ಉತ್ತಮ ಮಳೆಗೆ ರಾಗಿ ಬೆಳೆ ಚೇತರಿಕೆ


Team Udayavani, Oct 9, 2019, 3:00 AM IST

uttama

ಹೊಸಕೋಟೆ: ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ರಾಗಿ ಬೆಳೆ ಪುನರ್ಜನ್ಮ ಪಡೆದಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ. ತಾಲೂಕಿನಲ್ಲಿ ಜನೇವರಿಯಿಂದ ಡಿಸೆಂಬರ್‌ವರೆಗೂ 782 ಮಿ.ಮೀ. ವಾಡಿಕೆ ಮಳೆಯಾಗಬೇಕಾಗಿದ್ದು, ಸೆಪ್ಟೆಂಬರ್‌ ಅಂತ್ಯಕ್ಕೆ 551 ಮಿ.ಮೀ. ನಿರೀಕ್ಷಿಸಿದ್ದು, 460 ಮಿ.ಮೀ. ನಷ್ಟು ಮಳೆ ದಾಖಲಾಗಿದೆ. ಶೇ.18ರಷ್ಟು ಕೊರತೆಯಾಗಿದೆ.

ಆಗಸ್ಟ್‌ 15ರವರೆಗೆ ರೈತರು ರಾಗಿ ಭಿತ್ತನೆ ಮಾಡಿದ್ದು, ಮಧ್ಯದಲ್ಲಿ ಮಳೆಯ ತೀವ್ರ ಅಭಾವ ತಲೆದೋರಿದ್ದ ಕಾರಣ ಬೆಳೆ ಬಾಡುವ ಹಂತ ತಲುಪಿತ್ತು. ಇದೀಗ ಬೀಳುತ್ತಿರುವ ಮಳೆಯಿಂದಾಗಿ ರಾಗಿ ಬೆಳೆ ಗಣನೀಯ ಚೇತರಿಕೆ ಪಡೆದುಕೊಂಡು ಕೆಲವೆಡೆ ತೆನೆಗಳು ಕಂಡುಬರುತ್ತಿವೆ.

ರಾಗಿ ಬಿತ್ತನೆಗಾಗಿ ಸಜ್ಜುಗೊಳಿಸಿದ್ದ ಜಮೀನಿನಲ್ಲಿ ಕೆಲವು ರೈತರು ಪರ್ಯಾಯವಾಗಿ ಹುರುಳಿ ಭಿತ್ತನೆ ಮಾಡಿದ್ದು, ತಾಲೂಕಿನಾದ್ಯಂತ ಸುಮಾರು 14 ಸಾವಿರ ಎಕರೆ ಪ್ರದೇಶದಲ್ಲಿ ರಾಗಿ ಬೆಳೆಯಲಾಗುತ್ತಿದ್ದು, ತಡವಾಗಿ ಮಳೆ ಪ್ರಾರಂಭಗೊಂಡ ಕಾರಣದಿಂದ ಶೇ.80ರಷ್ಟು ಮಾತ್ರ ಬಿತ್ತನೆ ಮಾಡಲಾಗಿದೆ.

2018ರಲ್ಲೂ ಸಹ ತಾಲೂಕನ್ನು ಬರ ಪೀಡತ ಪ್ರದೇಶವೆಂದು ಘೋಷಿಸಿದ್ದು, ವೀಕ್ಷಣೆಗಾಗಿ ಕೇಂದ್ರ ತಂಡ ಬರುವ ಒಂದೆರಡು ದಿನಗಳ ಹಿಂದೆ ಮಳೆಯಾಗಿ ಸುಧಾರಣೆ ಕಂಡುಬಂದು ಅಧಿಕಾರಿಗಳು ಪೇಚಿಗೆ ಒಳಗಾಗಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿತ್ತು. 2019ರಲ್ಲೂ ಸಹ ತಾಲೂಕನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಹಾನಿಗೊಂಡ ಬೆಳೆಗೆ ಅನುಗುಣವಾಗಿ ರೈತರು ಪರಿಹಾರ ಪಡೆಯಲು ಸಾಧ್ಯವಾಗಲಿದೆ.

ಕೆರೆಗಳ ನೀರು ಸಂಗ್ರಹಣೆಯಲ್ಲೂ ಸುಧಾರಣೆ: ತಾಲೂಕಿನ ಬಹಳಷ್ಟು ಕೆರೆಗಳಲ್ಲಿ ನೀರು ಸಂಗ್ರಹಣೆ ಸುಧಾರಣೆಗೊಂಡಿದ್ದು, ಶೇ.60 ರಿಂದ 70ರಷ್ಟು ಭರ್ತಿಯಾಗಿವೆ. ಅನುಗೊಂಡನಹಳ್ಳಿ ಹೋಬಳಿಯ ಅರೆಹಳ್ಳಿ ಕೆರೆ ತುಂಬಿ ಕೋಡಿ ಹರಿಯುತ್ತಿದೆ.

ತಾಲೂಕಿನಲ್ಲಿ ಮುಂಗಾರಿನ ತೀವ್ರ ಕೊರತೆಯ ನಡುವೆಯೂ ಇದೀಗ ಸುರಿಯುತ್ತಿರುವ ಮಳೆಯಿಂದ ಶೇ.50 ರಿಂದ 60ರಷ್ಟು ರಾಗಿ ಫ‌ಸಲು ಪಡೆಯಲು ಸಾಧ್ಯವಾಗಲಿದೆ. ಸರ್ಕಾರ ಬರ ತಾಲೂಕು ಎಂದು ಘೋಷಿಸಿದ್ದು, ಬೆಳೆ ಹಾನಿ ಪರಿಹಾರವನ್ನು ಶೀಘ್ರವಾಗಿ ನೀಡಲು ಕ್ರಮ ಕೈಗೊಂಡಲ್ಲಿ ಮಾತ್ರ ರೈತರು ಸಂಕಷ್ಟದಿಂದ ಪಾರಾಗಲು ಸಾಧ್ಯ ಎನ್ನುತ್ತಾರೆ ಉಪ್ಪಾರಹಳ್ಳಿ ಗ್ರಾಮದ ರೈತ ಮುನಿಸ್ವಾಮಪ್ಪ.

ಸೆಪ್ಟೆಂಬರ್‌ನಲ್ಲಿ ದಾಖಲಾದ ಮಳೆ ಪ್ರಮಾಣ: ಕಸಬಾ 392 ಮಿ.ಮೀ., ಸೂಲಿಬೆಲೆ 397ಮಿ.ಮೀ., ಜಡಿಗೇನಹಳ್ಳಿ 395ಮಿ.ಮೀ., ನಂದಗುಡಿ 508ಮಿ.ಮೀ., ಅನುಗೊಂಡನಹಳ್ಳಿ 514 ಮಿ.ಮೀ ಮಳೆಯಾಗಿದ್ದು, ಸರಾಸರಿ 459.8 ಮಿ.ಮೀ. ಗಳಾಗಿದೆ.

ಅಕ್ಟೋಬರ್‌ನಲ್ಲಿ ದಾಖಲಾದ ಮಳೆ ಪ್ರಮಾಣ: ಕಸಬಾ 108.8 ಮಿ.ಮೀ., ಸೂಲಿಬೆಲೆ 108.0ಮಿ.ಮೀ., ಜಡಿಗೇನಹಳ್ಳಿ 123.2ಮಿ.ಮೀ., ಅನುಗೊಂಡನಹಳ್ಳಿ ಹೋಬಳಿಯಲ್ಲಿ 106.8 ಮಿ.ಮೀ. ದಾಖಲಾಗಿದ್ದು, ಅ.1ರಿಂದ ಸರಾಸರಿ 446.8 ಮಿ.ಮೀ ಮಳೆಯಾಗಿದೆ.

ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದಾರು ವಾಡಿಕೆಗಿಂತಲೂ ಕಡಿಮೆಯಾಗಿರುವ ಕಾರಣದಿಂದ ನಿರೀಕ್ಷಿತ ರಾಗಿ ಫ‌ಸಲು ಪಡೆಯಲು ಸಾಧ್ಯವಾಗುವುದಿಲ್ಲ. ಬರುವ ಬೆಳೆಯನ್ನು ರಕ್ಷಿಸಿಕೊಳ್ಳುವ ಬಗ್ಗೆ ರೈತರಿಗೆ ಕೃಷಿ ಅಧಿಕಾರಿಗಳು ಸೂಕ್ತ ಮಾರ್ಗದರ್ಶನ ನೀಡುತ್ತಿದ್ದಾರೆ.
-ನಾಗರಾಜ್‌, ತಾಲೂಕು ಕೃಷಿ ಸಹಾಯಕ ನಿರ್ದೇಶಕ

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.