ಗಾಂಧಿಗ್ರಾಮ ಅಭಿವೃದ್ಧಿಗೆ ಅಡ್ಡವಾಗಿರುವವರ ವಿರುದ್ಧ ಆಕ್ರೋಶ


Team Udayavani, Jul 24, 2019, 3:00 AM IST

gandhi-gra

ನೆಲಮಂಗಲ: ದೇಶವನ್ನು ಪರಕೀಯರ ದಬ್ಟಾಳಿಕೆಯಿಂದ ಪಾರು ಮಾಡಿದ ಮಹಾತ್ಮ ಗಾಂಧಿಯವರ ನೆನಪಿನ ಗ್ರಾಮದಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೊಳಿಸಲು ಮುಂದಾದ ಅಧಿಕಾರಿಗಳನ್ನು ಸ್ಥಳೀಯ ಮುಖಂಡರು ತಡೆಯುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಧರಣಿ ನಡೆಸಿದರು. ತಾಲೂಕಿನ ಯಂಟಗಾನ‌ಹಳ್ಳಿ ಗ್ರಾಪಂನ ಗಾಂಧಿಗ್ರಾಮದಲ್ಲಿ ಉತ್ತಮ ರಸ್ತೆಯಿಲ್ಲದೆ, ಮೂಲ ಸೌಕರ್ಯಗಳಿಲ್ಲದೆ ಬೇಸತ್ತು ಹೋಗಿರುವ ಜನರು ಸೌಲಭ್ಯ ನೀಡುವಂತೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾದರು.

ಕಳೆದ 4 ವರ್ಷಗಳ ಹಿಂದೆ ಸರ್ಕಾರದಿಂದ ಗ್ರಾಮಕ್ಕೆ ಕಾಂಕ್ರೀಟ್‌ ರಸ್ತೆಗೆ ಮುಂದಾದ ಅಧಿಕಾರಿಗಳು ರಸ್ತೆಗೆ ಜಲ್ಲಿ ಸುರಿದು ಹಣ ಬಿಡುಗಡೆಯಾಗಿಲ್ಲ ಎಂದು ಅರ್ಧಕ್ಕೆ ಕಾಮಗಾರಿ ನಿಲ್ಲಿಸಿದ್ದಾರೆ. ಪಂಚಾಯತಿ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಯವರಿಗೆ ಗ್ರಾಮದ ಜನರು ತಿಳಿಸಿದರೆ ಸ್ಪಂದಿಸುತ್ತಿಲ್ಲ. ಇದರಿಂದಾಗಿ ಗ್ರಾಮದ ಜನರು ಹಾಗೂ ಮಕ್ಕಳಿಗೆ ಬಹಳಷ್ಟು ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಆರೋಪ: ಇನ್ನೂ ಗಾಂಧಿಗ್ರಾಮಕ್ಕೆ ಉತ್ತಮ ರಸ್ತೆಯಿಲ್ಲದ ಕಾರಣ ಆ್ಯಂಬುಲೆನ್ಸ್‌ ವಾಹನ ಬರಲು ಸಾಧ್ಯವಾಗದೇ ಜನರು ಪರದಾಡುವಂತಾಗಿದೆ., ಇನ್ನೂ ನಗರಗಳಿಗೆ ಬರುವ ಗ್ರಾಮದ ಜನರು ಬಹಳಷ್ಠು ಸಮಸ್ಯೆ ಅನುಭಸುತಿದ್ದು, ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ. ಗ್ರಾಪಂ ಸದಸ್ಯರ ನೇತೃತ್ವದಲ್ಲಿ ರಸ್ತೆ ದುರಸ್ತಿಗೆ ಮುಂದಾದರು. ಕಾಮಗಾರಿ ನಿಲ್ಲಿಸಲು ಜಿಪಂ ಮಾಜಿ ಸದಸ್ಯ ಚೆಲುವ ರಾಜು ಹಾಗೂ ಸ್ಥಳೀಯ ಮುಖಂಡರು ಮುಂದಾಗಿದ್ದಾರೆ ಎಂದು ಗ್ರಾಪಂ ಸದಸ್ಯ ಪ್ರಕಾಶ್‌ ಹಾಗೂ ಗ್ರಾಮದ ಜನರು ಆರೋಪಿಸಿದ್ದಾರೆ.

ಅನುಮೋದನೆಗೆ ಪ್ರಸ್ತಾವನೆ: ತಾಲೂಕಿನ ಯಂಟಗಾನಹಳ್ಳಿಯ ಗ್ರಾಪಂ ಎನ್‌ಎಚ್‌ 75 ಹೆದ್ದಾರಿಯಿಂದ ಗಾಂಧಿ ಗ್ರಾಮ ಮುಖಾಂತರ ಹೊನ್ನ ಸಂದ್ರ ರಸ್ತೆ ಕಾಮಗಾರಿಗೆ 1.78 ಲಕ್ಷ ಬಿಡುಗಡೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಗ್ರಾಪಂ ಸದಸ್ಯ ಅಧಿಕಾರಿಗಳ ಅನುಮತಿಯಿಲ್ಲದೆ ರಸ್ತೆ ಕಾಮಗಾರಿಗೆ ಮುಂದಾಗಿದ್ದಾರೆ ಎಂದು ಜಿಪಂ ಸದಸ್ಯೆ ಪುಷ್ಪಾ ಸಂಪತ್‌ ತಿಳಿಸಿದರು. ಅನೇಕ ವರ್ಷಗಳಿಂದ ಉತ್ತಮ ರಸ್ತೆಯಿಲ್ಲದೆ ತೊಂದರೆ ಅನುಭಸುತ್ತಿದ್ದ ಜನರಿಗೆ ಆಶಾಕಿರಣದಂತೆ 25 ಲಕ್ಷ ಖರ್ಚಿನಲ್ಲಿ ರಸ್ತೆ ಮಾಡಲು ಮುಂದಾದರು.

ರಾಜಕೀಯದ ದುರುದ್ದೇಶದಿಂದ ಕೆಲ ಮುಖಂಡರು ಕಾಮಗಾರಿ ತಡೆಯುತ್ತಿರುವುದು ದುರಂತದ ಸಂಗತಿ ಎಂದು ಗ್ರಾಮದ ಲಕ್ಷ್ಮಮ್ಮ ಬೇಸರ ವ್ಯಕ್ತಪಡಿಸಿದರು. ಸರ್ಕಾರಿ ರಸ್ತೆಯ ಕಾಮಗಾರಿ ಮಾಡುವ ಮುಂಚೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ನಂತರ ರಸ್ತೆ ಅಭಿವೃದ್ಧಿ ಮಾಡಬೇಕು. ಆದರೆ ಗಾಂಧಿ ಗ್ರಾಮದ ರಸ್ತೆ ಮಾಡಲು ಅನುಮತಿ ನೀಡಿಲ್ಲ ಪರಿಶೀಲನೆ ಮಾಡಲಾಗುತ್ತದೆ ಎಂದು ಜಿಪಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಥನ್‌ ಹೇಳಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.