ಕನ್ನಡ ಹೋರಾಟಗಳಿಗೆ ಪಾಟೀಲ ಪುಟ್ಟಪ್ಪ ಸ್ಫೂರ್ತಿ


Team Udayavani, Mar 18, 2020, 6:06 PM IST

ಕನ್ನಡ ಹೋರಾಟಗಳಿಗೆ ಪಾಟೀಲ ಪುಟ್ಟಪ್ಪ ಸ್ಫೂರ್ತಿ

ದೊಡ್ಡಬಳ್ಳಾಪುರ : ಸೋಮವಾರ ನಿಧನರಾದ ಹಿರಿಯ ಸಾಹಿತಿ, ಪತ್ರಕರ್ತ, ಪಾಟೀಲ ಪುಟ್ಟಪ್ಪ ಅವರು ದೊಡ್ಡಬಳ್ಳಾಪುರದಲ್ಲಿನ ಕನ್ನಡಪರ ಹೋರಾಟಗಾರರಿಗೆ ಸ್ಫೂರ್ತಿಯಾಗಿ ಪ್ರೇರಣೆಯಾಗಿದ್ದರು ಎಂದು ಇಲ್ಲಿನ ಕನ್ನಡಪರ ಹೋರಾಟಗಾರರು ಸ್ಮರಿಸುತ್ತಾರೆ.

ಡಾ.ರಾಜ್‌ ಚಳುವಳಿಗೆ ಧುಮುಕಲು ಕಾರಣ: 1983ರಲ್ಲಿ ನಡೆದ ಗೋಕಾಕ್‌ ಚಳವಳಿಯ ಸಂದರ್ಭದಲ್ಲಿ ವರನಟ ಡಾ.ರಾಜ್‌ ಕುಮಾರ್‌ ಭಾಗವಹಿಸಿದ್ದ ದೊಡ್ಡಬಳ್ಳಾಪುರದಲ್ಲಿ ನಡೆದ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಪಾಟೀಲ ಪುಟ್ಟಪ್ಪ ಅವರು ಸಹ ಭಾಗವಹಿಸಿದ್ದರು. ಡಾ.ರಾಜ್‌ಕುಮಾರ್‌ ಅವರು ಗೋಕಾಕ್‌ ಚಳವಳಿಯ ಹೋರಾಟಕ್ಕೆ ಬರಲು ಪಾಟೀಲ ಪುಟ್ಟಪ್ಪ ಅವರ ಪಾತ್ರ ಮುಖ್ಯವಾಗಿದೆ ಎನ್ನುತ್ತಾರೆ ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ.

ಗೋಕಾಕ್‌ ಚಳವಳಿಯ ಕುರಿತು ಸ್ಮರಿಸಿದ ಅವರು, ಗೋಕಾಕ್‌ ಚಳವಳಿಯ ಜಾಗೃತಿ ಸಭೆಗಳು ರಾಜ್ಯದ ಯಾವ ನಗರಗಳಲ್ಲಿ ನಡೆಯಬೇಕು ಎನ್ನುವ ಕುರಿತು ಸ್ಥಳ, ದಿನಾಂಕ ನಿಗದಿಪಡಿಸಲು ಮೈಸೂರಿನಲ್ಲಿ ನಡೆದ ಸಭೆಯಲ್ಲಿ ಡಾ.ವೆಂಕಟರೆಡ್ಡಿ, ಟಿ.ಎನ್‌ .ಪ್ರಭುದೇವ್‌ ಭಾಗವಹಿಸಿದ್ದೇವು. ನಮ್ಮೂರಿನಲ್ಲೂ ಸಭೆ ನಡೆಸಬೇಕು ಎಂದು ಕೇಳುತಿದ್ದಂತೆ, ಗಂಡುಮೆಟ್ಟಿನ ನಾಡು ಧಾರವಾಡದ ನಂತರ ಕನ್ನಡದ ಕೆಲಸಗಳಿಗೆ ದೊಡ್ಡಬಳ್ಳಾಪುರ ಹೋರಾಟಕ್ಕೆ ಹೆಸರಾದ ಎರಡನೇ ನಗರ. ಅಲ್ಲಿ ಸಭೆ ನಡೆಸದೆ ಹೋದರೆ ನೀವು ಬಿಡುತ್ತೀರಾ ಎಂದು ಪಾಟೀಲ ಪುಟ್ಟಪ್ಪ ಅವರು ಹೇಳಿದ್ದನ್ನು ನೆನಪು ಮಾಡಿಕೊಂಡರು. ನಮ್ಮೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿ ಶಿಕ್ಷಣದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವುದರ ಪ್ರಾಮುಖ್ಯತೆ ಕುರಿತು ಹೇಳಿದ್ದ ಮಾತುಗಳೂ ಸ್ಮರಣೀಯವಾಗಿವೆ.

ಮಾರ್ಗದರ್ಶಕರು: ಗೋಕಾಕ್‌ ಚಳುವಳಿಯ ನಂತರವೂ ಹಲವಾರು ಕನ್ನಡಪರ ಹೋರಾಟದ ಸಂದರ್ಭಗಳಲ್ಲಿ ಅವರನ್ನು ಹತ್ತಿರದಿಂದ ಕಂಡು ಮಾತನಾಡುವ ಅವಕಾಶ ದೊರೆತಿದ್ದು ನಮ್ಮ ಭಾಗ್ಯವಾಗಿದೆ. ಡಾ.ಎಂ.ಚಿದಾನಂದಮೂರ್ತಿ, ಚಂಪಾ, ವಾಟಾಳ್‌ ನಾಗರಾಜ್‌ ಇಂತಹ ಹೋರಾಟಗಾರ ಮಾರ್ಗದರ್ಶನದ ಮಾತುಗಳೆ ನಮ್ಮೂರಿನಲ್ಲಿ ಭಾಷೆ, ಸ್ಥಳೀಯರಿಗೆ ಉದ್ಯೋಗಕ್ಕಾಗಿ ನಡೆದ ಹೋರಾಟಗಳಿಗೆ ಸ್ಫೂರ್ತಿಯಾಗಿವೆ ಎಂದರು.

ಶ್ರದ್ಧಾಂಜಲಿ: ಸೋಮವಾರ ನಿಧನರಾದ ಹಿರಿಯ ಸಾಹಿತಿ, ಪತ್ರಕರ್ತ, ಪಾಟೀಲ ಪುಟ್ಟಪ್ಪ ಅವರಿಗೆ ನಗರದ ಕನ್ನಡ ಜಾಗೃತ ಭವನದಲ್ಲಿ ಕನ್ನಡಪರ ಸಂಘಟನೆಗಳ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕನ್ನಡ ಮಾತನಾಡುವ ಎಲ್ಲರೂ ಒಂದು ಆಡಳಿತದಲ್ಲಿ ಇರಬೇಕು ಎಂದು ಸದಾ ಕನಸು ಕಾಣುತ್ತ ನನಸು ಮಾಡಿದವರು ಪಾಪು. ಸಾಹಿತಿಯಾಗಿ ಕನ್ನಡಪರ ಹೋರಾಟಗಾರರಾಗಿ, ಪತ್ರಕರ್ತರಾಗಿ ಪಾಟೀಲ ಪುಟ್ಟಪ್ಪ ವರು ಕನ್ನಡ ನಾಡಿಗೆ ನೀಡಿರುವ ಕೊಡುಗೆ ಅನನ್ಯ. ಏಕೀಕರಣ ಚಳವಳಿ, ಗೋಕಾಕ್‌ ಚಳವಳಿಗಳಲ್ಲಿ ಪಾಟೀಲ ಪುಟ್ಟಪ್ಪ ಅವರ ಪಾತ್ರ ಸ್ಮರಣಿಯ ಎಂದು ಸಭೆಯಲ್ಲಿ ಸ್ಮರಿಸಲಾಯಿತು.

ಶ್ರದ್ಧಾಂಜಲಿ ಸಭೆಯಲ್ಲಿ ಕನ್ನಡ ಜಾಗೃತ ಪರಿಷತ್‌ ಅಧ್ಯಕ್ಷ ಡಿ.ವಿ.ಅಶ್ವಥಪ್ಪ, ಕಾರ್ಯದರ್ಶಿ ಟಿ.ಎನ್‌.ಪ್ರಭುದೇವ್‌, ಕನ್ನಡ ಪಕ್ಷದ ತಾಲೂಕು ಅಧ್ಯಕ್ಷ ಸಂಜೀವ್‌ ನಾಯಕ್‌, ಪ್ರಧಾನ ಕಾರ್ಯದರ್ಶಿ ಅಂಜನೇಯ, ಪರಮೇಶ್‌,ಪ್ರಕಾಶ್‌ ರಾವ್‌, ವೆಂಕಟೇಶ್‌, ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಸು.ನರಸಿಂಹಮೂರ್ತಿ, ಸುರೇಶ್‌ ರಾವ್‌, ತಿಮ್ಮರಾಜ್, ಆರ್‌.ಕೆಂಪರಾಜ್, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಆರ್‌.ಚಂದ್ರತೇಜಸ್ವಿ, ಕರವೇ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ ಮತ್ತಿತರರಿದ್ದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.