ಘಾಟಿಯಲ್ಲಿ ಶ್ರದ್ಧಾ ಭಕ್ತಿಯಿಂದ ನಾಗರಪಂಚಮಿ ಆಚರಣೆ


Team Udayavani, Aug 6, 2019, 3:00 AM IST

nagara

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಹಬ್ಬಗಳ ಸಾಲಿನ ಮೊದಲ ಹಬ್ಬ ನಾಗರಪಂಚಮಿಯನ್ನು ತಾಲೂಕಿನಲ್ಲಿ ಸಂಭ್ರಮ-ಸಡಗರ ಹಾಗೂ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಜನಪದರಲ್ಲಿ ಅಣ್ಣ ತಂಗಿಯರ ಬಾಂಧವ್ಯದ ಬೆಸುಗೆಯಾಗಿ ಆಚರಿಸಲ್ಪಡುವ ಈ ಹಬ್ಬದಲ್ಲಿ ನಾಗಪೂಜೆ ಪ್ರಮುಖವಾಗಿದೆ. ಈ ದಿನದಂದು ನಾಗರಕಲ್ಲುಗಳಿಗೆ, ಹುತ್ತಗಳಿಗೆ ಪೂಜೆ ಸಲ್ಲಿಸಿ ಮನೆಯಲ್ಲಿ ಸಿಹಿಯೂಟ ಮಾಡುವ ಮೂಲಕ ಆಚರಿಸಲಾಗುತ್ತದೆ.

ಭಾನುವಾರವಷ್ಟೇ ನಾಗರ ಚೌತಿ ಆಚರಿಸಲಾಯಿತು. ಮದುವೆಯಾದ ನವ ದಂಪತಿಗಳು ನಾಗರಕಲ್ಲುಗಳಿಗೆ ಹಾಲೆರೆದು ಪೂಜೆ ಸಲ್ಲಿಸಿದರು. ಮಹಿಳೆಯರು ನಾಗ ಪ್ರತಿಷ್ಠಾಪನೆಯಾಗಿರುವ ದೇವಾಲಯಗಳಿಗೆ ತೆರಳಿ ನಾಗರ ಕಲ್ಲಿಗೆ ಹಾಲೆರೆದು ಪೂಜೆ ಸಲ್ಲಿಸಿದರು. ತಾಲೂಕಿನ ಘಾಟಿ ಪುಣ್ಯಕ್ಷೇತ್ರದಲ್ಲಿನ ನಾಗರಕಲ್ಲುಗಳಿಗೆ ಸಹಸ್ರಾರು ಭಕ್ತಾದಿಗಳು ಹಾಲೆರೆದು ವಿಶೇಷ ಪೂಜೆ ಸಲ್ಲಿಸಿದರು. ಸಹಸ್ರಾರು ಭಕ್ತರು ದೇವಾಲಯದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು. ನಾಗರಪಂಚಮಿ ವಿಶೇಷವಾಗಿ ಸುಬ್ರಹ್ಮಣ್ಯ ಸ್ವಾಮಿಯ ರಾಜಬೀದಿ ಉತ್ಸವ ನಡೆಯಿತು.

ನಾಗರ ಕಲ್ಲುಗಳನ್ನು ಪೂಜಿಸುವುದರಿಂದ ನಾಗದೋಷದಿಂದ ಉಂಟಾಗುವ ಎಲ್ಲಾ ಸಮಸ್ಯೆ ಬಗೆ ಹರಿಯುತ್ತದೆ. ಶ್ರೀಘಾಟಿ ಸುಬ್ರಹ್ಮಣ್ಯ ಕ್ಷೇತ್ರ ದೇವಸ್ಥಾನ ನಾಗದೋಷಗಳಿಗೆ ಹೆಸರವಾಸಿ ಪುಣ್ಯಕ್ಷೇತ್ರ. ಇಲ್ಲಿ ಮಕ್ಕಳ ದೋಷ. ಸ್ತ್ರೀ ದೋಷಗಳಿದ್ದರೆ ಇಲ್ಲಿ ಬಂದು ನಾಗರಕಲ್ಲುಗಳಿಗೆ 5 ವಾರ ಪೂಜೆ ಸಲ್ಲಿಸಿದರೆ ದೋಷ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆಯಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀ ನಿಧಿ ಹೇಳುತ್ತಾರೆ.

ನಗರದ ನೆಲದಾಂಜನೇಯಸ್ವಾಮಿ ದೇವಾಲಯ ಮೊದಲಾಗಿ, ಕೆರೆಕಟ್ಟೆ ನಾಗರಕಲ್ಲುಗಳು ಹಾಗೂ ವಿವಿಧ ದೇವಾಲಯದಲ್ಲಿನ ನಾಗರಕಲ್ಲುಗಳಿಗೆ ಹಾಲೆರೆದು ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮದುವೆಯಾದ ಹೆಣ್ಣುಮಕ್ಕಳನ್ನು ತವರು ಮನೆಗೆ ಕರೆಸಿಕೊಂಡು ಅವರಿಗೆ ಉಡಿ ತುಂಬುವುದು, ಅವರು ತಮ್ಮ ತವರು ಮನೆಗೆ ಒಳಿತಾಗಲಿ ಎಂದು ಹಾರೈಸುವುದು. ವರ್ಷ ಪೂರ್ತಿ ಕೆಲಸ ಮಾಡುವ ರೈತಾಪಿ ಜನರಿಗೆ ಹಾವು ಕಚ್ಚಬಾರದು ಎನ್ನುವ ನಂಬಿಕೆಯಿಂದ ಹಾಲು ಎರೆದು ಪೂಜಿಸುವುದು ಹಬ್ಬದ ವಿಶೇಷತೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.