ರಾಜಕೀಯ ಪ್ರಾತಿನಿಧ್ಯಕ್ಕಾಗಿ ಸಂಘಟನಾ ಸಮಾವೇಶ


Team Udayavani, Feb 27, 2021, 11:41 AM IST

ರಾಜಕೀಯ ಪ್ರಾತಿನಿಧ್ಯಕ್ಕಾಗಿ ಸಂಘಟನಾ ಸಮಾವೇಶ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ದೇವಾಂಗ ಸಮುದಾಯ ಬಹುಸಂಖ್ಯಾತರಾಗಿದ್ದರೂ ರಾಜಕೀಯ ಅಸ್ತಿತ್ವ ಪಡೆದುಕೊಳ್ಳುವಲ್ಲಿ ವಿಫಲವಾಗುತ್ತಿದೆ. ಈ ದಿಸೆಯಲ್ಲಿ ದೇವಾಂಗ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯಕ್ಕೆ ಸಂಕಲ್ಪ, ದೇವಾಂಗ ಸಮುದಾಯದ ಸಮಗ್ರ ಪ್ರಗತಿ ಹಾಗೂ ದೇವಾಂಗ ಅಭಿವೃದ್ಧಿ ಪ್ರಾಧಿಕಾರದ ಸ್ಥಾಪನೆಗೆ ಒತ್ತಾಯಿಸಿ, ಮಾ.1ರಂದು ದೇವಾಂಗ ಸಂಘಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಂಗ ಸಮನ್ವಯ ಸಮಿತಿ ಸಂಚಾಲಕ ಎಂ.ಜಿ.ಶ್ರೀನಿವಾಸ್‌ ತಿಳಿಸಿದರು.

ನಗರದ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ದೇವಾಂಗ ಸಮನ್ವಯ ಸಮಿತಿಯಿಂದ ನಡೆದಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 52 ಕ್ಷೇತ್ರಗಳಲ್ಲಿ ದೇವಾಂಗ ಸಮುದಾಯದ ಪ್ರಭಾವ ವಿದ್ದು, 13 ಕ್ಷೇತ್ರಗಳಲ್ಲಿ ನಿರ್ಣಾಯಕವಾಗಿದೆ. ಇದರಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರವೂ ಸೇರಿದೆ.ದೊಡ್ಡಬಳ್ಳಾಪುರದಲ್ಲಿ ಈವರೆಗಿನ ಶೇ.75ರಷ್ಟು  ಸಮೀಕ್ಷೆ ನಡೆಸಿರುವ ಪ್ರಕಾರ 35 ಸಾವಿರಕ್ಕೂ ಹೆಚ್ಚು ದೇವಾಂಗ ಸಮುದಾಯದವರಿದ್ದಾರೆ. 1932ರಿಂದ ಕೊಂಗಾಡಿಯಪ್ಪ ಅವರು ಪುರ ಸಭೆಯ ಪ್ರಥಮ ಅಧ್ಯಕ್ಷರಾಗಿದ್ದರಿಂದ ಹಿಡಿದು 50 ವರ್ಷಗಳವರೆಗೆ ರಾಜಕೀಯವ ವಲಯದಲ್ಲಿ ಹಾಗೂ ವಿವಿಧ ಸಹಕಾರ ಸಂಘಗಳಲ್ಲಿ ದೇವಾಂಗ ಸಮುದಾಯದ ಮುಖಂಡರ ಪಾತ್ರ ಮಹತ್ವದ್ದಾಗಿತ್ತು ಎಂದರು.

ಒಗ್ಗೂಡಿಸುವ ಚಿಂತನೆ: ಇತ್ತೀಚಿನ ವರ್ಷಗಳಲ್ಲಿ ತಮ್ಮ ರಾಜಕೀಯ ಭವಿಷ್ಯ ರೂಪಿಸಿಕೊಳ್ಳುವಲ್ಲಿ ಹಿಂದೆ ಸರಿಯುವ ವಾತಾವರಣ ಸೃಷ್ಟಿಯಾಗುತ್ತಿದೆ. ಸಮಾವೇಶ ನಮ್ಮ ಶಕ್ತಿ ಕ್ರೋಢೀಕರಣಗೊಳಿಸಲು ಸಂಘಟಿಸಲಾಗುತ್ತಿದ್ದು, ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರ, ವಿರೋಧವಾಗಿ ಅಲ್ಲ. ಮುಂಬರುವ ದಿನಗಳಲ್ಲಿ ಹಿಂದುಳಿದ ವರ್ಗದವರನ್ನು ಒಗ್ಗೂಡಿಸುವ ಚಿಂತನೆಯಿದೆ ಎಂದರು.

ದೇವಾಂಗ ಅಭಿವೃದ್ಧಿ ಪ್ರಾಧಿಕಾರದ ಸ್ಥಾಪನೆಯಾಗಬೇಕು. ಸಮುದಾಯಕ್ಕೆ ರಾಜಕೀಯ, ಆರ್ಥಿಕ, ಶೈಕ್ಷಣಿಕ ಪೂರಕವಾಗಿ ಮೀಸಲು ವ್ಯವಸ್ಥೆಯಾಗಬೇಕು. ರಾಜಕೀಯದಲ್ಲಿ ಸಮುದಾಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ಸಿಗಬೇಕು. ಸಮಗ್ರ ಸಂಘಟನೆಗೆ ಎಲ್ಲ ಸಂಘಟನೆಗಳನ್ನು ಒಳಗೊಂಡು ಕಾರ್ಯ ನಿರ್ವಹಿಸಬೇಕು. ಸ್ಥಳೀಯ ಸಂಸ್ಥೆ ಸೇರಿ ಆಯಕಟ್ಟಿನ ಹುದ್ದೆ ಪಡೆಯಲು ಸಾಮಾಜಿಕ, ಆರ್ಥಿಕ ಭಾಷೆ ಭಿನ್ನತೆ ಮೀರಿ ಒಗ್ಗೂಡಬೇಕು ಎನ್ನುವ ಧ್ಯೇಯೋದ್ದೇಶ ಸಮಾವೇಶ ಹೊಂದಿದೆ ಎಂದರು.

ಮಾ.1ಕ್ಕೆ ಬೃಹತ್‌ ಸಮಾವೇಶ: ದೇವಾಂಗ ಸಮನ್ವಯ ಸಮಿತಿಯಿಂದ ಮಾ.1ಕ್ಕೆ ನಗರದ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ದೇವಾಂಗ ಸಂಘಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಹಂಪಿ ಹೇಮಕೂಟದ ಪೀಠಾಧ್ಯಕ್ಷ ದೇವಾಂಗ ಜಗದ್ಗುರು ಶ್ರೀ ದಯಾನಂದಪುರಿ ಸ್ವಾಮೀಜಿ, ರಾಜ್ಯಸಭಾ ಸದಸ್ಯ ಕೆ.ನಾರಾಯಣ, ಆಂಧ್ರದ ದೇವಾಂಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬೀರಕ ಸುರೇಂದ್ರ, ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರಮೇಶ್‌ ಭಾಗವಹಿಸಲಿದ್ದಾರೆ.

ದೇವಾಂಗ ಮಂಡಳಿ ಅಧ್ಯಕ್ಷ ಕೆ.ಜಿ.ದಿನೇಶ್‌, ಗಾಯಿತ್ರಿ ಪೀಠ ಮಿತ್ರಬಳಗ ಅಧ್ಯಕ್ಷ ಪಿ.ಸಿ.ಲಕ್ಷ್ಮೀನಾರಾಯಣ್‌, ಆಂಧ್ರ ದೇವಾಂಗ ಸಂಕ್ಷೇಮ ಟ್ರಸ್ಟ್‌ ಕಾರ್ಯದರ್ಶಿ ಡಿ.ಎ.ಶ್ರೀನಾಥ್‌, ಟಿ.ಎಂಸಿಬ್ಯಾಂಕ್‌ ಅಧ್ಯಕ್ಷ ಕೆ.ಪಿ.ವಾಸುದೇವ್‌ ,ನಗರಸಭೆ ಮಾಜಿ ಸದಸ್ಯ ಲೋಕೇಶ್‌ಬಾಬು, ಆಂಧ್ರ ದೇವಾಂಗ ಸಂಘದ ನಿರ್ದೇಶಕ ಕೇಶವಮೂರ್ತಿ, ಸಮನ್ವಯ ಸಮಿತಿ ಸದಸ್ಯ ಯೋಗ ನಟರಾಜ್‌, ಅಖೀಲೇಶ್‌, ಕೆರಮುಲು ಬದ್ರಿ, ಶಿವಾನಂದ್‌, ಎನ್‌.ಜಿ.ಕುಮಾರ್‌, ರಮೇಶ್‌ ಇದ್ದರು.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.