ಹಿತ್ತಲಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶ
Team Udayavani, Sep 13, 2020, 12:58 PM IST
ದೊಡ್ಡಬಳ್ಳಾಪುರ ತಾಲೂಕಿನ ನಾಗಶೆಟ್ಟಹಳ್ಳಿ ತಾಂಡಾದ ಹಿತ್ತಲಲ್ಲಿ ಬೆಳೆದಿರುವ ಗಾಂಜಾ ಗಿಡಗಳು.
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಗಿಡ ಬೆಳೆದು ಅದನ್ನು ಮಾರಾಟ ಮಾಡಿ ಹಣ ಸಂಪಾದಿಸಬಹುದೆಂಬ ನಿರೀಕ್ಷೆಯಲ್ಲಿದ್ದ ವ್ಯಕ್ತಿಯೊಬ್ಬ ಪೊಲೀಸರ ಅತಿಥಿಯಾಗಿರುವ ಘಟನೆ ತಾಲೂಕಿನ ನಾಗಶೆಟ್ಟಹಳ್ಳಿ ತಾಂಡಾದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಸೋಮಲಾನಾಯಕ್ (50) ಬಂಧಿತ. ತನ್ನ ಮನೆ ಹಿತ್ತಲಲ್ಲಿ ಗಾಂಜಾ ಗಿಡ ಬೆಳೆದಿದ್ದನು. ಗಾಂಜಾ ಬೆಳೆಯಬಾರದು ಎಂದು ಗೊತ್ತಿದ್ದರೂ ಸೋಮಲಾನಾಯ್ಕ ತನ್ನ ಮನೆ ಹಿತ್ತಲಲ್ಲಿ ಬೆಳೆಸಿದ್ದನು. ಇನ್ನು ಕೆಲವೇ ಸಮಯದಲ್ಲಿ ಇವು ಕೊಯ್ಲಿಗೆ ಬರುತ್ತಿದ್ದವು. ಸೋಮಲಾನಾಯಕ್ ಗಾಂಜಾಗಿಡಗಳನ್ನು ಬೆಳೆದ ವಿಚಾರ ಗ್ರಾಮಸ್ಥರಿಗೆ ತಿಳಿಯದಂತೆ ಮುಚ್ಚಿಟ್ಟಿದ್ದ. ಈ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಡಿವೈಎಸ್ಪಿ ಟಿ.ರಂಗಪ್ಪ, ಸಬ್ ಇನ್ಸ್ ಪೆಕ್ಟರ್ ಸೋಮಶೇಖರ್ ಅವರ ನೇತೃತ್ವದ ಸಿಬ್ಬಂದಿಗಳಾದ ಅರ್ಜುನ ಲಮಾಣಿ, ಉದಯರಾಜು, ಕುಮಾರ, ಸುನೀಲ್ ಭಾಸಣಿ ತಂಡ ದಾಳಿ ಕಾರ್ಯಾಚರಣೆ ನಡೆಸಿತು.
ಹಿತ್ತಲಲ್ಲಿ ಗಾಂಜಾ ಬೆಳೆದಿರುವುದು ಪತ್ತೆಯಾಗಿದ್ದು, ಸುಮಾರು 2ಕೆ.ಜಿ. ಗಾಂಜಾ ಸೊಪ್ಪು ವಶಪಡಿಸಿಕೊಂಡಿರುವ ಹೊಸಹಳ್ಳಿ ಠಾಣೆ ಪೊಲೀಸರು, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್ ಸಮಸ್ಯೆ
Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ
Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್ ಸ್ಪರ್ಧೆ
Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ
Road Dispute: ರಸ್ತೆ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ