ಹೊಸಕೋಟೆ: ಕಾರಿನಲಿ ಹಣ ತರುತ್ತಿದ್ದ ವ್ಯಕ್ತಿ ದಾರಿ ಮಧ್ಯೆ ನಾಪತ್ತೆ


Team Udayavani, Apr 5, 2022, 3:52 PM IST

Untitled-1

ಹೊಸಕೋಟೆ: ತಾಲೂಕು ನಂದಗುಡಿ ಪೊಲೀಸ್‌ ಠಾಣೆಯಲ್ಲಿ ವ್ಯಾಪ್ತಿಯ ಬೆಂಗಳೂರು-ಚಿಂತಾಮಣಿ ರಸ್ತೆಯಲ್ಲಿ ಬೆಂಗಳೂರು ಮೂಲದ ಲೋಹಿತ್‌ (36) ಎಂಬುವರು ಕೆಲಸಗಾರರಿಗೆ ಸಂಬಳ ಕೊಡಲು ಕಾರಿನಲ್ಲಿ ಹಣ ತರುತ್ತಿರುವಾಗ ಮಾರ್ಗ ಮಧ್ಯದಲ್ಲಿ ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಾ.28ರಂದು ಸಂಬಳ ಸಲುವಾಗಿ ಹಣದೊಂದಿಗೆ ಬೆಂಗಳೂರಿನಿಂದ ನಂದಗುಡಿ ಯತ್ತ ಬರುತ್ತಿರುವಾಗ ನಾಪತ್ತೆ ಯಾಗಿದ್ದಾರೆ. ನಂದಗುಡಿಯ ಅರಣ್ಯದ ಬಳಿ ರಸ್ತೆಯ ಬದಿ ಕಾರು ಪಂಕ್ಚರ್‌ ಆಗಿದ್ದು, ಚಕ್ರ ಬದಲಿಸಿಕೊಂಡು ನಂದ ಗುಡಿಗೆ ಹೋಗಿ ಬರಲು ತಡವಾಗುತ್ತದೆ ಎಂದು ಲೋಹಿತ್‌ ಕುಟುಂಬಸ್ಥರಿಗೆ ಕರೆ ಮಾಡಿದ್ದಾರೆ. ಇತ್ತ ಹಳೇಊರು ರೇಸ್‌ ಟ್ರ್ಯಾಕ್‌ ಉಸ್ತುವಾರಿ ವಹಿಸಿಕೊಂಡಿದ್ದ ತಮ್ಮ ಕೆಲಸಗಾರ ನಿತಿನ್‌ ಲೋಹಿತ್‌ಗೆ ಕರೆ ಮಾಡಿದಾಗ ಕಾರು ಟಯರ್‌ ಚೇಂಜ್‌ ಮಾಡುತ್ತಿದ್ದು, ಬರುವುದಾಗಿ ತಿಳಿಸಿದ್ದಾರೆ.

ಕರೆ ಬಂದ ಅರ್ಧ ಗಂಟೆ ನಂತರ ಮತ್ತೆ ನಿತಿನ್‌ ಲೋಹಿತ್‌ಗೆ ಕರೆ ಮಾಡಿ ದಾಗ ಫೋನ್‌ ಸ್ವೀಚ್‌ ಆಫ್‌ ಆಗಿತ್ತು. 29ರಂದು ಬೆಳಗ್ಗೆ ನಿತಿನ್‌ ಕಾರು ನಿಂತ ಜಾಗಕ್ಕೆ ಹೋದಾಗ, ಕಾರು ಟಯರ್‌ ಬಿಚ್ಚಿದ್ದು, ಕಾರಿ ನೊಳಗಡೆ ರಕ್ತದ ಕಲೆಗಳು ಕಂಡು ಬಂದಿದ್ದು ಚಪ್ಪಲಿ, ಬೆಲ್ಟ್ ಬಿದ್ದಿದ್ದು, ಹಾಗೂ ಎಳೆದಾಡಿರುವ ಗುರುತುಗಳು ಪತ್ತೆಯಾಗಿದೆ.

ಕಾರಿನಲ್ಲಿದ್ದ ಲೋಹಿತ್‌ ಸುಳಿವು ಇರದೇ ಇದ್ದುದನ್ನು ಕಂಡು ನಂದ ಗುಡಿ ಪೊಲೀಸರಿಗೆ ಕರೆ ಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ 29 ರಂದು ಬೆಂಗಳೂರು ಕೆ.ಪಿ. ಅಗ್ರಹಾರದ ವಾಸಿ ಅಭಿನಾಗ್‌ ಎಂಬುವರು ನಂದಗುಡಿ ಪೊಲೀಸ್‌ ಠಾಣೆಯಲ್ಲಿ ನಮ್ಮ ಬಾವಾ ಕಾಣೆಯಾಗಿದ್ದಾರೆಂದು ದೂರು ದಾಖಲಿಸಿದ್ದಾರೆ.

ಸುದ್ದಿ ತಿಳಿದ ಸ್ಥಳಕ್ಕೆ ಧಾವಿಸಿದ ನಂದಗುಡಿ ಪೊಲೀಸರು ಕಾರನ್ನು ಪರಿಶೀಲನೆ ನಡೆಸಿ ವಶಕ್ಕೆ ಪಡೆದು ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಬಳಸಿ ತನಿಖೆ ನಡೆಸಿದರೂ ಡ್ರೋನ್‌ ಕ್ಯಾಮರಾ ಬಳಸಿ ಅರಣ್ಯವನ್ನೆಲ್ಲಾ ಸುತ್ತಾಡಿದರೂ ಸಹ ನಾಪತ್ತೆಯಾಗಿರುವ ಲೋಹಿತ್‌ ಸುಳಿವು ಸಿಕ್ಕಿಲ್ಲ.

ಬೆಂಗಳೂರು ಮೂಲದ ಲೋಹಿತ್‌ ಬಿನ್ನಿಪೇಟೆ ವಿಧಾನಸಭಾ ಕ್ಷೇತ್ರದ ಕೆ.ಪಿ. ಅಗ್ರಹಾರದ ನಿವಾಸಿಯಾಗಿದ್ದು, ಇವರ ಪತ್ನಿ ಐಶ್ವರ್ಯ ಬಿಬಿಎಂಪಿ ಹಾಲಿ ಸದಸ್ಯೆಯಾಗಿದ್ದಾರೆ. ಈ ಪ್ರಕರಣ ವನ್ನು ಭೇದಿಸಲು ಡಿವೈಎಸ್‌ಪಿ ಉಮಾಶಂಕರ್‌ ನೇತೃತ್ವದ ವಿಶೇಷ ತಂಡ ರಚಿಸಿ ತನಿಖೆ ಚುರುಕುಗೊಳಿಸಿದ್ದಾರೆ ಎಂದು ಪಿಎಸ್ಐ ಶಂಕರಪ್ಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.