ರೈತರು ಸ್ವಾಭಿಮಾನಿಗಳು,ಹೇಡಿಗಳಲ್ಲ: ಶಾಸಕ


Team Udayavani, Dec 7, 2020, 7:42 PM IST

ರೈತರು ಸ್ವಾಭಿಮಾನಿಗಳು,ಹೇಡಿಗಳಲ್ಲ: ಶಾಸಕ

ದೇವನಹಳ್ಳಿ: ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳಲ್ಲ. ಇಂತಹ ಹೇಳಿಕೆ ನೀಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್‌ಗೆ ಶೋಭೆ ತರುವಂತದ್ದಲ್ಲ ಎಂದು ಶಾಸಕಎಲ್‌.ಎನ್‌.ನಾರಾಯಣ ಸ್ವಾಮಿ ತಿರುಗೇಟು ನೀಡಿದರು.

ತಾಲೂಕಿನ ಹೆಗ್ಗನಹಳ್ಳಿ ಗ್ರಾಮದಲ್ಲಿ ಗ್ರಾಪಂ ಚುನಾವಣಾ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಪೊನ್ನಂ ಪೇಟೆ ಅರಣ್ಯ ಮಹಾವಿದ್ಯಾ ಲಯದಲ್ಲಿ ನಡೆದ ಬಿದಿರು ಸಂಸ್ಕರಣಾ ಮತ್ತು ಮೌಲ್ಯವರ್ಧನಾ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿ.ಸಿ. ಪಾಟೀಲ್‌ ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳು ಎಂದು ಹೇಳಿಕೆ ನೀಡಿರುವುದು, ಇಡೀ ರೈತ ಸಮುದಾಯಕ್ಕೆ ಅವಮಾನ ಮಾಡಿದಂತಾಗಿದೆ ಎಂದರು.

ಸರ್ಕಾರದ ಉನ್ನತ ಸ್ಥಾನದಲ್ಲಿರುವ ಕೃಷಿ ಸಚಿವರು ಇಂತಹ ಹೇಳಿಕೆಗಳನ್ನುನೀಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕು. ಬೇಜವಾಬ್ದಾರಿಯ ಹೇಳಿಕೆಯನ್ನು ನೀಡುವುದು ಸಮಂಜಸ ವಲ್ಲ. ಕೂಡಲೇ ಮುಖ್ಯಮಂತ್ರಿಗಳು ಕೃಷಿ ಸಚಿವರನ್ನು ಸಚಿವ ಸಂಪುಟ ದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಕ್ಷಮೆ ಕೇಳಿ: ರೈತ ಹುಟ್ಟು ಸ್ವಾಭಿಮಾನಿ ಮತ್ತು ಮರ್ಯಾದಸ್ತನಾಗಿದ್ದಾನೆ. ಸಾಲ ಸೋಲಮಾಡಿಕೊಂಡುಕೃಷಿಚಟುವಟಿಕೆ ನಡೆಸು ತ್ತಾರೆ. ಆದರೆ, ಬೆಳೆ ನಷ್ಟ, ಸಾಲಗಾರರ ಸುಳಿಯಲ್ಲಿ ಸಿಲುಕಿ ಮರ್ಯಾದೆಗೆ ಅಂಜಿ ದಿಕ್ಕುತೋಚದಂತಾಗಿ ಆತ್ಮ ಹತ್ಯೆಗೆ ಮುಂದಾಗುತ್ತಾರೆ. ಸರ್ಕಾರ ಕೂಡಲೇ ರೈತರ ಪರವಾಗಿದ್ದರೆ, ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದರೆ, ಏಕೆ ಆತ್ಮಹತ್ಯೆಗೆ ಮುಂದಾಗುತ್ತಾರೆ. ಕೂಡಲೇ ಕೃಷಿಸಚಿವ ಬಿ.ಸಿ. ಪಾಟೀಲ್‌ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಹೇಳಿದರು.

ಕೃಷಿ ಸಚಿವರು ರೈತರಿಗೆ ಆತ್ಮಹತ್ಯೆ ಮಾಡಿಕೊಳ್ಳದಂತೆ, ಧೈರ್ಯ ತುಂಬುವ ಕೆಲಸ ಮಾಡಬೇಕೇ ವಿನಃ, ಇಂತಹ ಹೇಳಿಕೆ ನೀಡಿ, ಅನ್ನದಾತರಿಗೆ ಅಪಮಾನ ‌ ಮಾಡಿರುವುದು ಎಷ್ಟರ‌ ಮಟ್ಟಿಗೆ ಸರಿ, ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ರೈತರ ಸಂಕಷ್ಟಗಳನ್ನು ಅರಿತು, 25 ಸಾವಿರ ‌ಕೋಟಿ ರೂ. ರೈತರ ಸಾಲ ಮನ್ನಾ ಮಾಡಿ ನೆರವಾಗಿದ್ದರು. ಈಗೀನ ಬಿಜೆಪಿ ಸರ್ಕಾರ ಬಂದಾಗಿನಿಂದಲೂ ರೈತ ವಿರೋಧಿ ಕಾನೂನುಗಳನ್ನು ತಂದುಅನ್ಯಾಯ ಮಾಡಲಾಗುತ್ತಿದೆ. ಕೇಂದ್ರ, ರಾಜ್ಯ ಸರ್ಕಾರಗಳಿಗೆ ಜನಸಾಮಾನ್ಯರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಆರೋಪಿಸಿದರು.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.