![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಚಾಲಕರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ
Team Udayavani, Jan 31, 2023, 10:18 AM IST
![ಚಾಲಕರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ](https://www.udayavani.com/wp-content/uploads/2023/01/tdy-7-36-620x372.jpg)
ಆನೇಕಲ್: ರಷ್ಯಾ ಮತ್ತು ಉಕ್ರೇನ್ ದೇಶಗಳ ನಡುವಿನ ಯುದ್ಧದಲ್ಲಿ ಮೃತಪಟ್ಟವರ ಸಂಖ್ಯೆಗಿಂತದೇಶದಲ್ಲಿ ರಸ್ತೆ ಅಪಘಾತಗಳಿಂದ ಮೃತ ಪಟ್ಟವರಸಂಖ್ಯೆ ಹೆಚ್ಚಿರುವುದು ಆತಂಕಕಾರಿ ವಿಚಾರ ಎಂದು ಕೇಂದ್ರ ವಲಯದ ಆರಕ್ಷಕ ಮಹಾನಿರೀಕ್ಷಕ ( ಐಜಿಪಿ) ಡಾ.ಬಿ.ಆರ್.ರವಿಕಾಂತೇಗೌಡ ಹೇಳಿದರು.
ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಎಎಂಸಿ ವಿದ್ಯಾಸಂಸ್ಥೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ 34ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಸಮಾರೋಪದಲ್ಲಿ ಮಾತನಾಡಿದರು.
ಭಾರತದ ರಸ್ತೆಗಳಲ್ಲಿ ಸಂಭವಿಸುತ್ತಿರುವ ಅಪಘಾತಗಳಿಗೆ ವಾಹನ ಚಾಲಕರ ನಿರ್ಲಕ್ಷ್ಯವೇಕಾರಣ. ರಸ್ತೆ ಸುರಕ್ಷೆ ಜೀವನದ ಸುರಕ್ಷೆ ಎಂಬ ಮಾತಿದೆ ಅದನ್ನು ನಾವು ಪಾಲಿಸಬೇಕು ಎಂದು ಹೇಳಿದರು.
ನಿಯಮ ಪಾಲಿಸಿ: ಆಟೋ ಚಾಲಕರು ಖಾಕಿ ಬಟ್ಟೆ ತೊಡುವುದರಿಂದ ಪೊಲೀಸ್ ಇಲಾಖೆಗೆ ಅವರ ಬಗ್ಗೆ ಕಾಳಜಿ ಇದೆ. ಶೇ.90 ರಷ್ಟು ಆಟೋ ಚಾಲಕರು ತುಂಬಾ ಒಳ್ಳೆಯವರಿದ್ದಾರೆ. ಕೇವಲ ಶೇ.10ರಷ್ಟುಆಟೋ ಚಾಲಕರಿಂದ ಇಡೀ ಆಟೋ ಸಮುದಾಯಕ್ಕೆ ಕಳಂಕ ಬರುತ್ತದೆ. ಒಳ್ಳೆ ಚಾಲಕರ ಬಗ್ಗೆ ಗೌರವ ಇದೆ.ಹೀಗಾಗಿ ಆಟೋ ಚಾಲಕರಲ್ಲಿ ಮನವಿ ಮಾಡುವುದುಎಂದರೆ ಎಷ್ಟೇ ಒತ್ತಡ ಇದ್ದರೂ ರಸ್ತೆ ಸುರಕ್ಷತೆನಿಯಮಗಳನ್ನು ಪಾಲನೆ ಮಾಡಬೇಕು ಎಂದು ಹೇಳಿದರು.
ಆಟೋ ಚಾಲಕರೂ ಪೊಲೀಸರಂತೆ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಸಾರ್ವಜನಿಕರೊಂದಿಗೆಇನ್ನಷ್ಟು ಉತ್ತಮ ನಡವಳಿಕೆ ತೋರುವುದರ ಜತೆಗೆಸುರಕ್ಷತೆ ಪಾಲಿಸಿ ನಿಮ್ಮ ಕುಟುಂಬಕ್ಕೆ ಆಧಾರವಾಗಿರಿ ಎಂದು ತಿಳಿಸಿದರು.
ಆಧಾರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನಬಾಳದಂಡಿ ಮಾತನಾಡಿ, ಆಟೋ ಸೇವೆ ಸಮಾಜಕ್ಕೆಅತ್ಯವಶ್ಯಕತೆ ಇದೆ. ಆಟೋ ಚಾಲಕರ ಮೇಲೆ ಒಂದುಇಡೀ ಕುಟುಂಬ ಅವಲಂಭಿತವಾಗಿರುತ್ತದೆ. ಹಾಗಾಗಿಆಟೋ ಚಾಲಕರು ತಮ್ಮ ಚಾಲನೆಯಲ್ಲಿ ರಸ್ತೆನಿಯಮಗಳನ್ನು ಪಾಲಿಸಿ ನಿಮ್ಮ ಕುಟುಂಬಗಳಜೀವನಕ್ಕೆ ಆಧಾರವಾಗಿ ಇರಬೇಕು ಎಂದು ತಿಳಿಸಿದರು.
ನಿಮ್ಮ ದುಡಿಮೆ ಅವಧಿಯಲ್ಲಿ ಇಲ್ಲಿ ಕರೆಸಿ ನಿಮಗೆ ಒಂದಷ್ಟು ಮಾಹಿತಿ ನೀಡುತ್ತಿದ್ದೇವೆ ಎಂದರೆ ರಸ್ತೆ ಸುರಕ್ಷತೆ ವಿಚಾರ ಎಷ್ಟು ಮುಖ್ಯ ಎಂಬುದು ತಿಳಿಯಬೇಕಿದೆ ಎಂದರು.
ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧೀಕ್ಷಕರಾದ ಎಂ.ಎಲ್. ಪುರುಷೋತ್ತಮ್ , ಉಪ ಪೊಲೀಸ್ ಅಧೀಕ್ಷಕ ಲಕ್ಷ್ಮೀನಾರಾಯಣ, ಎಎಂಸಿ ಕಾಲೇಜಿನ ಪ್ರಾಂಶುಪಾಲರಾದ ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.
ನೋವಿನ ಸಂಗತಿ :
ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಮನೆಯಿಂದ ಹೊರ ಬರುವ ಜನರಲ್ಲಿ ಪ್ರತಿ ದಿನ 4ಜನ ಅಪಘಾತಗಳಿಂದ ಮೃತ ಪಡುತ್ತಿದ್ದಾರೆ.ಇದಕ್ಕೆ ಅಂಕಿ ಅಂಶಗಳು ಸಾಕ್ಷಿಯಾಗಿರುವುದುನೋವಿನ ಸಂಗತಿ. ರಸ್ತೆ ಸುರಕ್ಷೆ ಒಂದುಕುಟುಂಬದ ರಕ್ಷೆ ಎಂಬುದನ್ನು ಎಲ್ಲಾ ಚಾಲಕರುಮನಗಾಣಲು ಸಪ್ತಾಹ ಆಯೋಜಿಸಲಾಗಿದೆಎಂದು ಕೇಂದ್ರ ವಲಯದ ಆರಕ್ಷಕ ಮಹಾನಿರೀಕ್ಷಕ ( ಐಜಿಪಿ) ಡಾ.ಬಿ.ಆರ್. ರವಿಕಾಂತೇಗೌಡ ತಿಳಿಸಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಕಾಂಗ್ರೆಸ್ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್ನಲ್ಲಿ ಉದ್ವಿಗ್ನ ಸ್ಥಿತಿ](https://www.udayavani.com/wp-content/uploads/2024/07/6-25-150x90.jpg)
Crime: ಕಾಂಗ್ರೆಸ್ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್ನಲ್ಲಿ ಉದ್ವಿಗ್ನ ಸ್ಥಿತಿ
![Ganja peddler: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್ಗೆ ಗುಂಡೇಟು; ಸೆರೆ](https://www.udayavani.com/wp-content/uploads/2024/07/Untitled-1-15-150x90.jpg)
Ganja peddler: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್ಗೆ ಗುಂಡೇಟು; ಸೆರೆ
![R.Ashok](https://www.udayavani.com/wp-content/uploads/2024/07/R.Ashok_-150x90.jpg)
Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್
![BRural](https://www.udayavani.com/wp-content/uploads/2024/06/BRural-150x90.jpg)
Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ
![Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್ ಅಡ್ಡೆಯಾದ ಹೆದ್ದಾರಿ!](https://www.udayavani.com/wp-content/uploads/2024/05/9-21-150x90.jpg)
Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್ ಅಡ್ಡೆಯಾದ ಹೆದ್ದಾರಿ!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.