ಬಿರುಗಾಳಿ ಮಳೆಗೆ ನೆಲಕಚ್ಚಿದ ಅಡಕೆ, ಬಾಳೆ


Team Udayavani, May 19, 2019, 3:00 AM IST

birigali

ನೆಲಮಂಗಲ: ತಾಲೂಕಿನಾದ್ಯಂತ ಸುರಿಯುತ್ತಿರುವ ಬಿರುಗಾಳಿ ಸಹಿತ ಭಾರೀ ಮಳೆಯಿಂದ ತಾಲೂಕಿನಾದ್ಯಂತ ಜನಜೀವನ ಅಸ್ತವ್ಯಸ್ತವಾದರೆ ಕೆಲವೆಡೆ ರೈತರ ಪಾಲಿಹೌಸ್‌, ಬಾಳೆ, ಅಡಕೆ ಮರಗಳು ಹಾನಿಯಾಗಿದ್ದು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ.

ಶುಕ್ರವಾರ ಸಂಜೆ ವೇಳೆಗೆ ತಾಲೂಕಿನ ಹೊಸಪಾಳ್ಯದಲ್ಲಿ ಭಾರಿ ಮಳೆ ಸುರಿಯಿತು. ಈ ವೇಳೆ ರೈತ ಸಿದ್ದಗಂಗಯ್ಯನವರ ಬಾಳೆತೋಟದಲ್ಲಿ ಆಲಿಕಲ್ಲು ಮಳೆಯಿಂದ ಸಂಪೂರ್ಣವಾಗಿ ಹಾಳಾದರೇ, ಜಕ್ಕಸಂದ್ರದ ದೊಡ್ಡಚಿಕ್ಕಗಂಗಯ್ಯನವರ ಪಾಲಿಹೌಸ್‌ ಸಂಪೂರ್ಣ ನೆಲಕಚ್ಚಿದೆ. ಇದರಿಂದ ಸುಮಾರು 10ಲಕ್ಷಕ್ಕೂ ಹೆಚ್ಚು ಹಣನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಆಧುನಿಕ ಬೇಸಾಯ ಮತ್ತು ತೋಟಗಾರಿಕೆ ರೂಡಿಕೊಂಡು ಪಾಲಿ ಹೌಸ್‌ ನಿರ್ಮಿಸಿದ್ದ ದೊಡ್ಡಚಿಕ್ಕಗಂಗಯ್ಯ ಗ್ರಾಮೀಣ ಕಲ್ಪತರು ಬ್ಯಾಂಕ್‌ನಿಂದ ಸಾಲ ಪಡೆದ್ದರು. ಆದರೆ, ಮಳೆಯ ಆರ್ಭಟಕ್ಕೆ ಹಾಕಿದ ಬಂಡವಾಳವನ್ನು ಮಳೆ ಮಣ್ಣುಪಾಲು ಮಾಡಿದೆ. ಇದಲ್ಲದೆ ಬಾಳೆ, ಅಡಕೆ ಮರಗಳು ಮುರಿದು ಬಿದ್ದು ಅಪಾರ ನಷ್ಟ ಸಂಭವಿಸಿದೆ.

ಮನೆ ಪರಿಶೀಲನೆ: ಶುಕ್ರವಾರ ಸುರಿದ ಭಾರಿ ಮಳೆಯಿಂದ ಹಾಜಿಪಾಳ್ಯ ಗ್ರಾಮದ ಉಮೇಶ್‌ ಅವರ ಮನೆ ಚಾವಣೆ, ಗೋಡೆಗಳು ಸಂಪೂರ್ಣ ಹಾನಿಯಾಗಿವೆ. ಶನಿವಾರ ಬೆಳಗ್ಗೆ “ಉದಯವಾಣಿ’ಯಲ್ಲಿ ಸುದ್ದಿ ಪ್ರಕಟವಾಗಿದ್ದ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಕೆ.ಎನ್‌.ರಾಜಶೇಖರ್‌ ಹಾನಿಗೊಳಗಾದ ಮನೆ ಪರಿಶೀಲಿಸಿ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ತರಾಟೆ: ಹಾಜಿಪಾಳ್ಯ ಗ್ರಾಮದಲ್ಲಿ ಮಳೆಯಿಂದ ಮನೆ ಹಾನಿಯಾದರೂ ಸ್ಥಳೀಯ ಗ್ರಾಮಲೆಕ್ಕಾಧಿಕಾರಿ, ರಾಜಸ್ವ ನಿರೀಕ್ಷಕ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸ್ಥಳ ಪರಿಶೀಲನೆ ನಡೆಸಲಿಲ್ಲ. ಹೀಗಾಗಿ ತಹಶೀಲ್ದಾರ್‌ ಕೆ.ಎನ್‌.ರಾಜಶೇಖರ್‌ ದೂರವಾಣಿ ಮೂಲಕ ಗ್ರಾಮಲೆಕ್ಕಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ರಥೋತ್ಸವದ ನಂತರ ಮಳೆ: ತಾಲೂಕಿನ ತ್ಯಾಮಗೊಂಡ್ಲು ಬೈಲಾಂಜನೇಯ ಸ್ವಾಮಿ ರಥೋತ್ಸವದ ಮುಗಿದ ನಂತರ ಮಳೆ ಆರ್ಭಟ ಹೆಚ್ಚಾಗಿ ಕೆಲಕಾಲ ಭಕ್ತರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೆಲವು ಕಡೆ ಬಿರುಗಾಳಿ ಮಳೆಗೆ ರಸ್ತೆಪಕ್ಕದ ಮರಗಳು ಧರೆಗುರುಳಿ ಪ್ರಯಾಣಿಕರು ಆತಂಕದಲ್ಲಿ ಸಂಚರಿಸುವಂತಾಗಿತ್ತು.

ಉರುಳಿದ ಮರಗಳು: ಪಟ್ಟಣ ಸೇರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸುರಿದ ಧಾರಾಕಾರ ಮಳೆ ಮತ್ತು ಬಿರುಗಾಳಿಗೆ ರಸ್ತೆಬದಿಗಳಲ್ಲಿನ ಕೆಲಮರಗಳ ಕೊಂಬೆಗಳು ಬಿದ್ದರೆ ಮತ್ತೆ ಕೆಲವೆಡೆ ಮರಗಳೇಧರೆಗುರುಳಿದ್ದರಿಂದ ಕೆಲ ಕಾಲ ಸಂಚಾರ ಸಮಸ್ಯೆ ಎದುರಾಗಿತ್ತು.

ಅಲ್ಲದೇ, ಮತ್ತೆ ಕೆಲವೆಡೆ ವಿದ್ಯುತ್‌ ತಂತಿಗಳ ಮೇಲೆ ಮರಗಳು ಬಿದ್ದು ವಿದ್ಯುತ್‌ ಸಮಸ್ಯೆ ಎದುರಾಗಿತ್ತು. ಪಟ್ಟಣದ ಕೆಇಬಿ ಹಿಂಭಾಗದ ಜ್ಯೋಪರ್ಣೀಕ ನಿಲಯದ ಪಕ್ಕದಲ್ಲಿದ್ದ ಹಳೆಯದಾದ ತೆಂಗಿನ ಮರ ಮನೆಯೊಂದರ ಮೇಲೆ ಬಿದ್ದು ಮನೆ ಜಖಂ ಆಗಿದೆ. ಆದರೆ, ಅದೃಷ್ಟವಶಾತ್‌ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.