ರಾಗಿ ಖರೀದಿ ಕೇಂದ್ರಗಳಲ್ಲಿ ಅಧಿಕಾರಿಗಳಿಂದಲೇ ವಸೂಲಿ ಆರೋಪ

ಸರ್ಕಾರದ ಬೆಂಬಲ ಬೆಲೆ ಮಧ್ಯವರ್ತಿಗಳ ಪಾಲು ಚೀಲಕ್ಕೆ 6ರಿಂದ 10ರೂ.ನಂತೆ ಹಾಗೂ ಪರಿಶೀಲನೆಗೆ 100 ರೂ.ನಂತೆ ಹಣ ವಸೂಲಿ

Team Udayavani, Mar 5, 2020, 5:11 PM IST

5-March-24

ನೆಲಮಂಗಲ : ಸರ್ಕಾರ ರೈತರ ಸಂಕಷ್ಟ ನಿವಾರಣೆಗೆ ರಾಗಿಗೆ ಬೆಂಬಲ ಬೆಲೆ ನಿಗದಿ ಮಾಡಿ ಖರೀದಿ ಕೇಂದ್ರ ಸ್ಥಾಪಿಸಿದೆ. ಆದರೆ, ರೈತರಿಂದ ಚೀಲಕ್ಕೆ 6ರಿಂದ 10ರೂನಂತೆ ಹಾಗೂ ಪರಿಶೀಲನೆಗೆ 100 ರೂ.ನಂತೆ ಮಧ್ಯವರ್ತಿಗಳು ಹಾಗೂ ಅಧಿಕಾರಿಗಳು ವಸೂಲಿ ಮಾಡುವ ಮಾಡುವ ದಂಧೆಯಲ್ಲಿ ತೊಡಗಿರುವುದು ಬಯಲಾಗಿದೆ.

ತಾಲೂಕಿನ ಬಸ್‌ನಿಲ್ದಾಣ ಸಮೀಪವಿರುವ ರಾಗಿ ಖರೀದಿ ಕೇಂದ್ರದಲ್ಲಿ 50ಕೆಜಿ ರಾಗಿ ಚೀಲಕ್ಕೆ 6ರಿಂದ 10 ರೂನಂತೆ ಹಾಗೂ ದಾಖಲೆ ಪರಿಶೀಲಿಸುವವರಿಗೆ ರೈತರು 100 ರೂ. ನೀಡಬೇಕಾಗಿದೆ. 1ರೂ. ಕಡಿಮೆಯಾದರೂ, ರಾಗಿಯನ್ನು ಲಾರಿಗಳಿಗೆ ಲೋಡ್‌ ಮಾಡಲು ನಿರಾಕರಿಸುತ್ತಾರೆ ಹಣ ನೀಡಿದರೆ ಮಾತ್ರ ಮೂಟೆಗಳನ್ನು ಲಾರಿಗೆ ಹಾಕುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಕ್ಷಲಕ್ಷ ವಸೂಲಿ : ತಾಲೂಕು ಕೇಂದ್ರದಿಂದ ಈಗಾಗಲೇ ಫೆ.26ರಿಂದ 10ಸಾವಿರ ಕ್ವಿಂಟಲ್‌ನಂತೆ 20 ಸಾವಿರ ಮೂಟೆಗಳು, ಪ್ರತಿದಿನ 2 ಸಾವಿರ ಮೂಟೆಗಳಂತೆ ದೊಡ್ಡಬಳ್ಳಾಪುರ ಗೋದಾಮಿಗೆ ರವಾನೆ ಮಾಡಲಾಗಿದೆ.ಇದರಂತೆ ರೈತರಿಂದ ಮಧ್ಯವರ್ತಿಗಳು ಹಾಗೂ ಅಧಿಕಾರಿಗಳು 1.20ಲಕ್ಷ ರೂ. ಹಣ ರೈತರಿಂದ ವಸೂಲಿ ಮಾಡಿದ್ದಾರೆ. ಅಲ್ಲದೇ, ರಾಗಿ ಮಾರಾಟಕ್ಕೆ ಚೀಟಿ ಪಡೆದ 462 ರೈತರಿಂದ 100ರಂತೆ 46 ಸಾವಿರಕ್ಕೂ ಹೆಚ್ಚು ಹಣ ಪಡೆಯಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.

ಸರ್ಕಾರ ಯೋಜನೆ: ರಾಗಿ ಬೆಳೆದು ಉತ್ತಮ ಮಾರುಕಟ್ಟೆಯಿಲ್ಲದೆ ನಲುಗುತಿದ್ದ ರೈತರಿಗೆ 1ಎಕರೆಗೆ 10 ಕ್ವಿಂಟಲ್‌ನಂತೆ 5ಎಕರೆಗೆ ಗರಿಷ್ಟ 50 ಕ್ವಿಂಟಾಲ್‌ ಖರೀದಿಸುವ ಅವಕಾಶ ಮಾಡಿಕೊಟ್ಟ ಸರ್ಕಾರ ಎಲ್ಲಾ ತಾಲೂಕುಗಳಲ್ಲಿ ರಾಗಿ ಖರೀದಿ ಕೇಂದ್ರ ಸ್ಥಾಪನೆ ಮಾಡಿದೆ. ಆದರೆ, ರೈತರಿಗೆ ನೆರವಾಗಬೇಕಿದ್ದ ಅಧಿಕಾರಿಗಳು ಅವರಿಂದಲೇ ಹಣ ಪಡೆಯುತ್ತಿದ್ದಾರೆ.

ರೈತರ ವಿರೋಧ : ಹಣ ವಸೂಲಿ ಮಾಡುವವರ ವಿರುದ್ಧ ಕೆಲ ರೈತರು ಬುಧವಾರ ಬೆಳಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುವ ಮೂಲಕ ವಿರೋಧ ವ್ಯಕ್ತಪಡಿಸಿದ್ದರು.

ಏಜೆಂಟ್‌ಗಳ ಸೃಷ್ಟಿ : ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಚೀಲಗಳ ಸಾಗಾಟಕ್ಕೆ ಗುತ್ತಿಗೆ ನೀಡಲಾಗಿದೆ ಎಂದು ತಿಳಿಸುವ ಅಧಿಕಾರಿಗಳು, ಸರ್ಕಾರಿ ವಾಹನದಲ್ಲಿ ರಾಗಿ ಸಾಗಾಟ ಮಾಡುತ್ತಿದ್ದಾರೆ. ಇದಲ್ಲದೆ ದೊಡ್ಡಬಳ್ಳಾಪುರ ಗೋದಾಮಿನಲ್ಲಿ ಲಾರಿಗೆ 2 ಸಾವಿರದಂತೆ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದೆ. ಇನ್ನೂ ಅಧಿಕಾರಿಗಳ ಮುಂದೆಯೇ ರೈತರಿಂದ ರಾಜಾರೋಷವಾಗಿ ಹಣ ವಸೂಲಿ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳೇ ಕಾಣಲಿಲ್ಲವೆ : ಗ್ರಾಮಾಂತರ ಜಿಲ್ಲೆಯಲ್ಲಿ ಹಣವಸೂಲಿಯ ಪ್ರಕರಣದ ಆರೋಪಗಳು ಹಿಂದೆಯೇ ಕೇಳಿಬಂದಿತ್ತು. ಹಲವು ಬಾರಿ ಸಮಸ್ಯೆಗಳು ಎದುರಾಗಿದ್ದ ಹಿನ್ನಲೆ
ತಾಲೂಕಿನ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ, ಹಣವಸೂಲಿ ಮಾಡುತ್ತಿರುವ ಖರೀದಿಕೇಂದ್ರದ ಮಧ್ಯವರ್ತಿಗಳು ಕಾಣಲಿಲ್ಲವೇ ಎಂದು ರೈತರು ಬೇಸರ ವ್ಯಕ್ತಪಡಿಸಿದರು.

ಸಂಕಷ್ಟದಲ್ಲಿರುವ ರೈತರಿಗೆ ಜೀವನ ಸಾಗಿಸಲು ಅನುಕೂಲವಾಗಿದ್ದ ರಾಗಿ ಖರೀದಿ ಕೇಂದ್ರಗಳಲ್ಲಿ ಮಧ್ಯವರ್ತಿಗಳು ಹಾಗೂ ಭ್ರಷ್ಟ ಅಧಕಾರಿಗಳ ಹಾವಳಿ ಮಿತಿಮೀರಿದೆ. ಸಾವಿರಾರು ರೂಪಾಯಿ ಹಣವಸೂಲಿ ಮಾಡುತ್ತಿರುವುದು ದುರಂತ. ರೈತರ ಹಣಕ್ಕೆ ಕನ್ನ ಹಾಕುವವರಿಗೆ ಅಧಿಕಾರಿಗಳು ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು.
ಕೆ.ಹನುಮಂತಯ್ಯ, ಭಾರತೀಯ
ಕಿಸಾನ್‌ ಸಂಘದ ಉಪಾಧ್ಯಕ್ಷ

ಮಧ್ಯರ್ತಿಗಳು, ಅಧಿಕಾರಿಗಳ ಸೇರಿ ಒಂದು ಚೀಲಕ್ಕೆ 6 ರಿಂದ 10
ರೂಗಳಷ್ಟು ಹಣವನ್ನು ತೆಗೆದುಕೊಳ್ಳುತ್ತಾರೆ . ಬಿಲ್‌ ಕೇಳಿದರೆ ಮೂಟೆಯನ್ನು ಲಾರಿಗೆ ತುಂಬುವುದಿಲ್ಲ ಎಂದು ಎದುರಿಸುತ್ತಾರೆ ಕಷ್ಟದಲ್ಲಿ ಹಣ ನೀಡುವ ಪರಿಸ್ಥಿತಿ ಎದುರಾಗಿದೆ.
●ಪ್ರಕಾಶ್‌, ರೈತ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.