ದರ್ಗಾಜೋಗ ಹಳ್ಳಿ ಗ್ರಾಪಂಗೆ ನಾಗಭೂಷಣ್‌ ಅಧ್ಯಕ್ಷ


Team Udayavani, Sep 24, 2020, 2:10 PM IST

ದರ್ಗಾಜೋಗ ಹಳ್ಳಿ ಗ್ರಾಪಂಗೆ ನಾಗಭೂಷಣ್‌ ಅಧ್ಯಕ್ಷ

ದೊಡ್ಡಬಳ್ಳಾಪುರ: ತೀವ್ರ ಕುತೂಹಲ ಕೆರಳಿಸಿದ್ದ ತಾಲೂಕಿನ ದರ್ಗಾಜೋಗಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಜೆ.ಎಸ್‌.ನಾಗಭೂಷಣ್‌ ಆಯ್ಕೆಯಾಗಿದ್ದಾರೆ.

ಎನ್‌.ಎಸ್‌.ನಟರಾಜ್‌ ಅಭ್ಯರ್ಥಿ ಎಂದೇ ಕಾಂಗ್ರೆಸ್‌ ವರಿಷ್ಠರು ಸೂಚನೆ ನೀಡಿದ್ದರು. ಆದರೆ ಕೊನೆಗಳಿಗೆಯ ರಾಜಕೀಯ ಬೆಳವಣಿಗೆಯಲ್ಲಿ ನಾಗೇಶ್‌ ಬೆಂಬಲಿತ ಸದಸ್ಯರು, ಸೆಡ್ಡು ಹೊಡೆದು ಜೆಡಿಎಸ್‌, ಬಿಜೆಪಿ ಸದಸ್ಯರ ನೆರವಿನೊಂದಿಗೆ ಜೆ.ಎಸ್‌.ನಾಗಭೂಷಣ್‌ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದ್ದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ಈ ಸಂದರ್ಭದಲ್ಲಿ ಚುನಾವಣೆ ಅಧಿಕಾರಿಯಾಗಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್‌ ಸಮ್ಮುಖದಲ್ಲಿ 24 ಸದಸ್ಯರ ಬಲದ ಗ್ರಾಪಂಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆ.ಎಸ್‌.ನಾಗಭೂಷಣ್‌, ಎನ್‌.ಎಸ್‌.ನಟರಾಜ್‌, ಶಶಿಕಲಾ ನಾಗರಾಜ್‌ ನಾಮಪತ್ರ ಸಲ್ಲಿಸಿದ್ದರು. ಶಶಿಕಲಾ ನಾಗರಾಜ್‌ ನಾಮಪತ್ರ ಹಿಂಪಡೆದ ಕಾರಣ ನಂತರ ನಡೆದಚುನಾವಣಾಪ್ರಕ್ರಿಯೆಯಲ್ಲಿ ಜೆ.ಎಸ್‌.ನಾಗಭೂಷಣ್‌ 19, ಎನ್‌.ಎಸ್‌ .ನಟರಾಜ್‌ 5 ಮತ ಪಡೆದರು. ಈ ವೇಳೆ ಬೆಂಬಲಿಗರು ನಾಗಭೂಷಣ್‌ ಅವರನ್ನು ಅಭಿನಂದಿಸಿದರು.

………………………………………………………………………………………………………………………………………………………

ಮಠಕ್ಕೆ ಜಮೀನು: ಗೊಂದಲ ನಿವಾರಣೆ : ನೆಲಮಂಗಲ: ಸಿದ್ಧಗಂಗಾ ಮಠಕ್ಕೆ ಮಂಜೂರು ಮಾಡಲಾಗಿರುವ ತಾಲೂಕಿನ ಯಲಚಗೆರೆ ಗ್ರಾಮದ ಸರ್ವೆ ನಂ 74ರ 9.20 ಎಕರೆ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ತಹಶೀಲ್ದಾರ್‌ ಎಂ. ಶ್ರೀನಿವಾಸ್‌ ಜನರಲ್ಲಿದ್ದ ಗೊಂದಲ ನಿವಾರಿಸಿದರು.

ಗ್ರಾಮದ ಪರಿಶಿಷ್ಟ ಜಾತಿ, ಪಂಗಡ ಜನರಿಗೆ ನಿವೇಶನ, ರುದ್ರಭೂಮಿ ನೀಡುವಂತೆ ಮನವಿ ಮಾಡಿದ್ದರು. ‌ನಮಗೆ ಜಮೀನು ನೀಡದೇಮಠಕ್ಕೆ ನೀಡಿದ್ದಾರೆಎಂದು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಇದರ ಬಗ್ಗೆ ಬುಧವಾರ ಸ್ಥಳಕೆ R ಭೇಟಿ ನೀಡಿ ಬೇಡಿಕೆಯಂತೆ ಪ್ರತ್ಯೇಕ ಜಾಗ ನೀಡಲಾಗುತ್ತಿದೆ ಎಂದು ತಹಸೀಲ್ದಾರ್‌ ತಿಳಿಸಿದರು.

ಜನರು ಒಪ್ಪಿಗೆ: ಗ್ರಾಮದ ಜನರು ಮೃತರ ಅಂತ್ಯಕ್ರಿಯೆ ಮಾಡಿರುವ ಜಾಗ ಮಠಕ್ಕೆ ನೀಡಲಾಗಿದೆ ಎಂದು ವಿರೋಧ ವ್ಯಕ್ತಪಡಿಸಿದರು. ಆದರೆ ಅಳತೆ ಮಾಡಿದ ನಂತರ ಮಠಕ್ಕೆ ನೀಡಲಾಗಿರುವ ಜಾಗ ಸರ್ವೆ ನಂ 74ರಲ್ಲಿ ಇದ್ದು, ರುದ್ರಭೂಮಿ ಸರ್ವೆ ನಂ 75ರಲ್ಲಿ ಇದೆ. ಇದರ ಬಗ್ಗೆ ಗ್ರಾಮಸ್ಥರಲ್ಲಿ ಮನವಿ ಮಾಡಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

ಮಠಕ್ಕೆ ಮಂಜೂರು ಮಾಡಿರುವ ಜಾಗದಲ್ಲಿ ಗ್ರಾಮಸ §ರು ಗುಡಿಸಲು ಹಾಕಿರುವುದನ್ನು ತೆರವು ಮಾಡಬೇಕು ಎಂದು ಸೂಚಿಸಲಾಗಿದ್ದು ಗ್ರಾಮಲೆಕ್ಕಾಧಿಕಾರಿಗೆ ತೆರವು ಮಾಡಿಸುವಂತೆ ಸೂಚನೆ ನೀಡಿದರು. ಗ್ರಾಮಕ್ಕೆ ನೀಡಿರುವ ಜಮೀನು ನಮಗೆಸಲ್ಲಬೇಕು, ತಹಶೀಲ್ದಾರ್‌ ಭರವಸೆ ನೀಡಿದ್ದಾರೆ. ಆದರೆ ಮಠಕ್ಕೆ ಜಮೀನು ನೀಡಿದರೆ ಗ್ರಾಮಸ್ಥರಿಗೆ ಉಳಿಯುವುದು ಅಲ್ಪ ಜಾಗ. ಹೀಗಾಗಿ ಭರವಸೆ ಮಣ್ಣಾಗದೇ ನಮ್ಮ ಬೇಡಿಕೆ ಪೂರೈಸಬೇಕು ಎಂದು ಗ್ರಾಮಸ್ಥ ಹನುಮಂತರಾಜು ತಿಳಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.