ಅಕ್ರಮಗಳಿಂದ ಪಾರಾಗಲು ಎಂಟಿಬಿ ಬಿಜೆಪಿಗೆ ಸೇರ್ಪಡೆ


Team Udayavani, Nov 18, 2019, 3:00 AM IST

akramagalinda

ಹೊಸಕೋಟೆ: ಅಕ್ರಮವಾಗಿ ಗಳಿಸಿರುವ ಆಸ್ತಿಯನ್ನು ರಕ್ಷಿಸಿಕೊಂಡು ಐಟಿ, ಇಡಿಯಿಂದ ಪಾರಾಗಲು ಎಂಟಿಬಿ ನಾಗರಾಜ್‌ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಶರತ್‌ ಬಚ್ಚೇಗೌಡ ಆರೋಪಿಸಿದರು. ಅವರು ತಾಲೂಕಿನ ಸೂಲಿಬೆಲೆ ಹೋಬಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಉಪಚುನಾವಣೆಯು ಹಣ ಮತ್ತು ಜನಬಲದ ನಡುವಿನ ಸಮರವಾಗಿದದು ಸ್ವಾರ್ಥ ಸಾಧಕರನ್ನು ತಿರಸ್ಕರಿಸಿ ಸ್ವಾಭಿಮಾನವನ್ನು ರಕ್ಷಿಸಿಕೊಳ್ಳಬೇಕು. ತಾಲೂಕಿನಲ್ಲಿ ತಮ್ಮ ಪರವಾಗಿ ಮತದಾರರ ಒಲವಿದ್ದು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನೆರೆದಿದ್ದ ಸಹಸ್ರಾರು ಬೆಂಬಲಿಗರೇ ನಿದರ್ಶನವಾಗಿದ್ದಾರೆ.

5 ವರ್ಷಗಳ ಅವಧಿಗೆ ಜನಾದೇಶ ಪಡೆದಿದ್ದಾಗ್ಯೂ ಒಂದೂವರೆ ವರ್ಷಕ್ಕೆ ಮತ್ತೂಮ್ಮೆ ಚುನಾವಣೆ ನಡೆಯಲು ಕಾರಣವಾಗುವ ಮೂಲಕ ಮತದಾರರ ನಂಬಿಕೆಗೆ ದ್ರೋಹ ಎಸಗಿದಂತಾಗಿದ್ದು ಇದೀಗ ದಿನಕ್ಕೊಂದು ಸುಳ್ಳು ಹೇಳುವ ಮೂಲಕ ಜನರಲ್ಲಿ ಗೊಂದಲ ನಿರ್ಮಿಸುತ್ತಿದ್ದಾರೆ. ಕೆಲವು ವ್ಯಕ್ತಿಗಳ ಷಡ್ಯಂತ್ರದಿಂದಾಗಿ ತಾಲೂಕಿನಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಲು ಶ್ರಮಿಸಿದವರನ್ನು ಕಡೆಗಣಿಸಲಾಗಿದೆ.

ಪಕ್ಷೇತರ ಅಭ್ಯರ್ಥಿಯಾಗಿರುವ ಕಾರಣ ಯಾವುದೇ ಪ್ರಮುಖ ವ್ಯಕ್ತಿಗಳ ತಮ್ಮ ಪರವಾಗಿ ಪ್ರಚಾರದಲ್ಲಿ ತೊಡಗುವುದಿಲ್ಲವಾದ ಕಾರಣ ಬೆಂಬಲಿಗರು, ಕಾರ್ಯಕರ್ತರೇ ತಮಗೆ ಸ್ಟಾರ್‌ ಕ್ಯಾಂಪೇನರ್ ಆಗಿದ್ದು ತಾಲೂಕಿನ ಸ್ವಾಭಿಮಾನ ಉಳಿಸಲು ಹೋರಾಟ ಮಾಡಬೇಕಾಗಿದೆ.

ನ.21ರಂದು ಸ್ಪರ್ಧಿಸುವ ಚಿಹ್ನೆ ದೊರಕಲಿದ್ದು ಪ್ರತಿಯೊಬ್ಬ ಕಾರ್ಯಕರ್ತರು ಸಹ ತಮ್ಮ ಪರವಾಗಿ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಬೇಕು ಎಂದು ಮನವಿ ಮಾಡಿದರು. ಟಿಎಪಿಸಿಎಂಎಸ್‌ ಉಪಾಧ್ಯಕ್ಷ ಬಿ.ಎನ್‌.ಗೋಪಾಲಗೌಡ, ಸೂಲಿಬೆಲೆ ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ವಿ. ಸತೀಶ್‌ಗೌಡ, ಮುಖಂಡ ಬಿ.ತಮ್ಮೇಗೌಡ ಇನ್ನಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.