ರೈತರ ಸಾಲ ಮನ್ನಾಕ್ಕೆ ಆಗ್ರಹ: ಪ್ರತಿಭಟನೆ


Team Udayavani, Feb 18, 2017, 3:54 PM IST

Murder-2.jpg

ದೊಡ್ಡಬಳ್ಳಾಪುರ: ರೈತರ ಸಾಲ ಮನ್ನಾ ಮಾಡಲು ಒತ್ತಾಯಿಸಿ ಹಾಗೂ ಬರಗಾಲ ಪರಿಹಾರಗಳಿಗಾಗಿ ಕೃಷಿ ಯ ಕಂಪನೀಕರಣವನ್ನು ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿ ಯಿಂದ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಆರ್‌.ಚಂದ್ರತೇಜಸ್ವಿ, ರೈತರ ಸಾಲ ಮನ್ನಾ ಬಗ್ಗೆ ಕೇಂದ್ರ ಬಜೆಟ್‌ನಲ್ಲಿ ಯಾವುದೇ ಯೋಜನೆ ಪ್ರಸ್ತಾಪವಿಲ್ಲ. ಈ ಬಜೆಟ್‌ ಉದ್ಯಮಿಗಳ ಪರವಾಗಿದೆಯೇ ಹೊರತು ರೈತರ, ಕಾರ್ಮಿಕರ ಪರವಾ ಗಿಲ್ಲ ಎಂದು ದೂರಿದರು.

ದೇಶದಲ್ಲಿ 8500 ಲಕ್ಷ ಕೋಟಿ ರೂ. ಉದ್ಯಮಿಗಳು ತೀರಿಸಲಾಗದ ಸಾಲ ಎಂದು ಘೋಷಣೆ ಮಾಡಿ ದ್ದಾರೆ. ಆದರೆ, ದೇಶದಲ್ಲಿ ರೈತರ ಸಾಲ ಇರುವುದೇ 2 ಲಕ್ಷ ಕೋಟಿ ರೂ., ರೈತರ ಖಾಸಗಿ, ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಇರುವ ಸಾಲವನ್ನು ಮನ್ನಾ ಮಾಡದಿದ್ದರೆ ಕೃಷಿಗೆ ಉಳಿಗಾಲವೇ ಇಲ್ಲ. ಬ್ಯಾಂಕ್‌ಗಳಲ್ಲಿ ರೈತರಿಗೆ ಹೆಚ್ಚು ಸಾಲ ನೀಡಲು ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದೆ.

ಆದರೆ, ಸಣ್ಣ ಹಿಡುವಳಿದಾರ ರೈತರಿಗೆ ಬ್ಯಾಂಕುಗಳಲ್ಲಿ ಸಾಲ ನೀಡುವುದಿಲ್ಲ, ಸಾಲ ಪಡೆಯುವ ಚೈತನ್ಯವೂ ರೈತರಿಗೆ ಇಲ್ಲದಾಗಿದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಪ್ರಾಂತ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ, ಕಾರ್ಯದರ್ಶಿ ಸಿ.ಎಚ್‌.ರಾಮಕೃಷ್ಣ, ಸಿಪಿಎಂ ತಾಲೂಕು ಕಾರ್ಯದರ್ಶಿ ರುದ್ರಾ ರಾಧ್ಯ, ತಾಲೂಕಿನ ರೈತ ಸಂಘದ ಮುಖಂಡರು, ಕೃಷಿಕರು ಮತ್ತಿತರರು ಭಾಗವಹಿಸಿದ್ದರು.

ಪ್ರಾಂತ ರೈತ ಸಂಘದ ಪ್ರಮುಖ ಬೇಡಿಕೆಗಳು
* ರೈತರ, ಕೂಲಿಕಾರರ ಮತ್ತು ಕಸುಬುದಾರರ ಎಲ್ಲಾ ರೀತಿಯ ಸಹಕಾರ ಸಂಘ, ಖಾಸಗಿ ಸಾಲ ಮನ್ನಾ ಮಾಡಬೇಕು.

* ಸ್ತ್ರೀಶಕ್ತಿ ಹಾಗೂ ಸ್ವ ಸಹಾಯ ಸಂಘಗಳ ಸಾಲ, ಎಸ್ಸಿ, ಎಸ್ಟಿ, ಬಿಸಿಎಂ, ದೇವದಾಸಿ ಪುನರ್‌ವಸತಿ ನಿಗಮದಲ್ಲಿ ಮಾಡಿರುವ ಸಾಲ ಮನ್ನಾ ಮಾಡಬೇಕು.

* ಅಗತ್ಯ ಬೆಳೆ ವಿಮೆ ಮತ್ತು ಬೆಳೆ ಪರಿಹಾರಕ್ಕಾಗಿ ಪ್ರತಿ ಎಕರೆಗೆ ಕನಿಷ್ಠ 50 ಸಾವಿರ ರೂ. ಪರಿಹಾರವನ್ನು ವಿತರಿಸಬೇಕು.

* ಕೃಷಿ ಕೂಲಿಕಾರರಿಗೆ ಉದ್ಯೋಗ ಪರಿಹಾರವಾಗಿ ಕುಟುಂಬಕ್ಕೆ ತಲಾ ಕನಿಷ್ಠ 25 ಸಾವಿರ ರೂ., ಉದ್ಯೋಗ ಖಾತ್ರಿ ಯೋಜನೆ ಮಾನವ ಕೆಲಸ 200 ದಿನಗಳಿಗೆ ವಿಸ್ತರಣೆ ಮಾಡಬೇಕು.

* 600 ರೂ.ಗೆ ಕೂಲಿ ಹೆಚ್ಚಳ, ರೈತರೂ ಕೃಷಿ ಹೊಂಡ, ತೋಟಗಾರಿಕೆ ಬೆಳೆಗಳಿಗೂ ಅನ್ವಯಿಸಬೇಕು.

* ಎಲ್ಲಾ ಬಡವರಿಗೆ ಉಚಿತ ಪಡಿತರ ಇರುವ ರೇಷನ್‌ ಸರಬರಾಜು ಮಾಡಬೇಕು, ನಗದು ವರ್ಗಾವಣೆ ಅಥವಾ ಕೂಪನ್‌ ಪದ್ಧತಿ ಕೈಬಿಡಬೇಕು.

* ಆಧಾರ್‌ ಸಂಖ್ಯೆ ಕಡ್ಡಾಯವಾಗಿ ಪಡೆಯುವ ಪದ್ಧತಿ ಕೈಬಿಡಬೇಕು, ಪ್ರತಿ ಗ್ರಾಪಂನಲ್ಲಿ ಮೇವಿನ ಬ್ಯಾಂಕ್‌ ತೆರೆಯಬೇಕು ಮತ್ತು ಉಚಿತವಾಗಿ ನೀಡಬೇಕು.

* ಗ್ರಾಮ ಹಾಗೂ ನಗರಗಳ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ, ಮುಂದಿನ ಬೆಳೆಗೆ ಬೀಜ, ಗೊಬ್ಬರ, ಕ್ರಿಮಿನಾಶಕ ಉಚಿತ ವಿತರಣೆ ಮಾಡಬೇಕು.

* ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌, ಸಾರ್ವಜನಿಕ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಮುಂದಿನ ವರ್ಷದ ಎಲ್ಲಾ ಶಿಕ್ಷಣ ಶುಲ್ಕ ಮನ್ನಾ ಮಾಡಬೇಕು.

* ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ, ಗ್ರಾಮಗಳ ಎಲ್ಲಾ ವಸತಿ ಹೀನರಿಗೆ ಉಚಿತ ನಿವೇಶನ, ಮನೆ ನೀಡಬೇಕು.

* ನೀರಾವರಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ 6 ಗಂಟೆ ತ್ರಿಪೇಸ್‌ ವಿದ್ಯುತ್‌ ಪೂರೈಕೆ, 18 ವರ್ಷ ಒಳಗಿನ ಅಂಗವಿಕಲರಿಗೂ ಮಾಶಾಸನ ನೀಡಬೇಕು.

* ಬಯಲುಸೀಮೆ ಜಿಲ್ಲೆಗಳ ಬರ ನೀಗಿಸಲು ಡಾ.ಪರಮಶಿವಯ್ಯ ವರದಿಯಂತೆ ನೀರಾವರಿ ಯೋಜನೆ ಜಾರಿ ಮಾಡಬೇಕು.

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.