ಕಾಲಮಿತಿಯಲ್ಲಿ ಕೆಲಸ ನಿರ್ವಹಿಸಿ


Team Udayavani, Oct 16, 2019, 3:00 AM IST

kalamiti

ದೇವನಹಳ್ಳಿ: ಕಾನೂನು ಬದ್ಧವಾಗಿ ಸಾರ್ವಜನಿಕ ಕೆಲಸವನ್ನು ನಿಗದಿತ ವೇಳೆಯಲ್ಲಿ ಮಾಡಿಕೊಡದೆ ವಿನಾಃಕಾರಣ ಜನರನ್ನು ಅಲೆದಾಡಿಸುವುದು ಕಾನೂನು ಅಪರಾದ ಎಂದು ಪರಿಗಣಿಸಲಾಗುವುದು ಎಂದು ಲೋಕಾಯುಕ್ತ ಡಿವೈಎಸ್‌ಪಿ ಶಶಿಕಲಾ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಬೆಂ.ಗ್ರಾಮಾಂತರ ಜಿಲ್ಲಾ ಲೋಕಾಯುಕ್ತ ವತಿಯಿಂದ ಜನ ಸಂಪರ್ಕ ಸಭೆಯಲ್ಲಿ ಕುಂದುಕೊರತೆಗಳ ಅರ್ಜಿ ಸ್ವೀಕರಿಸಿ ಮಾತನಾಡಿದರು.

ಯಾವುದೇ ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಕೆಲಸವನ್ನು ವಿಳಂಬ ಮಾಡಿದ್ದಲ್ಲಿ ನಿರ್ಭಯವಾಗಿ ದೂರನ್ನು ನೀಡಬಹುದು. 12 ಪ್ರಕರಣಗಳ ದೂರು ಬಂದಿದ್ದು, ಅದರಲ್ಲಿ 8 ಕಂದಾಯ ಇಲಾಖೆ, 3 ಪಂಚಾಯತ್‌ ರಾಜ್‌ ಇಲಾಖೆ, ವಿಜಯಪುರ ಪುರಸಭೆ 1 ಪ್ರಕರಣ ಬಂದಿರುತ್ತದೆ. ಅಧಿಕಾರಿಗಳು ನಿಗದಿತ ವೇಳೆಯಲ್ಲಿ ಜನರ ದೂರುಗಳನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದರು.

ದೂರುದಾರ ರಾಯಸಂದ್ರ ಸೋಮಶೇಖರ್‌ ಮಾತನಾಡಿ, ಕಸಬಾ ಹೋಬಳಿ ರಾಯಸಂದ್ರ ಗ್ರಾಮದ ಸರ್ವೆ ನಂ.44ರ ಸುಮಾರು 157 ಎಕರೆ ಸರ್ಕಾರಿ ಭೂಮಿಯನ್ನು ಈಗಾಗಲೇ ಭೂ ಮಂಜೂರಾತಿ ಮಾಡಿ. ಹಂಚಿಕೆಯ ನಂತರ ಉಳಿಕೆ ಜಮೀನನ್ನು ಸರ್ಕಾರದ ವತಿಯಿಂದ ಸಂಪೂರ್ಣ ಸರ್ವೆ ಮಾಡಿ, ರೆವೆನ್ಯೂ ಮಹಜರು ನಡೆಸಿ ಅಕ್ರಮ ಭೂ ಕಬಳಿಕೆದಾರರನ್ನು ಗುರ್ತಿಸಿ ವಿಚಾರಣೆಗೆ ಒಳಪಡಿಸಿ ಉಳಿಕೆ ಸರ್ಕಾರಿ ಭೂಮಿಯನ್ನು ಯಥಾವತ್ತಾಗಿ ರಾಯಸಂದ್ರ ಗ್ರಾಮದ ಅಭಿವೃದ್ಧಿಗೆ ಮತ್ತು ವಸತಿ ಹೀನರಿಗೆ ಹಾಗೂ ಇನ್ನಿತರ ಸಾರ್ವಜನಿಕ ಹಿತಾಸಕ್ತಿಗೆ ಭೂಮಿಯನ್ನು ಬಳಸಿಕೊಳ್ಳಬೇಕು. ಹಾಗೂ ಸರ್ಕಾರಿ ಭೂಮಿ ಎಂದು ನಾಮಫಲಕ ಅಳವಡಿಸಬೇಕು ಎಂದು ಒತ್ತಾಯಿಸಿದರು.

ದೂರುದಾರ ನಾರಾಯಣಸ್ವಾಮಿ ಮಾತನಾಡಿ, ಕೆಐಎಡಿ ನನಗೆ ಜಮೀನ ಬಗ್ಗೆ ವಂಚಿಸಿ ಪರಿಹಾರದ ಹಣ ನೀಡದೇ ಹಾಗೂ ನೋಟಿಸ್‌ ಕೂಡ ನೀಡದೆ ಯಾವುದೇ ರೀತಿಯ ಭೂ ಸ್ವಾಧೀನವನ್ನು ನನ್ನ ಗಮನಕ್ಕೆ ತರದೇ ಕಾನೂನು ಬಾಹಿರವಾಗಿ ಹಲವಾರು ದಾಖಲಾತಿಗಳನ್ನು ತಿರುಚಿ ಮನಸೋ ಇಚ್ಚೆಯಿಂದ ಕೆಐಎಡಿಬಿ ಅಧಿಧಕಾರಿಗಳು ಭೂ ಸ್ವಾಧೀನ ಪಡಿಸಿಕೊಂಡಿದ್ದು, ನನಗೆ ಬಹಳ ಅನ್ಯಾಯವಾಗಿದೆ ಎಂದು ಹೇಳಿದರು.

ಈ ವೇಳೆಯಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್‌ರಾದ ಚಿಕ್ಕರಾಜಶೆಟ್ಟಿ, ಪ್ರದೀಪ್‌ ನಾಗೇಶ್‌, ಶಿವರಾಜ್‌, ತಹಶೀಲ್ದಾರ್‌ ಅಜಿತ್‌ಕುಮಾರ್‌ ರೈ, ಇಒ ಟಿ.ಮುರುಡಯ್ಯ, ಪುರಸಭಾ ಮುಖ್ಯಾಧಿಕಾರಿ ಹನುಮಂತೇಗೌಡ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚನ್ನಬಸಪ್ಪ, ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.