12 ವಾಹನಗಳ ಬ್ಯಾಟರಿಗಳನ್ನು ಕದ್ದ ದುಷ್ಕರ್ಮಿಗಳು: ಪ್ರಕರಣ ದಾಖಲು
Team Udayavani, Sep 15, 2022, 7:20 PM IST
ದೇವನಹಳ್ಳಿ: ಪಟ್ಟಣದ ಪ್ರಶಾಂತ್ ನಗರದಲ್ಲಿರುವ ಎಸ್ ಎಲ್ ಎನ್ ಎಸ್ ಭಾರತ್ ಗ್ಯಾಸ್ ಗೋಡೌನ್ ಬಳಿ ನಿಲ್ಲಿಸಲಾಗಿದ್ದ 12 ವಾಹನಗಳ ಬ್ಯಾಟರಿಗಳನ್ನು ದುಷ್ಕರ್ಮಿಗಳು ಕಳ್ಳತನ ಮಾಡಿದ್ದಾರೆ.
ಇದನ್ನೂ ಓದಿ:ನಟಿ ನೋರಾ ಫತೇಹಿಯನ್ನು 6 ಗಂಟೆಗಳ ಕಾಲ ಪ್ರಶ್ನಿಸಿದ ದೆಹಲಿ ಪೊಲೀಸರು
7 ಆಟೋ, 2 ಟಿಪ್ಪರ್, ಒಂದು 407, ಟಾಟಾ ವಾಹನಗಳ ಬ್ಯಾಟರಿಗಳನ್ನು ಕದ್ದು ಪರಾರಿಯಾಗಿದ್ದು, ಬೆಳಿಗ್ಗೆ ಕೆಲಸಕ್ಕೆ ಬಂದ ಚಾಲಕರು ವಾಹನಗಳನ್ನು ಸ್ಟಾರ್ಟ್ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಘಟನೆ ನಡೆದ ಸಂದರ್ಭ ವಾಹನಗಳ ಕಾವಲಿಗಿದ್ದ ಸೆಕ್ಯುರಿಟಿ ಸ್ಥಳದಲ್ಲಿಲ್ಲದೇ ಇದ್ದದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಕಳ್ಳತನವಾಗಿರುವ ವಾಹನಗಳ ಬ್ಯಾಟರಿಗಳ ಮೌಲ್ಯ 61,000 ಎಂದು ಅಂದಾಜಿಸಲಾಗಿದೆ.
ದೇವನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ