ದೇವನಹಳ್ಳಿಯಲ್ಲಿ ಮಾವು ಮೇಳ


Team Udayavani, May 13, 2019, 3:00 AM IST

dev

ದೇವನಹಳ್ಳಿ: ರಾಜ್ಯ ರಾಜಧಾನಿಯಿಂದ ಜಿಲ್ಲಾಡಳಿತ ದೇವನಹಳ್ಳಿ ತಾಲೂಕಿಗೆ ಸ್ಥಳಾಂತರಗೊಂಡ ಬಳಿಕ ರೈತರಿಂದ ನೇರವಾಗಿ ಗ್ರಾಹಕರಿಗೆ ನೈಸರ್ಗಿಕವಾದ ಮಾಗಿದ ಮಾವಿನ ಹಣ್ಣನ್ನು ತಲುಪಿಸುವ ಉದ್ದೇಶದಿಂದ ಇದೇ ಪ್ರಥಮ ಬಾರಿಗೆ ಮಾವು ಮೇಳ ಹಮ್ಮಿಕೊಳ್ಳಲು ಚಿಂತನೆ ನಡೆಸುತ್ತಿದೆ.

ದೇವನಹಳ್ಳಿ-ಚಿಕ್ಕಬಳ್ಳಾಪುರ ರಸ್ತೆಯ ರಾಣಿ ಕ್ರಾಸ್‌ ಅಥವಾ ಸಾದಹಳ್ಳಿ ಬಳಿಯಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟೋಲ್‌ ಬಳಿ ಮಾವು ಮೇಳ ಆಯೋಜಿಸಲು ಅಧಿಕಾರಿಗಳು ನಿರ್ಧರಿಸುತ್ತಿದ್ದಾರೆ. ಬೆಂಗಳೂರಿನ ಲಾಲ್‌ಬಾಗ್‌ ನಲ್ಲಿ ಮೇ.30ರಿಂದ ಮಾವು ಹಾಗೂ ಹಲಸು ಮೇಳ ನಡೆಯುತ್ತಿರುವುದರಿಂದ ಅದೇ ಮಾದರಿಯಲ್ಲಿ ಜಿಲ್ಲೆಯಲ್ಲಿಯೂ ಸಹ ನಡೆಸಲು ನಿರ್ಧರಿಸುತ್ತಿದ್ದಾರೆ.

ಒಂದೇ ಸೂರಿನಡಿ ಹಲವಾರು ತಳಿ: ಜಿಲ್ಲೆಯ ರೈತರನಷ್ಟೇ ಅಲ್ಲದೇ ನೆರೆಯ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೂ ಅನುಕೂಲವಾಗುವಂತೆ ಮಾವು ಮೇಳವನ್ನು ಹಮ್ಮಿಕೊಳ್ಳಲಾಗಿದೆ. ನೈಸರ್ಗಿಕ ಗುಣಮಟ್ಟದ ಮಾವಿನ ಹಣ್ಣಗಳನ್ನು ಬೆಳೆಗಾರರಿಂದ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಈ ಮೇಳದಿಂದ ಸಹಕಾರಿ ಆಗಲಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಮಾವು ಬೆಳೆಗಾರರಿಗೆ ಉತ್ತಮ ಬೆಲೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಮಾವು ಮೇಳ ಆಯೋಜಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಮೇಳ ನೋಡುವ ಅವಕಾಶ: ಈ ಹಿಂದೆ ಮಾವಿನ ಮೇಳ ನೋಡಬೇಕೆಂದರೆ ಹಾಗೂ ಅಲ್ಲಿ ಮಾವು ಮಾರಾಟ ಮಾಡಬೇಕೆಂದರೆ ಬೆಂಗಳೂರು ನಗರದ ಲಾಲ್‌ ಬಾಗ್‌ ಹೋಗಬೇಕಿತ್ತು. ಆದರೆ ಈ ಬಾರಿ ಜಿಲ್ಲೆಯಲ್ಲಿ ಮಾವಿನ ಮಾರಾಟ ಮಾಡುವ ಸುವರ್ಣಾವಕಾಶ ಕಲ್ಪಿಸುತ್ತಿರುವುದರಿಂದ ವಿವಿಧ ತಳಿಯ ಹಣ್ಣುಗಳನ್ನು ಮಾವು ಮೇಳದಲ್ಲಿ ಬಾಯಿ ಚಪ್ಪರಿಸಿ ತಿನ್ನುವ ಅವಕಾಶ ಜಿಲ್ಲೆಯ ಜನತೆಗೆ ದೊರೆಯಲಿದೆ.

ಜಿಲ್ಲಾ ಕೇಂದ್ರವಾದ ಬಳಿಕ ದೇವನಹಳ್ಳಿಯಲ್ಲಿ ಮೊದಲ ಮಾವು ಮೇಳ ಆಯೋಜಿಸಲು ತೋಟಗಾರಿಕೆ ಇಲಾಖೆಯೂ ಸಹ ಉತ್ಸಾಹದಿಂದ ಮುಂದೇ ಬಂದು ತಿಂಗಳ ಅಂತ್ಯದ ವೇಳೆಗೆ ದೇವನಹಳ್ಳಿ ಭಾಗದ ಜನತೆಗೆ ಹಣ್ಣಿನ ಸವಿರುಚಿ ನೀಡುವಂತೆ ಆಗಿದೆ. ಜಿಲ್ಲೆಯಲ್ಲಿ ಮಾವುಮೇಳ ಹಮ್ಮಿಕೊಂಡಿರುವುದರಿಂದ ಸಾಕಷ್ಟು ಸಂಖ್ಯೆಯಲ್ಲಿ ರೈತರು ಮತ್ತು ಸಾರ್ವಜನಿಕರು ಭಾಗವಹಿಸುವಂತೆ ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಪ್ರಚಾರ ಕೈಗೊಳ್ಳಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳು ತ್ತಿದ್ದಾರೆ.

ನೋಂದಣಿಗೆ ಅವಕಾಶ: ಮಲ್ಲಿಕಾ, ಬಾದಾಮಿ, ರಸಪೂರಿ, ಸೇಂದೂರ, ತೋತಾಪುರಿ ಸೇರಿದಂತೆ ನಾನಾ ವೈವಿದ್ಯಮಯ ಹಣ್ಣುಗಳು ಒಂದೇ ಕಡೆ ಮೇಳೈಸಲಿದೆ. ಮೇಳದಲ್ಲಿ ಮಾವು ಮಾರಾಟ ಮಾಡಲು ಇಚ್ಚಿಸುವ ರೈತರು ಈ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು 080-29787453 ಹಾಗೂ ಹೆಸರನ್ನು ನೋಂದಣಿ ಮಾಡಿಕೊಂಡು ಬೆಳೆಗಾರರು ಹಾಗೂ ಗ್ರಾಹಕರು ಮೇಳದ ಪ್ರಯೋಜನ ಪಡೆಯಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಜಿಲ್ಲೆಯಲ್ಲಿ ಸುಮಾರು 4 ಹೆಕ್ಟೇರ್‌ ನಷ್ಟು ಮಾವು ಬೆಳೆದಿದ್ದು ಆಸಕ್ತ ಬೆಳೆಗಾಗರರು ಮೇಳದಲ್ಲಿ ಭಾಗವಹಿಸಿ ಮಾರಾಟ ಮಾಡಲು ತೋಟಗಾರಿಕೆ ಇಲಾಖೆಗೆ ಹೆಸರನ್ನು ನೋಂದಾಯಿಸುವಂತೆ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಮಾವು ಮೇಳ ಹಮ್ಮಿಕೊಳ್ಳಲಾಗುವುದು. ಬೆಳೆಗಾಗರರಿಗೆ ಇದರಿಂದ ಅನುಕೂಲವಾಗಲಿದೆ ಅದಕ್ಕಾಗಿ ಸಕಲ ಸಿದ್ಧತೆ ನಡೆಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದೇವನಹಳ್ಳಿ ಸಮೀಪದ ಸಾದಹಳ್ಳಿ ಹತ್ತಿರವಿರುವ ಟೋಲ್‌ ಬಳಿ ಮಾವು ಮೇಳಕ್ಕೆ ಜಾಗ ಗುರುತಿಸುವ ಕೆಲಸ ಪ್ರಗತಿಯಲ್ಲಿದೆ.
-ಕರೀಗೌಡ, ಜಿಲ್ಲಾಧಿಕಾರಿ

ಮಾವು ಮೇಳ ಮಾಡಲು ಸೂಕ್ತ ಜಾಗವನ್ನು ಹುಟುಕಾಟ ನಡೆಸಲಾಗುತ್ತಿದೆ. ಆಸಕ್ತ ರೈತರು ಹೆಸರು ನೋಂದಾಯಿಸಬಹುದು. ಜಿಲ್ಲೆ ಮಾತ್ರವಲ್ಲದೇ ನೆರೆಯ ಜಿಲ್ಲೆಯ ಬೆಳೆಗಾರರೂ ಮೇಳದಲ್ಲಿ ಭಾಗವಹಿಸಬಹುದು.
-ರುದ್ರೇಶ್‌, ತೋಟಗಾರಿಕೆ ಇಲಾಖೆ ಉಪನಿರ್ದೇಶಕ

* ಎಸ್‌ ಮಹೇಶ್‌

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.