ಅಬಕಾರಿ ಇಲಾಖೆಯಲ್ಲಿ ಮಾಡುವುದೇನಿದೆ?


Team Udayavani, Jan 22, 2021, 12:10 PM IST

NAGARAJ

ಹೊಸಕೋಟೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಳೆದು ತೂಗಿ ಸಂಪುಟಕ್ಕೆ ಸಪ್ತ ಸಚಿವರ ಸೇರ್ಪಡೆ, ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಭುಗಿಲೆದ್ದಿದೆ. ವಸತಿ ಖಾತೆ ಮೇಲೆ ಕಣ್ಣಿಟ್ಟಿದ್ದ ಹೊಸಕೋಟೆಯ ಎಂಟಿಬಿ ನಾಗರಾಜ್‌ ಅವರಿಗೆ ಅಬಕಾರಿ ಖಾತೆ ಲಭಿಸಿದ್ದು, ಅಸಮಾಧಾನಕ್ಕೆ ಕಾರಣವಾಗಿದೆ.

ಗುರುವಾರ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ನಿವಾಸದಲ್ಲಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಮದ್ಯ ತಯಾರು ಮಾಡುವ ಕಂಪನಿಗಳಿಂದ ಮದ್ಯ ಖರೀದಿಸಿ ಹೋಲ್‌ಸೇಲ್‌ ದರದಲ್ಲಿ ವಿತರಕರಿಗೆ ಕೊಡಲಾಗುತ್ತದೆ. ವಿತರಕರು ಇದನ್ನು ಅಂಗಡಿಗೆ ಮಾರಾಟ ಮಾಡಿ ಬಂದ ಹಣ ಸರ್ಕಾರಕ್ಕೆ ತಲುಪಿಸುತ್ತಾರೆ. ಇಲ್ಲಿ ನಾನು ಮಾಡುವ ಕೆಲಸ ಏನೂ ಇಲ್ಲ ಎಂದು ಎಂಟಿಬಿ ನಾಗರಾಜ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಚ್‌ .ನಾಗೇಶ್‌ ಅವರ ರಾಜೀನಾಮೆಯಿಂದ ಖಾಲಿ ಇದ್ದ ಅಬಕಾರಿ ಖಾತೆಯನ್ನು ಎಂಟಿಬಿ ನಾಗರಾಜ್‌ ಅವರಿಗೆ ನೀಡಲಾಗಿದ್ದು, ಇದನ್ನು ನಯವಾಗಿ ನಿರಾಕರಿಸಿದ್ದಾರೆ.

ಅಬಕಾರಿಯಿಂದ ಜನಸೇವೆ ಸಾಧ್ಯವೇ?: ಗುರುವಾರ ಸಿಎಂ ಯಡಿಯೂರಪ್ಪ ಅಬಕಾರಿ ಖಾತೆಯನ್ನು ಎಂಟಿಬಿ ನಾಗರಾಜ್‌ ಅವರಿಗೆ ನೀಡುತ್ತಿದ್ದಂತೆ ಬೇಸರಗೊಂಡಿರುವ ಅವರು, ನಾನು ಕಾಂಗ್ರೆಸ್‌ ನಲ್ಲಿದ್ದಾಗ ವಸತಿ ಸಚಿವನಾಗಿ ಕಾರ್ಯನಿರ್ವಹಿಸಿದ್ದೆ. ಆ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದಿದ್ದೇನೆ. ಅಬಕಾರಿ ಇಲಾಖೆ ನೀಡಿದರೆ ಜನರಿಗೆ ಏನಾದರೂ ಸೇವೆ ಮಾಡಲು ಸಾಧ್ಯವೇ.?

ವಸತಿ ಖಾತೆ ಕೊಟ್ಟರೆ ರಾಜ್ಯದಲ್ಲಿರುವ ಎಷ್ಟೋ ಜನ ನಿರಾಶ್ರಿತರಿಗೆ, ಬಡವರಿಗೆ ನಿವೇಶನ ಹಂಚಿಕೆ ಮಾಡಬಹುದಿತ್ತು. ಸ್ಲಂಗಳನ್ನು ಅಭಿವೃದ್ಧಿ ಮಾಡುವ ಕೆಲಸ ಮಾಡಬಹುದಾಗಿತ್ತು. ಸಾರ್ವಜನಿಕವಾಗಿ ಕೆಲಸ ಮಾಡಿ ಪಕ್ಷಕ್ಕೆ ಒಳ್ಳೆಯ ಹೆಸರು ತರುವಂತೆ ಕಾರ್ಯ ಮಾಡುತ್ತಿದ್ದೆ. ಕಾಂಗ್ರೆಸ್‌ನಲ್ಲಿ ಇದ್ದಾಗ ನಾನು ನಿರ್ವಹಿಸುತ್ತಿದ್ದ ವಸತಿ ಖಾತೆ ತ್ಯಾಗ ಮಾಡಿ ಬಂದಿದ್ದು, ಅದೇ ಖಾತೆ ನೀಡಿದರೆ ನನಗೆ ಸಮಾಧಾನ, ಪ್ರತಿಫ‌ಲ ಸಿಗುತ್ತಿತ್ತು ಎಂದಿದ್ದಾರೆ.

ಖಾತೆ ಹಂಚಿಕೆ ಬೆನ್ನಲ್ಲೇ ಎಂಟಿಬಿ ನಾಗರಾಜ್‌, ಸಚಿವ ಡಾ.ಕೆ.ಸುಧಾಕರ್‌ ಅವರನ್ನು ಭೇಟಿಯಾಗಿರುವುದು ಅಚ್ಚರಿ ಮೂಡಿಸಿದೆ. ಒಟ್ಟಾರೆ ಸಚಿವ ಸ್ಥಾನ ಸಿಗದ ಕೆಲವರು ಸಿಎಂ ವಿರುದ್ಧ ರೆಬೆಲ್‌ ಆಗಿದ್ದರೆ, ಸಚಿವ ಸ್ಥಾನ ಪಡೆದವರು ಕೂಡ ತಮಗೆ ಬೇಕಾದ ಖಾತೆ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ಓದಿ:ಎಷ್ಟು ವರ್ಷ ಆಯ್ತು ಅನ್ನೋದಕ್ಕಿಂತ ಏನ್‌ ಕೊಡ್ತೀವಿ ಅನ್ನೋದು ಮುಖ್ಯ: ಪೊಗರು ಧ್ರುವ ಮಾತು

ಮುಖ್ಯಮಂತ್ರಿಗಳ ಬಳಿ ಅಬಕಾರಿ ಇಲಾಖೆ ನನಗೆ ಬೇಡ ಅಂತ ಹೇಳಿ ಬಂದಿದ್ದೇನೆ. ಈ ಖಾತೆ ನಾನು ಕೆಲಸ ಮಾಡುವಂತದ್ದಲ್ಲ. ಜನರಿಗೆ, ಸಾರ್ವಜನಿಕರಿಗೆ ಉಪಯೋಗ ಆಗುವಂತಹ ಖಾತೆ ಬೇಕು. ವಸತಿ ಖಾತೆಗಿಂತ ಮುಖ್ಯವಾದ ಖಾತೆಗಳನ್ನು ನೀಡುವುದಾಗಿ ಸಿಎಂ ಐದಾರು ಬಾರಿ ಭರವಸೆ ನೀಡಿದ್ದರು, ಇದೀಗ ಅಬಕಾರಿ ಇಲಾಖೆ ನೀಡಿದ್ದು, ಬೇಡ ಅಂತ ಹೇಳಿದ್ದೇನೆ. ಅವರು ನೋಡೋಣ, ಮಾತನಾಡೋಣ ಎಂದು ಹೇಳಿದ್ದಾರೆ.

ಎಂಟಿಬಿ ನಾಗರಾಜ್‌, ಸಚಿ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.