ಈಶ್ವರಪ್ಪ, ಸಿಎಂ ಕೂತು ಗೊಂದಲ ಬಗೆಹರಿಸಿಕೊಳ್ಳಲಿ: ಸಂಸದ ಬಚ್ಚೇಗೌಡ ಸಲಹೆ
Team Udayavani, Apr 4, 2021, 3:39 PM IST
ವಿಜಯಪುರ: ಮುಖ್ಯಮಂತ್ರಿಗಳಿಗೆ ಅವರದೇ ಆದ ಅಧಿಕಾರವಿದೆ. ಯಾವ ಇಲಾಖೆಗೆ ಎಷ್ಟು ಹಣ ಬಿಡುಗಡೆ ಮಾಡಬೇಕು ಎಂಬುದು ಅವರಿಗೆ ಗೊತ್ತಿದೆ. ರಾಜಕೀಯದಲ್ಲಿರುವ ಗೊಂದಲ ಬಗೆಹರಿಯಲಿ. ವಿರೋಧ ಪಕ್ಷಗಳು ಪರಿಸ್ಥಿತಿಯ ಲಾಭ ಮಾಡಿಕೊಳ್ಳಲು ಅವಕಾಶ ನೀಡದಿರಿ ಎಂದು ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ಸಲಹೆ ನೀಡಿದರು.
ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀಚನ್ನಕೇಶವ ಸ್ವಾಮಿ ಬ್ರಹ್ಮರಥೋತ್ಸವದ ಪ್ರಯುಕ್ತ ಶುಕ್ರವಾರ ರಾತ್ರಿ ಸಂಸದ ಬಚ್ಚೇಗೌಡ, ಬೆಂಡಿಗಾನಹಳ್ಳಿ ಕುಟುಂಬದವರಿಂದ ನಡೆದ ಸ್ವಾಮಿಯವರ ಪುಷ್ಪ ಪಲ್ಲಕ್ಕಿ ಉತ್ಸವ ಸೇವೆಗೆ ಚಾಲನೆ ನೀಡಿ ಮಾತನಾಡಿದರು.
ಹಣಕಾಸು ಖರ್ಚು ವೆಚ್ಚದ ಬಗ್ಗೆ ಮಾರ್ಚ್ ಅಂತ್ಯದೊಳಗೆ ತಿಳಿದರೆ ಮುಂದಿನ ಬಜೆಟ್ ಮಂಡನೆಗೆ ಅನುಕೂಲ ಎಂದು ಮುಖ್ಯಮಂತ್ರಿಗಳು ಮಾಡಿರುವ ಕರ್ತವ್ಯ, ಲೋಪದೋಷವಲ್ಲ ಎಂದು ಹೇಳಿದರು
ವಿರೋಧ ಪಕ್ಷಗಳಿಗೆ ಆಸ್ಪದ ಕೊಡಬೇಡಿ: ಈ ವಿಚಾರವಾಗಿ ಸಚಿವ ಈಶ್ವರಪ್ಪ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಧ್ಯೆ ಗೊಂದಲ ಉಂಟಾಗಿದೆ. ಇದು ಇಬ್ಬರೂ ಕೂತು ಮಾತಾಡಿ ಬಗೆಹರಿಸಿಕೊಳ್ಳುವ ವಿಚಾರ. ಹೀಗಿರುವಾಗ ಹಿರಿಯ ಸಚಿವ ರೆನಿಸಿಕೊಂಡ ಈಶ್ವರಪ್ಪನವರು ದೂರು ಕೊಡುವ ಹಂತಕ್ಕೆ ಹೋಗಿರುವುದು ಆಶ್ಚರ್ಯಕರ. ಹೈಕಮಾಂಡ್ ಏನು ತೀರ್ಮಾನ ಮಾಡುವುದೋ ತಿಳಿದಿಲ್ಲ. ವಿರೋಧ ಪಕ್ಷಗಳು ಲಾಭ ಪಡೆಯಲು ಆಸ್ಪದ ಕೊಡಬಾರದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ