ತಾಲೂಕು ಕಚೇರಿಯಲ್ಲಿ ಕಾಗದರಹಿತ ಆಡಳಿತ


Team Udayavani, Dec 4, 2019, 11:26 AM IST

br-tdy-1

ನೆಲಮಂಗಲ: ನೆಲಮಂಗಲ ತಾಲೂಕು ಕಚೇರಿ ಇನ್ಮುಂದೆ ಸಂಪೂರ್ಣ ಇಆಫೀಸ್ ವ್ಯಾಪ್ತಿಗೆ ಬರಲಿದೆ. ಇದರಿಂದಾಗಿ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್‌ ಬೀಳಲಿದೆ. ಸರಕಾರಿ ಕಚೇರಿಗಳಲ್ಲಿ ಕಾಗದ ರಹಿತ ವ್ಯವಹಾರ ಸಾರ್ವಜನಿಕರಿಗೆ ಅನು ಕೂಲವಾಗುವುದರಿಂದ ಈ ವ್ಯವಸ್ಥೆ ಜಾರಿ ತರಲಾಗಿದೆ.

ಈ ಮೂಲಕ ಬೆಂಗಳೂರು ವಿಭಾಗದಲ್ಲಿ ಇಆಫೀಸ್ಅ ಳವಡಿಸಿಕೊಂಡ ಮೊದಲ ತಾಲೂಕು ಎಂಬ ಹೆಗ್ಗಳಿಕೆಗೆ ತಾಲೂಕು ಕಚೇರಿ ಪಾತ್ರವಾಗಿದೆ. ಬೆಂಗಳೂರು ವಿಭಾಗದಲ್ಲಿ ರಾಮನಗರ, ಬೆಂ.ಗ್ರಾಮಾಂತರ, ಚಿತ್ರದುರ್ಗ, ಶಿವಮೊಗ್ಗ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಸೇರಿದಂತೆ 8 ಜಿಲ್ಲೆಗಳು ಸೇರಿವೆ.ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು 2020 .1ರಿಂದ ಕಾಗದ ರಹಿತ ಆಡಳಿತಕ್ಕೆ ನವೀಕರಣಗೊಳ್ಳಬೇಕಾಗಿದೆ. ಈಗಾಗಲೇ ಕೆಲವು ಕಚೇರಿಗಳು ಇಆಫೀಸ್ ಗೆ ಬದ ಲಾವಣೆಯಾಗುವ ಹಂತದಲ್ಲಿವೆ. ಕಾಗದರಹಿತ ಆಡಳಿತದಿಂದ ಸಾರ್ವಜನಿಕರು ಟಪಾಲಿನಲ್ಲಿ ಅರ್ಜಿ ನೀಡಿದ ತಕ್ಷಣ ತಹಸೀಲ್ದಾರ್‌ಗೆ ಮಾಹಿತಿ ರವಾನೆಯಾಗುತ್ತದೆ.

ಆಫೀಸ್ ಏಕೆ? : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಾಗದ ರಹಿತ ವ್ಯವಹಾರ ನಡೆಸಲು ರಾಜ್ಯ ಸರಕಾರ ಇಆಫೀಸ್ ಎಂಬ ವೆಬ್‌ ಅಪ್ಲಿಕೇಶನ್‌ ಪರಿಚಯಿಸಿದೆ. ಇದರಿಂದ ಸಾರ್ವಜನಿಕ ಕಚೇರಿಯಲ್ಲಿ ಕಾಗದ ರಹಿತ ವ್ಯವಹಾರದ ಜೊತೆ ಪಾರದರ್ಶಕ, ಜನಸ್ನೇಹಿ ಕಚೇರಿಯಾಗಿ ಪರಿವರ್ತಿಸಿಲು ಸಹಕಾರಿಯಾಗಿದೆ. ಟಪಾಲಿನಲ್ಲಿ ಸಲ್ಲಿಸಿದ ಅರ್ಜಿ ಕೇಸ್‌ ಸಿಬ್ಬಂದಿ, ಶೀರಸ್ಥೆದ್ಧಾರ್‌, ತಹಸೀಲ್ದಾರ್‌ಗೆ ನೇರವಾಗಿ ಮಾಹಿತಿ ತಿಳಿಯಲಿದೆ. ನೂತನ ತಹಶೀಲ್ದಾರ್‌ ಶ್ರೀನಿವಾಸಯ್ಯ ಅವರ ಇಚ್ಛಾಶಕ್ತಿಯಿಂದ ಇಆಫೀಸ್ ಗೆ ಚಾಲನೆ ದೊರಕಿದ್ದು ಸಾರ್ವಜನಿಕರು ಇದರ ಅನುಕೂಲ ಪಡೆದುಕೊಳ್ಳಬೇಕಿದೆ.

ಅರ್ಜಿ ವಿಲೇವಾರಿ ಕಾಯುವಂತಿಲ್ಲ : ಆಫೀಸ್ಬ ಳಕೆಗಿಂತ ಮುಂಚೆ ಟಪಾಲಿಗೆ ಬಂದ ಅರ್ಜಿ ಗ್ರಾಮ ಲೆಕ್ಕಾಧಿಕಾರಿ, ರಾಜಸ್ವ ನಿರೀಕ್ಷಕ, ಕೇಸ್‌ ಸಿಬ್ಬಂದಿ, ಶಿರಸ್ಥೆದ್ಧಾರ್‌ ಮೂಲಕ ತಹಶೀಲ್ದಾರ್‌ ಸಹಿಗೆ ನೀಡ ಬೇಕಾಗಿತ್ತು. ಇದರ ಮಧ್ಯೆ ಮದ್ಯವರ್ತಿಗಳ ಕಾಟ ದಿಂದ ಅರ್ಜಿ ಸಲ್ಲಿಸಿ ತಿಂಗಳಾದರೂ, ಅರ್ಜಿಗಳ ವಿಲೇವಾರಿಯಾಗುತ್ತಿರಲಿಲ್ಲ. ಕೆಲವು ಅಧಿಕಾರಿಗಳು

ಅನೇಕ ಕಾರಣಗಳನ್ನು ಹೇಳಿ ಅರ್ಜಿ ವಜಾ ಮಾಡುತಿದ್ದರು. ಇನ್ನೂ ಮುಂದೆ ನೇರ ತಹಸೀಲ್ದಾರ್‌ಗೆ ಮಾಹಿತಿ ರವಾನೆಯಾಗುವುದರಿಂದ ಅರ್ಜಿ ವಿಲೇವಾರಿ ವೇಗಪಡೆದುಕೊಳ್ಳುತ್ತದೆ.

ಕಡತಗಳಿಗೆ ತಂತ್ರಾಂಶ: ತಾಲೂಕು ಕಚೇರಿಯಲ್ಲಿನ ಕಡತಗಳನ್ನು ಸ್ಕ್ಯಾನ್‌ ಮಾಡುವ ಇಆಫೀಸ್ ನಲ್ಲಿ ಸಂಗ್ರಹಿಸಲಾಗುತ್ತದೆ. ಕಾಗದ ಕಡತಗಳನ್ನು ಹುಡುಕಾಡುವ ಬದಲು ನೇರವಾಗಿ ತಂತ್ರಾಂಶದ ಮೂಲಕ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಕೆಲವೇ ದಿನಗಳಲ್ಲಿ ಐದರಿಂದ ಆರು ವರ್ಷದ ಕಾಗದದ ಕಡತಗಳನ್ನು ಸ್ಕ್ಯಾನ್‌ ಮಾಡುವ ಮೂಲಕ ಇಆಫೀಸ್ಸ್‌ನಲ್ಲಿ ಸಂಗ್ರಹಿಸಲಾಗುವುದು ಎಂದು ತಹಶೀಲ್ದಾರ್‌ ಮಾಹಿತಿ ನೀಡಿದರು.

ಮಧ್ಯವರ್ತಿಗಳಿಗೆ ಬ್ರೇಕ್‌ : ತಾಲೂಕು ಕಚೇರಿಯಲ್ಲಿ ಸಾರ್ವಜನಿಕರು ಒಂದು ಅರ್ಜಿ ವಿಲೇವಾರಿ ಮಾಡಲು ಮಧ್ಯವರ್ತಿಗಳಿಗೆ ಸಾವಿರಾರು ಹಣ ನೀಡಬೇಕಾಗಿತ್ತು. ಆದರೆ ಇಆಫೀಸ್ ನಿಂದ ಮಧ್ಯವರ್ತಿಗಳಿಗೆ ಅಕ್ಷರಶ: ಬ್ರೇಕ್‌ ಬಿದ್ದರೂ, ಅಧಿಕಾರಿಗಳಿಗೆ ಲಾಭವಾಗಲಿದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ತಾಲೂಕು ಕಚೇರಿಯು ಇ-ಆಫೀಸ್ ವ್ಯಾಪ್ತಿಗೆ ಬಂದಿದ್ದು, ಟಪಾಲಿಗೆ ಬಂದ ಅರ್ಜಿಗಳ ಬಗ್ಗೆ ನನಗೆ ತಕ್ಷಣ ತಿಳಿಯುತ್ತದೆ. ಸಾರ್ವಜನಿಕರಿಗೆ ಮಧ್ಯವರ್ತಿಗಳ ಕಾಟ ಕಡತ,ಅರ್ಜಿ ವಿಲೇವಾರಿ ವಿಳಂಬ ತಪ್ಪಿಸಲು ಈ ಸೌಲಭ್ಯ ಉತ್ತಮವಾಗಿದೆ. ಅನೇಕ ದಿನಗಳ ಪರಿಶ್ರಮದಿಂದ ಇ-ಆಫೀಸ್ ನಮ್ಮ ವಿಭಾಗದಲ್ಲಿ ಮೊದಲ ತಾಲೂಕು ಕಚೇರಿಯಾಗಿದೆ -ಎಂ ಶ್ರೀನಿವಾಸಯ್ಯ, ತಹಶೀಲ್ದಾರ್

 

 

-ಕೊಟ್ರೇಶ್‌ ಆರ್‌

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.