ರಾಗಿ ಖರೀದಿಸದೇ ಅಧಿಕಾರಿಗಳು ಪರಾರಿ

ಕೋಪಗೊಂಡಿದ್ದ ರೈತರು ಅಧಿಕಾರಿಗಳುನ್ನು ತರಾಟೆಗೆ ತೆಗೆದುಕೊಂಡರು. 

Team Udayavani, May 24, 2022, 6:20 PM IST

ರಾಗಿ ಖರೀದಿಸದೇ ಅಧಿಕಾರಿಗಳು ಪರಾರಿ

ನೆಲಮಂಗಲ: ತಾಲೂಕಿನ ರೈತರ ರಾಗಿಖರೀದಿ ಮಾಡಬೇಕಾದ ರಾಗಿ ಖರೀದಿ ಕೇಂದ್ರ ಅಧಿಕಾರಿಗಳು ಸೋಮವಾರ ಮಧ್ಯಾಹ್ನದ ವೇಳೆಗೆ ಪರಾರಿಯಾಗಿದ್ದು,
ರೈತರು ರಾಗಿ ಮಾರಾಟ ಮಾಡಲು ಪರದಾಡುವಂತಾಗಿದ್ದು, ರೈತರ ಹಿಡಿಶಾಪಕ್ಕೆ ಅಧಿಕಾರಿಗಳು ಗುರಿಯಾದ ಘಟನೆ ಕೆಂಪಲಿಂಗನಹಳ್ಳಿ ಬಳಿಯ ರಾಗಿ ಖರೀದಿ
ಕೇಂದ್ರದ ಬಳಿಯಲ್ಲಿ ಸಂಭವಿಸಿದೆ.

ತಾಲೂಕಿನ ಕಳೆದ ಎರೆಡು ದಿನ ರೈತರು ತಮ್ಮ ರಾಗಿಯನ್ನು ರಾಗೀ ಖರೀದಿ ಕೇಂದ್ರಕ್ಕೆ ಮಾರಾಟಕ್ಕೆಂದು ತಂದು ಸರತಿ ಸಾಲಿನಲ್ಲಿ ನಿಂತಿದ್ದರು. ಮಧ್ಯಾಹ್ನವಾದರೂ ರಾಗಿ ಖರೀದಿ ಕೇಂದ್ರದ ಚಟುವಟಿಕೆ ಪ್ರಾರಂಭವಾಗದ ಹಿನ್ನೆಲೆ ಕಾಯ್ದು ಕಾಯ್ದು ಕೋಪಗೊಂಡಿದ್ದ ರೈತರು ಅಧಿಕಾರಿಗಳುನ್ನು ತರಾಟೆಗೆ ತೆಗೆದುಕೊಂಡರು.

ಕ್ರಮ ಜರುಗಿಸಲು ಒತ್ತಾಯ: ಈ ವೇಳೆ ಸ್ಥಳದಲ್ಲಿದ್ದ ಕೇಂದ್ರದ ಅಧಿಕಾರಿಗಳು ರಾಗಿ ಖರೀದಿ ಮತ್ತು ಸಾಗಾಣಿಕೆಯ ಗುತ್ತಿಗೆ ಪಡೆದುಕೊಂಡಿರುವ ಗುತ್ತಿಗೆದಾರರು
ಸೋಮವಾರ ರಾಗಿ ಸಾಗಣೆ ಮಾಡಲು ಲಾರಿಗಳನ್ನು ಕಳುಹಿಸಿಲ್ಲ ಎಂದು ಸಬೂಬು ಹೇಳಿದ್ದಾರೆ. ಅಧಿಕಾರಿಗಳ ಉತ್ತರದಿಂದ ಆಕ್ರೋಶಗೊಂಡ ರೈತರು ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗದುಕೊಳ್ಳುತಿದ್ದಂತೆ ಅಧಿಕಾರಿಗಳು ತಮ್ಮ ಕಾಲಿಗೆ ಬುದ್ಧಿ ಹೇಳಿದ್ದಾರೆ.

ರೈತರ ಸಮಸ್ಯೆಗಳನ್ನು ಮೇಲಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸದ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ರಾಗಿ ಮಾರಾಟ ಮಾಡಲು ಬಂದಿದ್ದ ರೈತರು ಆಗ್ರಹಿಸಿದ್ದಾರೆ.

ಬಡ ರೈತರಿಗೆ ಅನ್ಯಾಯ: ಭಾರತೀಯ ಕಿಸಾನ್‌ ಸಂಘದ ರಾಜ್ಯ ಪ್ರದಾನ ಕಾರ್ಯದರ್ಶಿ ಕಾಸರಘಟ್ಟ ಗಂಗಾಧರ್‌ ಸ್ಥಳಕ್ಕೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಅವರು, ಕಳೆದೆರೆಡು ದಿನಗಳಿಂದ ಕಾಯ್ದು ಕುಳಿತಿದ್ದ ರೈತರನ್ನು ಕೈಬಿಟ್ಟು ಲಂಚ ನೀಡಿದ ಕೆಲವೇ ರೈತರಿಗೆ ಟೋಕನ್‌ ನೀಡಿ ಅವರನ್ನು ದೊಡ್ಡಬಳ್ಳಾಪುರಕ್ಕೆ ಕಳುಹಿಸಿ ಕೊಡಲಾಗಿದೆ. ಇದರಿಂದ ಬಡ ರೈತರಿಗೆ ಅನ್ಯಾಯವಾಗುತ್ತಿದೆ. ರಾಜ್ಯದಲ್ಲಿ  ಸರ್ಕಾರ ಸತ್ತು ಹೋಗಿದೆ. ಸಚಿವರುಗಳು ಎಲ್ಲಿಗೆ ಹೋಗಿದ್ದಾರೆಂಬುದು ಗೊತ್ತಿಲ್ಲ, ಅವರಿಗೆ ರೈತರ ಸಮಸ್ಯೆ ಆಲಿಸಿ ಬಗೆಹರಿಸುವ ಮನಸ್ಥಿತಿಯಿಲ್ಲ ಎಂದರು.

ಹೋರಾಟದ ಎಚ್ಚರಿಕೆ
ಆಡಳಿತ ನಡೆಸುವವರು ಮೈಮರೆತು ಕುಳಿತಂತಿದೆ. ರೈತರ ಕಷ್ಟವನ್ನು ಬಗೆಹರಿಸುತ್ತೇವೆಂದು ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬರುವವರು ತಮ್ಮ ಸ್ವಂತ ಹಿತಾಸಕ್ತಿಯನ್ನು ಕಾಯ್ದುಕೊಳ್ಳುತ್ತಿದ್ದಾರೆ. ಈ ಸಮಸ್ಯೆ ಪರಿಹರಿಸಲು ಸ್ಥಳೀಯ ತಾಲೂಕು ಆಡಳಿತ ಮುಂದಾಗಬೇಕು. ಇಲ್ಲವಾದಲ್ಲಿ ರೈತರು ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಭಾರತೀಯ ಕಿಸಾನ್‌ ಸಂಘದ ರಾಜ್ಯ ಪ್ರದಾನ ಕಾರ್ಯದರ್ಶಿ ಕಾಸರಘಟ್ಟ ಗಂಗಾಧರ್‌ ಎಚ್ಚರಿಕೆಯನ್ನು ನೀಡಿದರು.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.