ಬಾರದ ಅನುದಾನ, ಅಭಿವೃದ್ಧಿಯಾಗದ ವೀರಾಪುರ


Team Udayavani, Jun 16, 2020, 6:49 AM IST

aanudaana

ನೆಲಮಂಗಲ: ಸಿದ್ಧಗಂಗಾ ಶ್ರೀಗಳ ಹುಟ್ಟೂರು ವೀರಾಪುರ ಗ್ರಾಮವನ್ನು ಪಾರಂ ಪರಿಕ ಕೇಂದ್ರವಾಗಿಸಲು ಸರ್ಕಾರ ಮುಂದಾಗಿದೆ. ಅದಕ್ಕಾಗಿ 25 ಕೋಟಿ ರೂ. ವಿಶೇಷ ಅನುದಾನ ನೀಡಿದೆ. ಆದರೆ ಘೋಷಣೆಯಾಗಿ 8 ತಿಂಗಳಾದರೂ ಕಾಮಗಾರಿ ಆರಂಭವಾಗಿಲ್ಲ. ಹೀಗಾಗಿ ವಿಶೇಷ ಅನುದಾನ ಕೇವಲ ಘೋಷಣೆಗೆ ಮಾತ್ರವೇ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಎದುರಾಗಿದೆ.

ಶ್ರೀಗಳ ಪ್ರತಿಮೆ ನಿರ್ಮಾಣ ಹಾಗೂ ಗ್ರಾಮದ ಅಭಿವೃದ್ಧಿಗೆ ಸಿಎಂ ಬಿ.ಎಸ್‌.ಯಡಿ ಯೂರಪ್ಪ  ಶಂಕುಸ್ಥಾಪನೆ ಮಾಡಿದ ಬಳಿಕ ಈವರೆಗೂ ಅಭಿವೃದ್ಧಿ ಕಾಮಗಾರಿಗಳು ಆರಂಭ‌ವಾಗಿಲ್ಲ. ಜತೆಗೆ ಸರ್ಕಾರ ಅಭಿವೃದ್ಧಿ ಮಾತುಗಳನ್ನಾಡುತ್ತಿದೆಯೇ ವಿನಾ, ಗ್ರಾಮದ ಅಭಿವೃದ್ಧಿಗೆ ಮುಂದಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮುರಿದು ಬಿದ್ದ ನಾಮಫ‌ಲಕ: ಶ್ರೀಗಳ ಪ್ರತಿಮೆ ನಿರ್ಮಾಣಕ್ಕೆ ಅದೂಟಛಿರಿ ಶಂಕುಸ್ಥಾಪನೆ ನಡೆದ ನಂತರ ಬಾಣವಾಡಿ ಗ್ರಾಪಂ ನಿಂದ ವೀರಾಪುರಕ್ಕೆ ಬರುವ ಮಾರ್ಗದಲ್ಲಿ ನಿರ್ಮಾಣವಾಗಿದ್ದ ನಾಮಫ‌ಲಕ ಮುರಿದು ಚರಂಡಿಯಲ್ಲಿ  ಬಿದ್ದಿದೆ. ಆದರೆ ಅದನ್ನು ಸರಿಪಡಿಸುವುದಾಗಲಿ, ತೆರವುಗೊಳಿಸುವುದಾಗಲಿ ಮಾಡಿಲ್ಲ. ಗ್ರಾಮಕ್ಕೆ ಬರುವ ಜನರು ಮುರಿದ ನಾಮಫ‌ಲಕ ಕಂಡು ಇದೇ ವೀರಾಪುರ ಮಾರ್ಗ ಎಂದು ತಿಳಿಯಬೇಕಾಗಿದೆ.

ಪಾಚಿಕಟ್ಟಿದ ಟ್ಯಾಂಕ್‌: ಶ್ರೀಗಳ  ಪ್ರತಿಮೆ ನಿರ್ಮಾಣ ಘೋಷಣೆಯಾದ ನಂತರ ನೂರಾರು ಜನರು ಬರುತ್ತಿದ್ದಾರೆ. ಆದರೆ ಗ್ರಾಮ ದಲ್ಲಿ ಪಾಚಿಕಟ್ಟಿದ ಹಳೆಯ ನೀರಿನ ಟ್ಯಾಂಕ್‌ಗಳನ್ನೇ ಬಳಸುತ್ತಿರುವುದು ಶೋಚ ನಿಯ. ಶ್ರೀಗಳ ಹಳೆಮನೆ, ಗ್ರಾಮದ ರಸ್ತೆ, ಚರಂಡಿ, ಸರಕಾರಿ ಶಾಲೆ ಸೇರಿದಂತೆ ಅಭಿವೃದ್ಧಿ ಕೆಲಸಗಳು ಆರಂಭವಾಗಿಲ್ಲ ಎಂದು ದೂರುಗಳು ಕೇಳಿದೆ.

ಕುಡುಕರ ಅಡ್ಡ: ಪ್ರತಿಮೆ ನಿರ್ಮಾಣ ಮಾಡುವ ಬಂಡೆ ಜಾಗಕ್ಕೆ ರಸ್ತೆ ಮಾಡಿದ ನಂತರ ಕಾಮಗಾರಿ ಆರಂಭವಾಗಿಲ್ಲ. ಆದರೆ ಕುಡುಕರು,ಪುಂಡರ ಹಾವಳಿ ಹೆಚ್ಚಾಗಿದ್ದು ಬಂಡೆಯ ಸಮೀಪದ ಮರಗಳ ಕೆಳಗೆ ಕುಳಿತು  ಪುಂಡಾಟವಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಬಗ್ಗೆ ಅಧಿಕಾರಿಗಳಿಗೂ ತಿಳಿದಿದ್ದು ಕಾಮಗಾರಿ ಆರಂಭವಾದ ನಂತರ ನಿಲ್ಲುತ್ತದೆ ಬಿಡಿ ಎನ್ನುತ್ತಾರೆ.

ವಿಶೇಷ ಅನುದಾನದ ಬಗ್ಗೆ ಗ್ರಾಪಂಗಳಿಗೆ ತಿಳಿಸಿಲ್ಲ. ಕಂದಾಯ ಇಲಾಖೆಗೆ ಅನುದಾನ ಬಿಡುಗಡೆಯಾಗಿರು ವುದು. ಅವರಿಂದಲೇ ನೇರ ಕೆಲಸವಾಗಬೇಕು. ಈವರೆಗೂ ಕಾಮಗಾರಿ ಆರಂಭವಾಗಿಲ್ಲ. ಅಧಿಕಾರಿಗಳನ್ನು ಕೇಳಿದರೆ ಮಾಹಿತಿ  ನೀಡುತ್ತೇವೆ.
-ಉಷಾ ಮಾಳಗಿಮನಿ, ಬಾಣವಾಡಿ ಗ್ರಾಪಂ ಪಿಡಿಒ

ಕಾಮಗಾರಿ ಮಾಡುವುದೆಲ್ಲ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಡಲಾಗುತ್ತದೆ. ಕಂದಾಯ ಇಲಾಖೆಯಿಂದ ಏನು ಮಾಡುತ್ತಿಲ್ಲ. ನಾನು ವೀರಾಪುರಕ್ಕೆ ಹೋಗಿದ್ದೆ. ಈವರೆಗೂ ಏನು ಕೆಲಸವಾಗಿಲ್ಲ.
-ಶ್ರೀನಿವಾಸ್‌ ಪ್ರಸಾದ್‌, ಮಾಗಡಿ ತಾಲೂಕು ತಹಶೀಲ್ದಾರ್‌

* ಕೊಟ್ರೇಶ್‌ ಆರ್‌.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.