಿರಬೇಕೆಂದು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ತಾಲೂಕಿನ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಅಭಿವೃದ್ಧಿ ಕಾರ್ಯಗಳಿಗಾಗಿಯೇ ಸಾಕಷ್ಟು ಅನುದಾನವನ್ನು ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ಮೀಸಲಿಡಲಾಗಿದ್ದು, ಸಮರ್ಪಕವಾಗಿ ಅನುದಾನ ಬಳಕೆಮಾಡುವ ಮೂಲಕ ದುರ್ಬಲ ವರ್ಗದವರ ಧ್ವನಿಯಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದರು.

ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ ನಿಗದಿಪಡಿಸಿರುವ ಭೌತಿಕ ಮತ್ತು ಆರ್ಥಿಕ ಗುರಿಯನ್ನು ಪೂರ್ಣವಾಗಿಸಾಧಿಸಬೇಕು. ಆಹಾರ ಮತ್ತು ನಾಗರಿಕಸರಬರಾಜು ಇಲಾಖೆಯು ಬಾಕಿ ಉಳಿದಿರುವ 2018-19 ನೇ ಸಾಲಿನಪಡಿತರ ಚೀಟಿ ವಿತರಣೆ ಕಾರ್ಯವನ್ನು ತ್ವರಿತವಾಗಿ ಪೂರೈಸುವಂತೆ ತಿಳಿಸಿದರು.ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದಡಿ ವಿವಿಧ ಯೋಜನೆಗಳ ಫ‌ಲಾನುಭವಿಗಳ ಬದುಕು ಸಕಾರಾ ತ್ಮಕವಾಗಿ ಬದಲಾಗುವ ನಿಟ್ಟಿನಲ್ಲಿ ಅಭಿವೃದ್ಧಿಕಾರ್ಯಕ್ರಮಕೈಗೊಂಡು ಯೋಜನೆಗಳುಅರ್ಹ ಫ‌ಲಾನುಭವಿಗಳಿಗೆ ತಲುಪುವಂತೆಕ್ರಮಕೈಗೊಳ್ಳಲು ಸೂಚಿಸಿದರು.

ಸಭೆಯಲ್ಲಿ ಸಮಾಜಕಲ್ಯಾಣಇಲಾಖೆ ಉಪನಿರ್ದೇಶಕ ಹನುಮಂತರಾಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಉಪನಿರ್ದೇಶಕಿ ಪುಷ್ಪಾ, ಜಿ.ರಾಯ್ಕರ್‌ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಲಿ :

ನೆಲಮಂಗಲ: ಉತ್ತರ ಪ್ರದೇಶದ ದಲಿತ ಯುವತಿ ಮೇಲೆ ಅತ್ಯಾಚಾರದಂತಹ ಹೀನ ಕೃತ್ಯ ಮಾಡಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆವಿಧಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಹನುತರಾಯಪ್ಪ ಒತ್ತಾಯಿಸಿದ್ದಾರೆ.ನಗರದ ತಾಲೂಕು ಕಚೇರಿ ಆವರಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಅತ್ಯಾಚಾರಿ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಪ್ರತಿಭಟನೆ ನಡೆಸಿ ಮಾತನಾಡಿದರು.

ದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರಗಳು ನಡೆಯುತ್ತಿರುವುದು ಖಂಡನೀಯ. ಇಂತಹಕೃತ್ಯ ನಡೆಸುವ ಆರೋಪಿಗಳಿಗೆ ಕಾನೂನು ರೀತಿ ಶಿಕ್ಷೆ ನೀಡಬೇಕಾದ ಉತ್ತರ ಪ್ರದೇಶದ ಪೊಲೀಸರು ಅತ್ಯಾಚಾರದಿಂದ ಮೃತವಾದ ಯುವತಿಯ ಅಂತ್ಯಕ್ರಿಯೆ ಮಾಡಲು ಪೋಷಕರಿಗೆ ಅವಕಾಶ ನೀಡದೆ ಅಮಾನವೀಯತೆ ಮೆರೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆರೋಪಿಗಳಿಗೆ ಸಂವಿಧಾನದ ಕಾನೂನಿನ ಮೂಲಕ ಕಠಿಣ ಕ್ರಮ ಕೈಗೊಂಡು ಗಲ್ಲುಶಿಕ್ಷೆ ವಿಧಿಸಿ ಮುಂದಿನ ದಿನಗಳಲ್ಲಿ ಈರೀತಿ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ದೇಶದಲ್ಲಿ ದಲಿತರ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ಸಂಪೂರ್ಣವಾಗಿ ನಿಲ್ಲಬೇಕು ಎಂದು ಮನವಿ ಮಾಡಿದರು. ಈ ವೇಳೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಘಟನಾಸಂಚಾಲಕ ಗಂಗಾಧರ್‌, ಶಿವಕುಮಾರ, ಖಜಾಂಚಿ ದಂಡು ವಯ್ಯ, ಕಾರ್ಯದರ್ಶಿ ಮೈಲಾರಪ್ಪ, ಜಿಲ್ಲಾ ಸಮಿತಿಯ ರವೀಂದ್ರ, ಪದಾಧಿಕಾರಿಗಳಾದ ಹೆಚ್‌.ಗಂಗರಾಜು, ನರಸಿಂಹಯ್ಯ, ಜಯರಾಮ್‌, ಶಿವನಂದನಗರ ಮತ್ತಿತರರಿದ್ದರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.