ನಿರಂತರ ಮಳೆಗೆ ನೆಲಕಚ್ಚಿದ ರಾಗಿ ಬೆಳೆ

ಮುಂದುವರಿದಲ್ಲಿ ಭಾರೀ ನಷ್ಟ ಸಂಭವ

Team Udayavani, Oct 23, 2020, 4:08 PM IST

br-tdy-1

ಹೊಸಕೋಟೆ: ತಾಲೂಕಿನಲ್ಲಿ ಆಗುತ್ತಿರುವ ಮಳೆ ಒಂದೆಡೆ ರೈತರಿಗೆ ವರದಾನವಾದರೆ, ಮತ್ತೂಂದೆಡೆ ರಾಗಿ ಬೆಳೆಗೆ ಹಾನಿಯುಂಟಾಗಿದೆ.

ತಾಲೂಕಿನಲ್ಲಿ ಒಟ್ಟು 21,004 ಎಕರೆ ಪ್ರದೇಶದಲ್ಲಿ ರಾಗಿ ಬೆಳೆಯಲಾಗಿದ್ದು, ರೈತರು ಎರಡು ಹಂತದಲ್ಲಿ ಬಿತ್ತನೆ ಮಾಡಿದ್ದಾರೆ. ಶೇ.50 ರಷ್ಟು ರೈತರು ಜೂನ್‌ ಜುಲೈ ಹಾಗೂ ಉಳಿದವರು ಜುಲೈ-ಆಗಸ್ಟ್‌ನಲ್ಲಿ ಬಿತ್ತನೆ ಮಾಡಿದ್ದಾರೆ. ರೈತರ ಆಸೆಗೆ ತಣ್ಣೀರು: ಇದೀಗ ಮಳೆ ಹೆಚ್ಚಾದ ಕಾರಣ ಪ್ರಥಮ ಹಂತದ ರೈತರ ಜಮೀನುಗಳಲ್ಲಿನ ಸುಮಾರು 2,700 ಎಕರೆಯಷ್ಟು ಪ್ರದೇಶದಲ್ಲಿ ಕಟಾವಿಗೆ ಬಂದಿದ್ದ ರಾಗಿ ಸಂಪೂರ್ಣವಾಗಿ ನೆಲಕಚ್ಚಿದೆ. ಇದರಿಂದಾಗಿ ಉತ್ತಮ ಫ‌ಸಲು ನಿರೀಕ್ಷಿಸಿದ್ದ ರೈತರ ಆಸೆಗೆ ತಣ್ಣೀರು ಎರೆಚಿದಂತಾಗಿದೆ. ಆದರೆ, ತಡವಾಗಿ ಬಿತ್ತನೆ ಮಾಡಿರುವ ಪ್ರದೇಶದಲ್ಲಿ ಇದೀಗ ತೆನೆ ಬಂದಿದ್ದು, ಬಲಿಯಲು ಮಳೆ ಸಹಕಾರಿಯಾಗಿದೆ.

ಉತ್ಪಾದನೆ ಕುಸಿತ: ತಾಲೂಕಿನ ಕೆಲವೆಡೆ ತಿಂಗಳ ಹಿಂದೆ ಬಿತ್ತನೆ ಮಾಡಿದ ತರಕಾರಿ, ಸೊಪ್ಪು ಮೊಳಕೆ ಬರುವಷ್ಟರಲ್ಲಿಯೇ ಮಳೆ ಬಂದಿರುವ ಕಾರಣ ಅತಿಯಾದ ತೇವಾಂಶದಿಂದಾಗಿ ಬೆಳೆಗೆ ಹಾನಿಯಾಗಿ ರೈತರಿಗೆ ನಷ್ಟ ಉಂಟಾಗಿದೆ. ಇದರಿಂದಾಗಿ ಉತ್ಪಾದನೆ ಕುಸಿತಗೊಂಡು ಬೇಡಿಕೆಗೆ ಅನುಗುಣವಾಗಿ ಸರಬರಾಜು ಆಗದ ಕಾರಣ ಹಾಗೂ ರೈತರು ನಷ್ಟ ಸರಿದೂಗಿಸಿಕೊಳ್ಳಲು ಬೆಲೆ ಹೆಚ್ಚಿಸಿದ್ದಾರೆ. ಇದರಿಂದ ಗ್ರಾಹಕರಿಗೂ ಹೊರೆಯಾಗಿದೆ. ಆಗಸ್ಟ್‌ನಲ್ಲಿ ಇಂತಹದ್ದೆ ಪರಿಸ್ಥಿತಿಯಲ್ಲಿ ಕೊತ್ತಂಬರಿ ಸೊಪ್ಪಿನ ಬೆಲೆ 60 ರಿಂದ 80 ರೂ.ಗೆ ಮಾರಾಟವಾಗಿತ್ತು.

ಪ್ರಸ್ತುತ ಆಗುತ್ತಿರುವ ಮಳೆಯಿಂದಾಗಿ ತೇವಾಂಶ ವೃದ್ಧಿಗೊಂಡಿದ್ದು, ಇನ್ನೂ 2-3 ದಿನಗಳು ಮಳೆಯಾಗುವ ಸಂಭವವಿದ್ದು, ಕೆಲವು ತೋಟಗಾರಿಕೆ ಬೆಳೆಗಳಿಗೆ ಅನುಕೂಲವಾಗಲಿದೆ. ಮುಂದೆ ಆಗುವ ಮಳೆಯಿಂದ ನೀರು ಕೆರೆ ಹಾಗೂ ಕೊಳವೆ ಬಾವಿಗಳ ಅಂತರ್ಜಲ ಸುಧಾರಣೆಗೂ ಸಹಕಾರಿಯಾಗಲಿದೆ.

ಮಳೆಯಿಂದಾಗಿ ರಾಗಿ ಬೆಳೆ ರಕ್ಷಿಸಿಕೊಳ್ಳುವ ಬಗ್ಗೆ ರೈತರಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಜಮೀನುಗಳಲ್ಲಿ ನೀರು ನಿಲುಗಡೆಯಾಗದಂತೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಸೂಚಿಸಲಾಗುತ್ತಿದೆ. – ರೇಣುಕಾಪ್ರಸನ್ನ, ಕೃಷಿ ಅಧಿಕಾರಿ, ಹೊಸಕೋಟೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.