ಅನ್ಯ ಸಮುದಾಯದ ಯುವತಿ ಜೊತೆ ಮದುವೆ: ಬಹಿಷ್ಕಾರ ಹಾಕಿದ ತಿಗಳ ಸಮುದಾಯ ಮುಖಂಡರು


Team Udayavani, Jul 4, 2023, 2:39 PM IST

ಅನ್ಯ ಸಮುದಾಯದ ಯುವತಿ ಜೊತೆ ಮದುವೆ: ಬಹಿಷ್ಕಾರ ಹಾಕಿದ ತಿಗಳ ಸಮುದಾಯ ಮುಖಂಡರು

ನೆಲಮಂಗಲ: ಅಗ್ನಿವಂಶಕ್ಷತ್ರಿಯ (ತಿಗಳ) ಸಮುದಾ ಯ ವ್ಯಕ್ತಿಯೊಬ್ಬ ಅನ್ಯ ಸಮುದಾಯದ ಯುವತಿ ಯನ್ನು ಮದುವೆಯಾಗಿದ್ದಕ್ಕೆ, ತಿಗಳ ಸಮುದಾಯದ ಯಜಮಾನರುಗಳು ಬಹಿಷ್ಕಾರ ಮಾಡಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ದೂರು ಕೊಟ್ಟ ಹಿನ್ನೆಲೆಯಲ್ಲಿ, ತಿಗಳ ಯಜಮಾನರುಗಳು ಪೊಲೀಸ್‌ ಠಾಣೆ ಮುಂದೆ ಜಮಾಯಿಸಿ ಗ್ರಾಮಕ್ಕೆ ಸೇರಿಸುವುದಿಲ್ಲ ಎಂದು ಹೈಡ್ರಾಮ ನಡೆಸಿದರು.

ತಾಲೂಕಿನ ಮರಳಕುಂಟೆ ಗ್ರಾಮದ ತಿಗಳ ಸಮುದಾಯ ವ್ಯಕ್ತಿ ಮಧುಸೂಧನ್‌ ವೃತ್ತಿಯಲ್ಲಿ ವಕೀಲನಾಗಿದ್ದು, ಈತ ಕಳೆದ ಒಂದೂವರೆ ವರ್ಷದ ಹಿಂದೆ ವಿಶ್ವಕರ್ಮ ಜನಾಂಗದ ಯುವತಿಯನ್ನು ಮದುವೆಯಾಗಿದ್ದ, ಈಕೆ ಸಾಫ್ಟ್‌ವೇರ್‌ ಇಂಜಿನಿಯರ್‌ಯಾಗಿದ್ದು, ಗಂಡ ಹೆಂಡತಿ ನೆಮ್ಮದಿಯಾಗಿ ಬೆಂಗಳೂರಿನಲ್ಲಿ ಜೀವನ ನಡೆಸುತ್ತಿದ್ದಾರೆ. ಮದುವೆಯಾದ ದಿನದಿಂದಲೂ ತಿಗಳ ಸಮು ದಾಯದ ಮುಖಂಡರುಗಳು, ತುಮಕೂರು-ಬೆಂಗಳೂರು ಸೇರಿದಂತೆ ಹಲವಾರು ಯಜಮಾನರುಗಳು ಇವರನ್ನು ಯಾವುದೇ ತಿಗಳ ಸಮುದಾಯದ ಮನೆಗೆ ಸೇರಿಸ ಬಾರದು, ಮದುವೆ ಶುಭ ಸಮಾರಂಭಗಳಿಗೆ ಬರುವಂತಿಲ್ಲ ಇವರ ಮನೆಯಲ್ಲಿ ಯಾರಾದರೂ ಸತ್ತರೆ ಯಾರು ಸಹ ಹೋಗುವಂತಿಲ್ಲ ಎಂದು ಮನಸ್ಸಿಗೆ ಬಂದ ಹಾಗೆ ಮಧುಸೂದನ್‌ ಕುಟುಂಬಕ್ಕೆ ತೊಂದರೆ ಕೊಡಲು ಪ್ರಾರಂಭಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವಕೀಲ ವೃತ್ತಿಯಲ್ಲಿದ್ದ ಮಧುಸೂಧನ್‌ ದಾಬಸ್‌ಪೇಟೆ ಪೊಲೀಸ್‌ ಠಾಣೆಗೆ ಬಂದು ದೂರು ಸಲ್ಲಿಸಿದ್ದಾನೆ. ನಂತರ ಪೊಲೀಸರು ತಿಗಳ ಸಮುದಾಯದ ಮುಖಂಡರನ್ನು ಠಾಣೆಗೆ ಕರೆಸಿದಾಗ ಸುಮಾರು 500ಕ್ಕೂ ಹೆಚ್ಚು ಜನರು ಜಮಾಯಿಸಿ ಹೈಡ್ರಾಮ ನಡೆಸಿದ್ದಾರೆ.

ವಕೀಲ ಮಧುಸೂಧನ್‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ನಮ್ಮ ಸಮುದಾಯದ ಮೂಢಚಾರ ಹಾಗೂ ಕಟ್ಟುನಿಟ್ಟನ್ನು ಧಿಕ್ಕರಿಸಿ ನಮಗೆ ಸಮುದಾಯ ಸಮಾಜದಲ್ಲಿ ನ್ಯಾಯಯುತವಾಗಿ ಬದುಕಲು ಬಿಟ್ಟರೆ ಸಾಕು. ಬಹಿಷ್ಕಾರ ಪದ್ಧತಿ ಇಂದಿಗೂ ಜೀವಂತ ಇರು ವುದು ಎಷ್ಟು ಸರಿ, ಸಮುದಾಯದ ಯಜಮಾನರು ಎನಿಸಿಕೊಂಡಿ ರುವ ದೊಡ್ಡ ಮನುಷ್ಯರು ಹೀಗೆ ನಡೆದು ಕೊಳ್ಳುವುದು ಎಷ್ಟು ಸರಿ, ಅವರಲ್ಲೇ ನೂರಾರು ಲೋಪದೋಷಗಳಿದ್ದರೂ, ಸಹ ನಮ್ಮಂತವರ ಕುಟುಂಬಗಳಿಗೆ ಬಹಿಷ್ಕಾರ ಹಾಕಲು ಮುಂದಾಗುತ್ತಾರೆ, ಸದ್ಯ ನಾವು ಸಹ ಸಮುದಾಯದಿಂದ ಬೆಂದು ನೊಂದು ಪೊಲೀಸ್‌ ಠಾಣೆಗೆ ಬಂದಿದ್ದೇವೆ, ಇಲ್ಲಿನ ಸರ್ಕಲ್‌ ಇನ್‌ಸ್ಪೆಕ್ಟರ್‌ ಸಹ ನಾವಿದ್ದೇವೆ ಎನ್ನುವ ಭರವಸೆ ನೀಡಿದ್ದಾರೆ, ಇಂತಹ ಯುಗದಲ್ಲೂ ಸಹ ಮೂಢನಂಬಿಕೆಗಳು ಇರುವುದು ಎಷ್ಟು ಸರಿ ಎಂದರು.

 ಪ್ರತಿಕ್ರಿಯೆ ನೀಡಲು ನಕಾರ : ಮಧುಸೂಧನ್‌ ಎಂಬಾತ ಅನ್ಯ ಜಾತಿಯ ಯುವತಿಯನ್ನು ಮದುವೆಯಾಗಿದ್ದಾನೆ. ಸಮುದಾಯದ ಬಹಿಷ್ಕಾರ ವಿಷಯವಾಗಿ ಮಾಧ್ಯಮಗಳಿಗೆ ತುಮಕೂರು, ಕ್ಯಾತ್ಸಂದ್ರದ ಸಮುದಾಯದ ಯಜಮಾನರುಗಳು ಪ್ರತಿಕ್ರಿಯೆ ನೀಡಲು ನಿರಾಕರಿಸಿ ಸಮುದಾಯದ ಕಟ್ಟುನಿಟ್ಟು ನಮಗೆ ಸೇರಿದ್ದು ಎಂದು ಅಲ್ಲಿಂದ ಕಾಲ್ಕಿತ್ತರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.