ಈಗಲ್ಟನ್ ರೆಸಾರ್ಟ್ಗೆ ಪರಂ, ಬಾಲಕೃಷ್ಣ ಭೇಟಿ
Team Udayavani, Aug 4, 2017, 3:22 PM IST
ರಾಮನಗರ: ಗುಜರಾತ್ನ ಕಾಂಗ್ರೆಸ್ ಶಾಸಕರು ಇರುವ ಈಗಲ್ಟನ್ ರೆಸಾರ್ಟ್ಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಭೇಟಿ ನೀಡಿ ಶಾಸಕರ ಕುಶಲೋಪರಿ ವಿಚಾರಿಸಿದರು. ಮೂವರು ಶಾಸಕರು ಅನಾರೋಗ್ಯದಿಂದ ಬಳಲುತ್ತಿದ್ದು, ಇವರು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ ಮಾತನಾಡಿದ ಪರಮೇಶ್ವರ್, ಗುಜರಾತ್ ಶಾಸಕರೆಲ್ಲರೂ ಆರೋಗ್ಯದಿಂದ ಇದ್ದಾರೆ. ಎಲ್ಲರೂ ಆರಾಮವಾಗಿದ್ದಾರೆ. ಜ್ಯೋತಿಬಾಯಿ ಪಟೇಲ್ ಎಂಬುವರು ಮಾತ್ರ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು ವಾಪಸು ಬಂದಿದ್ದಾರೆ ಎಂದು ತಿಳಿಸಿದರು.
ಬಾಲಕೃಷ್ಣ ಚರ್ಚೆ: ಈಗಲ್ಟನ್ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರುವ ಗುಜರಾತ್ನ ಕಾಂಗ್ರೆಸ್ ಶಾಸಕರನ್ನು ಜೆಡಿಎಸ್ ಬಂಡಾಯ ಶಾಸಕ ಎಚ್.ಸಿ. ಬಾಲಕೃಷ್ಣ ಭೇಟಿ ಮಾಡಿ ಚರ್ಚಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಬಾಲಕೃಷ್ಣ, ಈ ರೆಸಾರ್ಟ್ ನನ್ನ ಕ್ಷೇತ್ರದಲ್ಲಿ ಬರುವ ಕಾರಣ ಇಲ್ಲಿಗೆ ಬಂದಿದ್ದೇನೆ. ಜತೆಗೆ ಸಂಸದ ಡಿ.ಕೆ. ಸುರೇಶ್ರನ್ನು ಭೇಟಿಮಾಡಿದ್ದೇನೆ. ಗುಜರಾತ ಶಾಸಕರು ರೆಸಾರ್ಟ್ನಲ್ಲಿ ಸಂತೋಷವಾಗಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?