Amrita Sarovar: ಅಮೃತ ಸರೋವರದ ಬಳಿ ಹುತಾತ್ಮರ ಸ್ಮಾರಕ 


Team Udayavani, Aug 15, 2023, 4:03 PM IST

tdy-9

ದೇವನಹಳ್ಳಿ: 77ನೇ ಸಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿರುವ ಬೆಂಗಳೂ ರು ಗ್ರಾಮಾಂತರ ಜಿಪಂ, ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳ ಅಮೃತ ಸರೋವರ ಅಂಗಳದಲ್ಲಿ ಹುತಾತ್ಮರ ಸ್ಮಾರಕದ ಶಿಲಾಫ‌ಲಕ ನಿರ್ಮಾಣಕ್ಕೆ ನಿರ್ಧರಿಸಲಾ ಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂ.ಗ್ರಾಮಾಂತರ ಜಿಲ್ಲೆಯ 155 ಜಲಮೂಲಗಳನ್ನು ಅಮೃತ ಸರೋವರಗಳಾಗಿ ಅಭಿವೃದ್ಧಿ ಪಡಿಸುವ ಗುರಿ ಯಲ್ಲಿ 104 ಅಮೃತ ಸರೋವರ ಕೆರೆಗಳ ಕಾಮಗಾರಿ ಪೂರ್ಣಗೊಂಡಿವೆ, ದೇವನಹಳ್ಳಿ ತಾಲೂಕಿನಲ್ಲಿ 25, ದೊಡ್ಡಬಳ್ಳಾಪುರ ತಾಲೂಕಿನಲ್ಲಿ 29, ಹೊಸಕೋಟೆ ತಾಲೂಕಿನಲ್ಲಿ 30, ನೆಲಮಂಗಲ ತಾಲೂಕಿನಲ್ಲಿ 20 ಅಮೃತ ಸರೋವರಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಒಟ್ಟು 101 ಗ್ರಾಮ ಪಂಚಾಯಿತಿಗಳ ವಿಶಿಷ್ಟ ಸ್ಮಾರಕ ಅನಾವರಣ ಗೊಳಿಸಲಾಗುತ್ತಿದೆ. ಪಂಚಾಯಿತಿ ವ್ಯಾಪ್ತಿಯ ಸ್ವಾತಂತ್ರ್ಯ ಹೋರಾಟಗಾರರು, ರಕ್ಷಣಾ ಸಿಬ್ಬಂದಿ, ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ, ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯದ ವೇಳೆ ಪ್ರಾಣ ತ್ಯಾಗ ಮಾಡಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ವೀರರ ಹೆಸರನ್ನು ಶಿಲಾ ಫ‌ಲಕದಲ್ಲಿ ಕೆತ್ತನೆ ಮಾಡಿ ಅಮೃತ ಸರೋವರಗಳ ಬಳಿ ಅಳವಡಿಸಲಾಗುತ್ತಿದೆ. ಒಂದು ವೇಳೆ ಗ್ರಾಪಂ ವ್ಯಾಪ್ತಿಯಲ್ಲಿ ವೀರರು ಲಭ್ಯವಿಲ್ಲದ ಕಡೆ ಸಾಮಾನ್ಯ ಸಮರ್ಪಣಾ ಶಿಲಾಫ‌ಲಕ ನಿರ್ಮಿಸಲಾಗುತ್ತಿದೆ.

ವಿನೂತನ ಕಾರ್ಯಕ್ರಮ: ಕೆರೆಗಳ ಸುತ್ತ ತಿರಂಗಾ ಯಾತ್ರೆ ಸೇರಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ್ವಾತಂತ್ರ್ಯೋತ್ಸವ ವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಅಮೃತ ಸರೋವರ ಕೆರೆ ದಂಡೆಯ ಮೇಲೆ ಗ್ರಾಮಸ್ಥರಿಗೆ ನಾನಾ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಮೊದಲಿಗೆ ತಿರಂಗಾ ಯಾತ್ರೆಯನ್ನು ಗ್ರಾಮದ ಸಮುದಾಯದವರೊಂದಿಗೆ ಬೆಳಗ್ಗೆ ಗ್ರಾಮಾದ್ಯಂತ ನಡೆಸಿ, ಅಮೃತಸರೋವರದ ಬಳಿ ಮುಕ್ತಾಯಗೊಳಿಸಲಾಗುತ್ತಿದೆ. ಬಳಿಕ ಅರಣ್ಯೀಕರಣ ಕೈಗೊಂಡ ಅಮೃತ ಸರೋವರ ಬಳಿ ಸಸಿಗಳನ್ನು ನೆಡುವುದು ಮತ್ತು ಅವುಗಳ ಆರೈಕೆ , ಸುಸ್ಥಿರತೆಗೆ ಪಣತೊಡಲಾಗುತ್ತದೆ.

 ಸ್ವಚ್ಛತಾ ಪ್ರತಿಜ್ಞೆ: ಸ್ವಚ್ಛತಾ ಪ್ರತಿಜ್ಞೆ ಅಮೃತ ಸರೋವರ ಕೆರೆ ಅಂಗಳದಲ್ಲಿ ಆಗಮಿಸಿದ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಅಮೃತ ಸರೋವರ ಕೆರೆಯ ಸುತ್ತಮುತ್ತಲಿನ ಪರಿಸರವನ್ನು ಮತ್ತು ನೀರಿನ ಮಾಲಿನ್ಯ ತಡೆಗಟ್ಟುವ ಜವಾಬ್ದಾರಿಯ ಸ್ವತ್ಛತಾ ಪ್ರತಿಜ್ಞೆ ಕೈಗೊಳ್ಳುವುದು.

ಮಕ್ಕಳಿಗೆ ವಿವಿಧ ಸ್ಪರ್ಧೆಗಳು: ಅಮೃತ ಸರೋವರ ತಾಣಗಳಲ್ಲಿ ಮಕ್ಕಳಿಗೆ ಚಿತ್ರಕಲೆ, ಘೋಷಣೆಗಳು, ಪ್ರಬಂಧ ಬರೆಯುವುದು, ರಂಗೋಲಿ, ಭಾಷಣ ಇತ್ಯಾದಿ ಸೇರಿದಂತೆ ಸ್ಪರ್ಧಾತ್ಮಕ ಚಟುವಟಿಕೆ ಆಯೋಜಿಸುವುದು. ಸಾಂಪ್ರ ದಾಯಿಕ ಗ್ರಾಮೀಣ ಆಟಗಳನ್ನು ಆಯೋಜಿಸಿ ಜಾನಪದ ಸಂಗೀತ, ನೃತ್ಯ, ಹಾಗೂ ಗ್ರಾಮೀಣ ಆಟಗಳಾದ ಖೋ-ಖೋ, ಲಗೋರಿ, ಹಗ್ಗ ಜಗ್ಗಾಟ, ಹಗ್ಗ ಜಿಗಿತ, ಕುಂಟ ಓಟ, ಕುರ್ಚಿ ಓಟ  ಆಯೋಜಿಸಲಾಗಿದೆ.

ಪ್ರಚಾರಕ್ಕೆ ಹ್ಯಾಶ್‌ ಟ್ಯಾಗ್‌ ಬಳಕೆ:  ಮೇರಾ ಅಮೃತ ಸರೋವರ ಎಂಬ ಹ್ಯಾಶ್‌ ಟ್ಯಾಗ್‌ನೊಂದಿಗೆ ಕಾರ್ಯಕ್ರಮದ ಚಿತ್ರಗಳನ್ನು ಜಾಲತಾಣದಲ್ಲಿ ಅಪ್ಲೋಡ್‌ ಮಾಡಲು ಮತ್ತು ಅಮೃತ ಸರೋವರ ನೀರಿನ ಬಳಕೆ ಸುತ್ತಲಿನ ನಿರ್ವಹಣೆಗೆ ಸಂಬಂಧಿಸಿದಂತೆ ಬಳಕೆದಾರರ ಗುಂಪಿಗೆ ಹಕ್ಕುಗಳ ಪ್ರಮಾಣ ಪತ್ರ ವಿತರಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಅತ್ಯುತ್ತಮ ಅಮೃತ ಸರೋವರಗಳ ನಿರ್ಮಾಣವನ್ನು ಗುರುತಿಸಿ ಪ್ರಥಮ, ದ್ವಿತೀಯ ಮತ್ತು ತೃತೀಯ ಪ್ರಶಸ್ತಿ ನೀಡಲು ಜಿಲ್ಲಾ ಪಂಚಾಯತ್‌ ನಿಂದ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದಾರೆ.

ಟಾಪ್ ನ್ಯೂಸ್

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Fraud  Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

Fraud Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Fraud  Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

Fraud Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.